<p><strong>ಬಸವಕಲ್ಯಾಣ</strong>: ‘ಗುರು ಆದೇಶ ನೀಡದೆ ದಾರಿ ತೋರುತ್ತಾನೆ. ದೇವರಕ್ಕಿಂತಲೂ ಕಡಿಮೆಯಲ್ಲ’ ಎಂದು ಮುಗುಳಖೋಡ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.</p>.<p>ತಾಲ್ಲೂಕಿನ ಮಂಠಾಳದ ಗುರುಲಿಂಗೇಶ್ವರ ಚೌಕಿಮಠದಲ್ಲಿ ಗುರುವಾರ ಆಯೋಜಿಸಿದ್ದ ಅಭಿನವ ಚನ್ನಬಸವ ಸ್ವಾಮೀಜಿ ಅವರ ಪಟ್ಟಾಧಿಕಾರದ ವಾರ್ಷಿಕೋತ್ಸವ ಮತ್ತು ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಮಾನವೀಯ ಮೌಲ್ಯ ಹೊಂದಿರುವುದೇ ಶರಣ ಸಂಸ್ಕೃತಿ. ಇದರ ಪ್ರಕಾರ ಗುರು ಶಿಷ್ಯರ ಸಂಬಂಧ ಮೇಲು ಕೀಳು ಅಲ್ಲ. ತಾಯಿ ಮತ್ತು ಮಗುವಿನ ಮಧ್ಯದ ಮಮತೆಯ ಭಾವನೆ ಹೊಂದಿರುತ್ತದೆ’ ಎಂದರು. </p>.<p>ತ್ರಿಪುರಾಂತ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಮಾತನಾಡಿ, ‘ಧರ್ಮ ಮಾರ್ಗದಲ್ಲಿ ನಡೆದರೆ ಜೀವನದಲ್ಲಿ ಶಾಂತಿ, ನೆಮ್ಮದಿ ದೊರಕುತ್ತದೆ’ ಎಂದರು.</p>.<p>ವಿಧಾನಪರಿಷತ್ ಮಾಜಿ ಸದಸ್ಯ ವಿಜಯಸಿಂಗ್, ಸಾಹಿತಿ ಸೋಮನಾಥ ಯಾಳವಾರ ಮಾತನಾಡಿದರು.</p>.<p>ಅಭಿನವ ಚನ್ನಬಸವ ಸ್ವಾಮೀಜಿ, ಭರತನೂರು ಚಿಕ್ಕ ಗುರುನಂಜೇಶ್ವರ ಸ್ವಾಮೀಜಿ, ಮುಖಂಡ ಶಿವಕುಮಾರ ಶೆಟಗಾರ್, ಕಾಶಪ್ಪ ಚಕ್ಕೆರೆ, ಗಜಾನಂದ ಕುಕ್ಕಾಪಾಟೀಲ ಮಾತನಾಡಿದರು. ಮಠದ ಕುರಿತು ರಚಿಸಿದ ಹಾಡುಗಳ ಧ್ವನಿಸುರುಳಿ ಬಿಡುಗಡೆ ಮಾಡಲಾಯಿತು.</p>.<p>ಇದಕ್ಕೂ ಮೊದಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಲಸೂರ ಶಿವಾನಂದ ಸ್ವಾಮೀಜಿ ಅವರಿಗೆ ‘ಗುರುಲಿಂಗ ಧರ್ಮ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾಲ್ಕಿ ಗುರುಬಸವ ಪಟ್ಟದ್ದೇವರು. ಸಾಯಗಾಂವ ಶಿವಾನಂದ ದೇವರು, ಅಭಿನವ ಚನ್ನಬಸವ ಸ್ವಾಮೀಜಿ ಹಾಗೂ ಗಣ್ಯರು ಪಾಲ್ಗೊಂಡಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ‘ಗುರು ಆದೇಶ ನೀಡದೆ ದಾರಿ ತೋರುತ್ತಾನೆ. ದೇವರಕ್ಕಿಂತಲೂ ಕಡಿಮೆಯಲ್ಲ’ ಎಂದು ಮುಗುಳಖೋಡ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.</p>.<p>ತಾಲ್ಲೂಕಿನ ಮಂಠಾಳದ ಗುರುಲಿಂಗೇಶ್ವರ ಚೌಕಿಮಠದಲ್ಲಿ ಗುರುವಾರ ಆಯೋಜಿಸಿದ್ದ ಅಭಿನವ ಚನ್ನಬಸವ ಸ್ವಾಮೀಜಿ ಅವರ ಪಟ್ಟಾಧಿಕಾರದ ವಾರ್ಷಿಕೋತ್ಸವ ಮತ್ತು ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಮಾನವೀಯ ಮೌಲ್ಯ ಹೊಂದಿರುವುದೇ ಶರಣ ಸಂಸ್ಕೃತಿ. ಇದರ ಪ್ರಕಾರ ಗುರು ಶಿಷ್ಯರ ಸಂಬಂಧ ಮೇಲು ಕೀಳು ಅಲ್ಲ. ತಾಯಿ ಮತ್ತು ಮಗುವಿನ ಮಧ್ಯದ ಮಮತೆಯ ಭಾವನೆ ಹೊಂದಿರುತ್ತದೆ’ ಎಂದರು. </p>.<p>ತ್ರಿಪುರಾಂತ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಮಾತನಾಡಿ, ‘ಧರ್ಮ ಮಾರ್ಗದಲ್ಲಿ ನಡೆದರೆ ಜೀವನದಲ್ಲಿ ಶಾಂತಿ, ನೆಮ್ಮದಿ ದೊರಕುತ್ತದೆ’ ಎಂದರು.</p>.<p>ವಿಧಾನಪರಿಷತ್ ಮಾಜಿ ಸದಸ್ಯ ವಿಜಯಸಿಂಗ್, ಸಾಹಿತಿ ಸೋಮನಾಥ ಯಾಳವಾರ ಮಾತನಾಡಿದರು.</p>.<p>ಅಭಿನವ ಚನ್ನಬಸವ ಸ್ವಾಮೀಜಿ, ಭರತನೂರು ಚಿಕ್ಕ ಗುರುನಂಜೇಶ್ವರ ಸ್ವಾಮೀಜಿ, ಮುಖಂಡ ಶಿವಕುಮಾರ ಶೆಟಗಾರ್, ಕಾಶಪ್ಪ ಚಕ್ಕೆರೆ, ಗಜಾನಂದ ಕುಕ್ಕಾಪಾಟೀಲ ಮಾತನಾಡಿದರು. ಮಠದ ಕುರಿತು ರಚಿಸಿದ ಹಾಡುಗಳ ಧ್ವನಿಸುರುಳಿ ಬಿಡುಗಡೆ ಮಾಡಲಾಯಿತು.</p>.<p>ಇದಕ್ಕೂ ಮೊದಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಲಸೂರ ಶಿವಾನಂದ ಸ್ವಾಮೀಜಿ ಅವರಿಗೆ ‘ಗುರುಲಿಂಗ ಧರ್ಮ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾಲ್ಕಿ ಗುರುಬಸವ ಪಟ್ಟದ್ದೇವರು. ಸಾಯಗಾಂವ ಶಿವಾನಂದ ದೇವರು, ಅಭಿನವ ಚನ್ನಬಸವ ಸ್ವಾಮೀಜಿ ಹಾಗೂ ಗಣ್ಯರು ಪಾಲ್ಗೊಂಡಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>