<p><strong>ಭಾಲ್ಕಿ:</strong> ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ್ಯಾಂಕ್ ಗಳಿಸಿದ್ದ ಪಟ್ಟಣದ ಸೂರ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೇವಿ ಮಲ್ಲಿಕಾರ್ಜುನ ಸೀತಾ ಅವರು ಮರು ಮೌಲ್ಯಮಾಪನದ ಬಳಿಕ 3ನೇ ರ್ಯಾಂಕ್ ಪಡೆದಿದ್ದಾರೆ.</p>.<p>ದೇವಿ ಅವರು ಮೊದಲು ಶೇ99.36 ರಷ್ಟು ಅಂಕ ಗಳಿಸಿದ್ದರು. ಅವರಿಗೆ ಹಿಂದಿ ವಿಷಯದಲ್ಲಿ 98 ಅಂಕಗಳು ಬಂದಿದ್ದವು. ಮರು ಮೌಲ್ಯಮಾಪನದಲ್ಲಿ 2 ಅಂಕ ಹೆಚ್ಚಾಗಿ 100ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿಯ ಒಟ್ಟು ಫಲಿತಾಂಶ ಶೇ99.68ಕ್ಕೆ ಏರಿಕೆಯಾಗಿದ್ದು ರ್ಯಾಂಕ್ನಲ್ಲೂ ಎರಡು ಸ್ಥಾನ ಮೇಲಕ್ಕೆ ಏರಿದ್ದಾರೆ.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದೇವಿ 625 ಅಂಕಗಳ ಪೈಕಿ 623 ಅಂಕ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ. ಫಲಿತಾಂಶದಲ್ಲಿ ಶಾಲೆ ಸತತ ಎರಡನೇ ವರ್ಷವೂ ಕಲಬುರಗಿ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಶಾಲೆಯ ಅಧ್ಯಕ್ಷ ಸಂತೋಷ ಖಂಡ್ರೆ ತಿಳಿಸಿದ್ದಾರೆ.</p>.<p>ದೇವಿ ಅವರ ಸಾಧನೆಗೆ ಸಂತೋಷ ಖಂಡ್ರೆ, ಶಾಲೆಯ ಕಾರ್ಯದರ್ಶಿ ಉಷಾ ಖಂಡ್ರೆ, ಪ್ರಾಚಾರ್ಯ ಅನಿಲ್ ಪಾಟೀಲ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ್ಯಾಂಕ್ ಗಳಿಸಿದ್ದ ಪಟ್ಟಣದ ಸೂರ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೇವಿ ಮಲ್ಲಿಕಾರ್ಜುನ ಸೀತಾ ಅವರು ಮರು ಮೌಲ್ಯಮಾಪನದ ಬಳಿಕ 3ನೇ ರ್ಯಾಂಕ್ ಪಡೆದಿದ್ದಾರೆ.</p>.<p>ದೇವಿ ಅವರು ಮೊದಲು ಶೇ99.36 ರಷ್ಟು ಅಂಕ ಗಳಿಸಿದ್ದರು. ಅವರಿಗೆ ಹಿಂದಿ ವಿಷಯದಲ್ಲಿ 98 ಅಂಕಗಳು ಬಂದಿದ್ದವು. ಮರು ಮೌಲ್ಯಮಾಪನದಲ್ಲಿ 2 ಅಂಕ ಹೆಚ್ಚಾಗಿ 100ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿಯ ಒಟ್ಟು ಫಲಿತಾಂಶ ಶೇ99.68ಕ್ಕೆ ಏರಿಕೆಯಾಗಿದ್ದು ರ್ಯಾಂಕ್ನಲ್ಲೂ ಎರಡು ಸ್ಥಾನ ಮೇಲಕ್ಕೆ ಏರಿದ್ದಾರೆ.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದೇವಿ 625 ಅಂಕಗಳ ಪೈಕಿ 623 ಅಂಕ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ. ಫಲಿತಾಂಶದಲ್ಲಿ ಶಾಲೆ ಸತತ ಎರಡನೇ ವರ್ಷವೂ ಕಲಬುರಗಿ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಶಾಲೆಯ ಅಧ್ಯಕ್ಷ ಸಂತೋಷ ಖಂಡ್ರೆ ತಿಳಿಸಿದ್ದಾರೆ.</p>.<p>ದೇವಿ ಅವರ ಸಾಧನೆಗೆ ಸಂತೋಷ ಖಂಡ್ರೆ, ಶಾಲೆಯ ಕಾರ್ಯದರ್ಶಿ ಉಷಾ ಖಂಡ್ರೆ, ಪ್ರಾಚಾರ್ಯ ಅನಿಲ್ ಪಾಟೀಲ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>