ಪಟ್ಟಣ ಆಸ್ಪತ್ರೆಯಲ್ಲಿ ನಿತ್ಯ 200 ರಿಂದ 300 ಹೊರ ರೋಗಿಗಳು ಬರುತ್ತಿದ್ದರು. ಆದರೆ, ಈಗ ಸಾರ್ವಜನಿಕರು ಹೆಚ್ಚೆಚ್ಚು ಕೊರೊನಾ ಕುರಿತು ಜಾಗೃತಿ ವಹಿಸುತ್ತಿರುವುದರಿಂದ 100 ರಿಂದ 150 ಜನ ಮಾತ್ರ ಬರುತ್ತಿದ್ದಾರೆ. ಸಾಮಾನ್ಯ ನೆಗಡಿ, ಕೆಮ್ಮು, ಜ್ವರ ಇದ್ದರೂ ತುಂಬಾ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಅಂತಹವರಿಗೆ ನಮ್ಮ ಆಸ್ಪತ್ರೆಯ ಎಲ್ಲ ಸಿಬ್ಬಂದಿ ಚಿಕಿತ್ಸೆ ನೀಡಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಮಕ್ಕಳಲ್ಲಿ ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡರೆ ಪೋಷಕರು ನಿರ್ಲಕ್ಷ್ಯ ವಹಿಸದೇ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಬಂದು ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.