<p><strong>ಬೀದರ್: </strong>ನಗರದ ಪ್ರತಾಪನಗರದಲ್ಲಿ ಇರುವ ಜನಸೇವಾ ಶಿಶು ಮಂದಿರ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಬುಧವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ಮಾತೆಯರು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಶ್ರೀಕೃಷ್ಣನ ತೊಟ್ಟಿಲು, ಭಕ್ತಿ ಗೀತಾ ಗಾಯನ ಮತ್ತಿತರ ಕಾರ್ಯಕ್ರಮಗಳು ಜರುಗಿದವು. ಶ್ರೀಕೃಷ್ಣ ಹಾಗೂ ರಾಧೆಯ ವೇಷ ಧರಿಸಿದ್ದ ಇಬ್ಬರು ಚಿಣ್ಣರು ಎಲ್ಲರ ಗಮನ ಸೆಳೆದರು.</p>.<p>ಶಾಲೆಯ ಆಡಳಿತಾಧಿಕಾರಿ ಸೌಭಾಗ್ಯವತಿ ಮಾತನಾಡಿ, ‘ಕೊರೊನಾ ಸೋಂಕಿನ ಕಾರಣ ಈ ಬಾರಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಶ್ರೀಕೃಷ್ಣ ಸತ್ಯ ಹಾಗೂ ಧರ್ಮದ ರಕ್ಷಕನಾಗಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಶ್ರೀಕೃಷ್ಣನ ತತ್ವಗಳನ್ನು ಪಾಲಿಸಬೇಕು’ ಎಂದು ಹೇಳಿದರು.</p>.<p>‘ಶ್ರೀಕೃಷ್ಣ ಹಾಗೂ ಮಹಾ ಪುರುಷರ ಜಯಂತಿಗಳ ಆಚರಣೆಯಿಂದ ಮಕ್ಕಳಿಗೆ ಭಾರತೀಯ ಶ್ರೇಷ್ಠ ಸಂಸ್ಕೃತಿಯನ್ನು ಅರಿಯಲು ಸಾಧ್ಯವಾಗುತ್ತದೆ. ಸುಸಂಸ್ಕೃತ ಪ್ರಜೆಯಾಗಿ ರೂಪುಗೊಳ್ಳಲು ಸಹ ನೆರವಾಗುತ್ತದೆ’ ಎಂದು ತಿಳಿಸಿದರು.</p>.<p>‘ಶಾಲೆಯಲ್ಲಿ 16 ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಶ್ರೀಕೃಷ್ಣನ ಸಂದೇಶಗಳನ್ನು ಎಲ್ಲರಿಗೂ ತಲುಪಿಸುವುದೇ ಇದರ ಉದ್ದೇಶ ಆಗಿದೆ’ ಎಂದು ಹೇಳಿದರು.</p>.<p>‘ಶಾಲೆಯಲ್ಲಿ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ಕೊಡಲಾಗುತ್ತಿದೆ. ನೈತಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಹೇಳಿಕೊಡಲಾಗುತ್ತಿದೆ. ಮಕ್ಕಳನ್ನು ಆದರ್ಶ ಪ್ರಜೆಗಳನ್ನಾಗಿ ರೂಪಿಸಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಮುಖ್ಯ ಶಿಕ್ಷಕಿ ನೀಲಮ್ಮ ಚಾಮರೆಡ್ಡಿ ಸ್ವಾಗತಿಸಿದರು. ಬಸಮ್ಮ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ನಗರದ ಪ್ರತಾಪನಗರದಲ್ಲಿ ಇರುವ ಜನಸೇವಾ ಶಿಶು ಮಂದಿರ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಬುಧವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ಮಾತೆಯರು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಶ್ರೀಕೃಷ್ಣನ ತೊಟ್ಟಿಲು, ಭಕ್ತಿ ಗೀತಾ ಗಾಯನ ಮತ್ತಿತರ ಕಾರ್ಯಕ್ರಮಗಳು ಜರುಗಿದವು. ಶ್ರೀಕೃಷ್ಣ ಹಾಗೂ ರಾಧೆಯ ವೇಷ ಧರಿಸಿದ್ದ ಇಬ್ಬರು ಚಿಣ್ಣರು ಎಲ್ಲರ ಗಮನ ಸೆಳೆದರು.</p>.<p>ಶಾಲೆಯ ಆಡಳಿತಾಧಿಕಾರಿ ಸೌಭಾಗ್ಯವತಿ ಮಾತನಾಡಿ, ‘ಕೊರೊನಾ ಸೋಂಕಿನ ಕಾರಣ ಈ ಬಾರಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಶ್ರೀಕೃಷ್ಣ ಸತ್ಯ ಹಾಗೂ ಧರ್ಮದ ರಕ್ಷಕನಾಗಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಶ್ರೀಕೃಷ್ಣನ ತತ್ವಗಳನ್ನು ಪಾಲಿಸಬೇಕು’ ಎಂದು ಹೇಳಿದರು.</p>.<p>‘ಶ್ರೀಕೃಷ್ಣ ಹಾಗೂ ಮಹಾ ಪುರುಷರ ಜಯಂತಿಗಳ ಆಚರಣೆಯಿಂದ ಮಕ್ಕಳಿಗೆ ಭಾರತೀಯ ಶ್ರೇಷ್ಠ ಸಂಸ್ಕೃತಿಯನ್ನು ಅರಿಯಲು ಸಾಧ್ಯವಾಗುತ್ತದೆ. ಸುಸಂಸ್ಕೃತ ಪ್ರಜೆಯಾಗಿ ರೂಪುಗೊಳ್ಳಲು ಸಹ ನೆರವಾಗುತ್ತದೆ’ ಎಂದು ತಿಳಿಸಿದರು.</p>.<p>‘ಶಾಲೆಯಲ್ಲಿ 16 ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಶ್ರೀಕೃಷ್ಣನ ಸಂದೇಶಗಳನ್ನು ಎಲ್ಲರಿಗೂ ತಲುಪಿಸುವುದೇ ಇದರ ಉದ್ದೇಶ ಆಗಿದೆ’ ಎಂದು ಹೇಳಿದರು.</p>.<p>‘ಶಾಲೆಯಲ್ಲಿ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ಕೊಡಲಾಗುತ್ತಿದೆ. ನೈತಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಹೇಳಿಕೊಡಲಾಗುತ್ತಿದೆ. ಮಕ್ಕಳನ್ನು ಆದರ್ಶ ಪ್ರಜೆಗಳನ್ನಾಗಿ ರೂಪಿಸಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಮುಖ್ಯ ಶಿಕ್ಷಕಿ ನೀಲಮ್ಮ ಚಾಮರೆಡ್ಡಿ ಸ್ವಾಗತಿಸಿದರು. ಬಸಮ್ಮ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>