‘ಜೈಶ್ರೀರಾಮ್’ ಹಾಡು ಹಚ್ಚಿರುವುದಕ್ಕೆ ಹಿಂದೂ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ಜಿಹಾದಿಗಳ ವಿರುದ್ಧ ಕ್ರಮ ಜರುಗಿಸಬೇಕು. ವಿದ್ಯಾಮಂದಿರದಲ್ಲಿ ಈ ರೀತಿಯ ಮತೀಯ ದಾಳಿ ನಡೆಸಿರುವುದು ನಾಗರೀಕ ಸಮಾಜ ಒಪ್ಪುವುದಿಲ್ಲ. ಜಿಲ್ಲಾ ಆಡಳಿತ ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಜಿಹಾದ್ ವಿದ್ಯಾರ್ಥಿಗಳ ಹಿನ್ನೆಲೆಯನ್ನು ಶೋಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶ್ರೀರಾಮ ಸೇನೆಯ ಮುಖಂಡ ಈಶ್ವರ ಸಿಂಗ್ ಠಾಕೂರ್ ಆಗ್ರಹಿಸಿದ್ದಾರೆ.