<p><strong>ಜನವಾಡ:</strong> ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಸ್ಮರಣಾರ್ಥ ನಾಲ್ಕನೇ ಮುಕ್ತ ಕ್ರಿಕೆಟ್ ಟೂರ್ನಿ ಬೀದರ್ ತಾಲ್ಲೂಕಿನ ಸಾತೋಳಿಯಲ್ಲಿ ಮಂಗಳವಾರ ಆರಂಭಗೊಂಡಿತು.</p>.<p>ಟೂರ್ನಿಯ ಆಯೋಜಕರೂ ಆದ ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಮುಖಂಡ ಚಂದ್ರಾಸಿಂಗ್ ಬ್ಯಾಟ್ ಬೀಸುವ ಮೂಲಕ ಟೂರ್ನಿಗೆ ಚಾಲನೆ ನೀಡಿದರು.</p>.<p>‘ಎನ್.ಧರ್ಮಸಿಂಗ್ ಅವರು ಶಾಸಕ, ಸಂಸದ, ಸಚಿವ ಹಾಗೂ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಬಡವರು, ದೀನ ದಲಿತರು, ಶೋಷಿತರು ಸೇರಿದಂತೆ ಸರ್ವರ ಏಳಿಗೆಗಾಗಿ ನಾನಾ ಯೋಜನೆಗಳನ್ನು ಜಾರಿಗೊಳಿಸಿದ್ದರು’ ಎಂದು ಅವರು ತಿಳಿಸಿದರು.</p>.<p>‘ಧರ್ಮಸಿಂಗ್ ಅವರ ಜನ್ಮದಿನದ ಸಂದರ್ಭದಲ್ಲಿ ಪ್ರತಿ ವರ್ಷ ಅವರ ಸ್ಮರಣಾರ್ಥ ಕ್ರಿಕೆಟ್ ಟೂರ್ನಿ ಆಯೋಜಿಸುತ್ತ ಬರಲಾಗುತ್ತಿದೆ. ಈ ಮೂಲಕ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಪ್ರೋತ್ಸಾಹವನ್ನೂ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಟೂರ್ನಿಯಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಹಾಗೂ ₹ 25 ಸಾವಿರ ನಗದು ಮತ್ತು ರನ್ನರ್ ಅಪ್ ತಂಡಕ್ಕೆ ₹15 ಸಾವಿರ ನಗದು ಬಹುಮಾನ ಕೊಡಲಾಗುವುದು’ ಎಂದು ಹೇಳಿದರು.</p>.<p>‘ಲೀಗ್ ಹಂತದಿಂದ ಫೈನಲ್ವರೆಗೂ ಪ್ರತಿ ಪಂದ್ಯದ ಉತ್ತಮ ಆಟಗಾರನಿಗೆ ಪಂದ್ಯಪುರುಷ, ಸರಣಿ ಶ್ರೇಷ್ಠ, ಟೂರ್ನಿಯ ಅತ್ಯುತ್ತಮ ಬ್ಯಾಟ್ಸ್ಮನ್, ಬೌಲರ್ ಹಾಗೂ ಫೀಲ್ಡರ್ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಅಫ್ರೋಜ್ಖಾನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ಬರೂರ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಅಜಮತ್ ಪಟೇಲ್, ಪರ್ವೇಜ್ ಕಮಲ್ ಹಾಗೂ ಗೌಸೊದ್ದಿನ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ:</strong> ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಸ್ಮರಣಾರ್ಥ ನಾಲ್ಕನೇ ಮುಕ್ತ ಕ್ರಿಕೆಟ್ ಟೂರ್ನಿ ಬೀದರ್ ತಾಲ್ಲೂಕಿನ ಸಾತೋಳಿಯಲ್ಲಿ ಮಂಗಳವಾರ ಆರಂಭಗೊಂಡಿತು.</p>.<p>ಟೂರ್ನಿಯ ಆಯೋಜಕರೂ ಆದ ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಮುಖಂಡ ಚಂದ್ರಾಸಿಂಗ್ ಬ್ಯಾಟ್ ಬೀಸುವ ಮೂಲಕ ಟೂರ್ನಿಗೆ ಚಾಲನೆ ನೀಡಿದರು.</p>.<p>‘ಎನ್.ಧರ್ಮಸಿಂಗ್ ಅವರು ಶಾಸಕ, ಸಂಸದ, ಸಚಿವ ಹಾಗೂ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಬಡವರು, ದೀನ ದಲಿತರು, ಶೋಷಿತರು ಸೇರಿದಂತೆ ಸರ್ವರ ಏಳಿಗೆಗಾಗಿ ನಾನಾ ಯೋಜನೆಗಳನ್ನು ಜಾರಿಗೊಳಿಸಿದ್ದರು’ ಎಂದು ಅವರು ತಿಳಿಸಿದರು.</p>.<p>‘ಧರ್ಮಸಿಂಗ್ ಅವರ ಜನ್ಮದಿನದ ಸಂದರ್ಭದಲ್ಲಿ ಪ್ರತಿ ವರ್ಷ ಅವರ ಸ್ಮರಣಾರ್ಥ ಕ್ರಿಕೆಟ್ ಟೂರ್ನಿ ಆಯೋಜಿಸುತ್ತ ಬರಲಾಗುತ್ತಿದೆ. ಈ ಮೂಲಕ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಪ್ರೋತ್ಸಾಹವನ್ನೂ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಟೂರ್ನಿಯಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಹಾಗೂ ₹ 25 ಸಾವಿರ ನಗದು ಮತ್ತು ರನ್ನರ್ ಅಪ್ ತಂಡಕ್ಕೆ ₹15 ಸಾವಿರ ನಗದು ಬಹುಮಾನ ಕೊಡಲಾಗುವುದು’ ಎಂದು ಹೇಳಿದರು.</p>.<p>‘ಲೀಗ್ ಹಂತದಿಂದ ಫೈನಲ್ವರೆಗೂ ಪ್ರತಿ ಪಂದ್ಯದ ಉತ್ತಮ ಆಟಗಾರನಿಗೆ ಪಂದ್ಯಪುರುಷ, ಸರಣಿ ಶ್ರೇಷ್ಠ, ಟೂರ್ನಿಯ ಅತ್ಯುತ್ತಮ ಬ್ಯಾಟ್ಸ್ಮನ್, ಬೌಲರ್ ಹಾಗೂ ಫೀಲ್ಡರ್ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ ಅಫ್ರೋಜ್ಖಾನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ಬರೂರ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಅಜಮತ್ ಪಟೇಲ್, ಪರ್ವೇಜ್ ಕಮಲ್ ಹಾಗೂ ಗೌಸೊದ್ದಿನ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>