<p><strong>ಜನವಾಡ</strong>: ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು.</p>.<p>ಜಿಲ್ಲೆ ಹಾಗೂ ನೆರೆ ರಾಜ್ಯಗಳ ಭಕ್ತರು ಶ್ರದ್ಧಾ ಭಕ್ತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು.</p>.<p>ಪ್ರತಿ ವರ್ಷ ಅನಂತನ ಹುಣ್ಣಿಮೆ ಅಥವಾ ಜೋಕುಮಾರ ಹುಣ್ಣಿಮೆ ಸಂದರ್ಭದಲ್ಲಿ ಶಂಭುಲಿಂಗೇಶ್ವರ ರಥೋತ್ಸವ, ಜಾತ್ರೆ ನಡೆಯುವ ಸಂಪ್ರದಾಯ ಇದೆ. ಈ ವರ್ಷ ಕೋವಿಡ್19 ಕಾರಣ ಜಾತ್ರೆಗೆ ಅವಕಾಶ ಇರಲಿಲ್ಲ.</p>.<p>ಹುಣ್ಣಿಮೆ ಮುನ್ನಾದಿನ ಪಾದಯಾತ್ರೆ ಕೈಗೊಳ್ಳುವ ಸಂಪ್ರದಾಯದ ನಿಮಿತ್ತ ಬಹುತೇಕ ಭಕ್ತರು ಪಾದಯಾತ್ರೆಯಲ್ಲಿ ಬಂದು ಶಂಭುಲಿಂಗೇಶ್ವರ ಹಾಗೂ ಬಸಮ್ಮ ತಾಯಿ ಅವರ ಗದ್ದುಗೆಯ ದರ್ಶನ ಪಡೆದರು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<p>ಎನ್.ಬಿ. ರೆಡ್ಡಿ ಗುರೂಜಿ, ಡಿವೈಎಸ್ಪಿ ಬಸವೇಶ್ವರ ಹೀರಾ, ಚಿಟಗುಪ್ಪ ಸಿಪಿಐ ಶರಣಬಸಪ್ಪ ಭಜಂತ್ರಿ, ಶಿವಕುಮಾರ ಸ್ವಾಮಿ, ಶ್ರೀಕಾಂತ ಪಾಟೀಲ, ಮಾರುತಿರಾವ್ ತಾಂದಳೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ</strong>: ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು.</p>.<p>ಜಿಲ್ಲೆ ಹಾಗೂ ನೆರೆ ರಾಜ್ಯಗಳ ಭಕ್ತರು ಶ್ರದ್ಧಾ ಭಕ್ತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು.</p>.<p>ಪ್ರತಿ ವರ್ಷ ಅನಂತನ ಹುಣ್ಣಿಮೆ ಅಥವಾ ಜೋಕುಮಾರ ಹುಣ್ಣಿಮೆ ಸಂದರ್ಭದಲ್ಲಿ ಶಂಭುಲಿಂಗೇಶ್ವರ ರಥೋತ್ಸವ, ಜಾತ್ರೆ ನಡೆಯುವ ಸಂಪ್ರದಾಯ ಇದೆ. ಈ ವರ್ಷ ಕೋವಿಡ್19 ಕಾರಣ ಜಾತ್ರೆಗೆ ಅವಕಾಶ ಇರಲಿಲ್ಲ.</p>.<p>ಹುಣ್ಣಿಮೆ ಮುನ್ನಾದಿನ ಪಾದಯಾತ್ರೆ ಕೈಗೊಳ್ಳುವ ಸಂಪ್ರದಾಯದ ನಿಮಿತ್ತ ಬಹುತೇಕ ಭಕ್ತರು ಪಾದಯಾತ್ರೆಯಲ್ಲಿ ಬಂದು ಶಂಭುಲಿಂಗೇಶ್ವರ ಹಾಗೂ ಬಸಮ್ಮ ತಾಯಿ ಅವರ ಗದ್ದುಗೆಯ ದರ್ಶನ ಪಡೆದರು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<p>ಎನ್.ಬಿ. ರೆಡ್ಡಿ ಗುರೂಜಿ, ಡಿವೈಎಸ್ಪಿ ಬಸವೇಶ್ವರ ಹೀರಾ, ಚಿಟಗುಪ್ಪ ಸಿಪಿಐ ಶರಣಬಸಪ್ಪ ಭಜಂತ್ರಿ, ಶಿವಕುಮಾರ ಸ್ವಾಮಿ, ಶ್ರೀಕಾಂತ ಪಾಟೀಲ, ಮಾರುತಿರಾವ್ ತಾಂದಳೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>