ಎಪಿಎಂಸಿ ಕಾಯ್ದೆಗೆ ಮಾಡಲಾದ ತಿದ್ದುಪಡಿಯಲ್ಲಿ ರಾಜ್ಯ ಸರ್ಕಾರ ಎಪಿಎಂಸಿ ಮಾರುಕಟ್ಟೆಯ ಒಳಗೆ ವ್ಯಾಪಾರ ನಡೆಸುವವರಿಗೆ ಮಾತ್ರ ಶುಲ್ಕ ವಿಧಿಸಿ, ಹೊರಗೆ ನಡೆಯುವ ವ್ಯಾಪಾರಕ್ಕೆ ವಿನಾಯಿತಿ ಕಲ್ಪಿಸಿ ತಾರತಮ್ಯ ನೀತಿ ಅನುಸರಿಸಿದ್ದನ್ನು ವಿರೋಧಿಸಿ ಗಾಂಧಿಗಂಜ್ನಲ್ಲಿ 13 ದಿನಗಳ ಕಾಲ ವ್ಯಾಪಾರ, ವಹಿವಾಟು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿತ್ತು. ಮಾರುಕಟ್ಟೆಯಲ್ಲಿನ ವ್ಯಾಪಾರಕ್ಕೆ ಶೇ 1 ರಷ್ಟು ಶುಲ್ಕದಿಂದ ವಿನಾಯಿತಿ ಕಲ್ಪಿಸಬೇಕು. ಏಕರೂಪದ ಶುಲ್ಕ ಹಾಗೂ ನೀತಿಗಳನ್ನು ಜಾರಿಗೊಳಿಸಬೇಕು ಎಂದು ಬೇಡಿಕೆ ಮಂಡಿಸಲಾಗಿತ್ತು ಎಂದು ತಿಳಿಸಿದ್ದಾರೆ.