ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಭಿಯಾನಕ್ಕೆ ಚಾಲನೆ ನೀಡುವರು. ಪ್ರಜಾಪಿತಾ ಬ್ರಹ್ಮಕುಮಾರಿ ಕೇಂದ್ರ ಪಾವನಧಾಮದ ಸಂಚಾಲಕಿ ಬಿ.ಕೆ ಪ್ರತಿಮಾ ಬಹೆನ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ ಬಾಬು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ್ ಹಾಗೂ ಶಾಹೀನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಭಾಗವಹಿಸುವರು.