ತಮಗೆ ಬೇಕಾದವರಿಗೆ ಗುತ್ತಿಗೆ ಕೊಡಲು ನಿಯಮ ಉಲ್ಲಂಘಿಸಿ, ಟೆಂಡರ್ ಕರೆಯದೆ ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಾಗಲೇ ಭೂಮಿ ಪೂಜೆ ನೆರವೇರಿಸಲಾದ ಎಲ್ಲ ಕಾಮಗಾರಿಗಳನ್ನು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಆರಂಭಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಔರಾದ್ ಪಟ್ಟಣದಲ್ಲಿ ಶಂಕುಸ್ಥಾಪನೆ ನೆರವೇರಿಸಿರುವ ₹ 3.50 ಕೋಟಿ ವೆಚ್ಚದ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಇನ್ನೂ ಟೆಂಡರ್ ಆಗಿಲ್ಲ. ಆಡಳಿತಾತ್ಮಕ ಅನುಮೋದನೆ ಮಾತ್ರ ನೀಡಲಾಗಿದೆ. ಆದರೂ, ಸಚಿವರು ಗುತ್ತಿಗೆದಾರರನ್ನು ಗೊತ್ತುಪಡಿಸಿದ್ದಾರೆ ಎಂದು ದೀಪಕ ಪಾಟೀಲ ಚಾಂದೋರಿ ದೂರಿದ್ದಾರೆ.