ಬೀದರ್: ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಆಗ್ರಹಿಸಿದ್ದಾರೆ.
ಕೇವಲ ಬೀದರ್ ನಗರದ ಎರಡು ಲಕ್ಷ ಜನರ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಅಥವಾ ಜನಪ್ರತಿನಿಧಿಗಳಿಗೆ ಹೆದರಿ ಸಂಕೀರ್ಣದ ಸ್ಥಳಕ್ಕೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಬಾರದು ಎಂದು ಹೇಳಿದ್ದಾರೆ.
ಜಿಲ್ಲೆಯ ಎಲ್ಲ ತಾಲ್ಲೂಕುಗಳ ಜನರಿಗೆ ಅನುಕೂಲ ಆಗುವ ಸ್ಥಳದಲ್ಲಿ ಸಂಕೀರ್ಣ ನಿರ್ಮಿಸಬೇಕು. ಒಂದು ತಿಂಗಳಲ್ಲಿ ಸ್ಥಳದ ನಿರ್ಧಾರ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.