<p><strong>ಬಸವಕಲ್ಯಾಣ</strong>: ರಾಜ್ಯಮಟ್ಟದ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟವು ನವೆಂಬರ್ 28ರಂದು ಜರುಗಲಿದೆ.</p>.<p>ನಗರದ ಅನುಭವ ಮಂಟಪದಲ್ಲಿ ಸೋಮವಾರ ನಡೆದ ಉತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ವಿಶ್ವ ಬಸವಧರ್ಮ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಪ್ರತಿವರ್ಷ ಮೂರು ದಿನಗಳವರೆಗೆ ಉತ್ಸವ ಜರುಗುತ್ತಿತ್ತು. ಕೋವಿಡ್ ಕಾರಣ ಈ ವರ್ಷ ಒಂದು ದಿನ ನಡೆಯಲಿದೆ. ಗೋಷ್ಠಿ, ಪ್ರಶಸ್ತಿ ಪ್ರದಾನ ಹಾಗೂ ಇತರೆ ಚಟುವಟಿಕೆಗಳು ನಡೆಯಲಿವೆ. ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಅವರು ಉತ್ಸವವನ್ನು ಉದ್ಘಾಟಿಸುವರು’ ಎಂದು ತಿಳಿಸಿದರು.</p>.<p>ಶಾಸಕ ಶರಣು ಸಲಗರ ಅವರನ್ನು ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಸತ್ಕರಿಸಲಾಯಿತು.</p>.<p>ಹುಲಸೂರ ಶಿವಾನಂದ ಸ್ವಾಮೀಜಿ, ಭಾಲ್ಕಿ ಗುರುಬಸವ ಪಟ್ಟದ್ದೇವರು, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಬಸವರಾಜ ಧನ್ನೂರ, ಶಿವರಾಜ ನರಶೆಟ್ಟಿ, ಶಶಿಕಾಂತ ದುರ್ಗೆ, ಜಯರಾಜ ಖಂಡ್ರೆ, ಡಾ.ಜಗನ್ನಾಥ ಹೆಬ್ಬಾಳೆ, ಗುರುನಾಥ ಗಡ್ಡೆ, ನವಲಿಂಗಕುಮಾರ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ರಾಜ್ಯಮಟ್ಟದ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟವು ನವೆಂಬರ್ 28ರಂದು ಜರುಗಲಿದೆ.</p>.<p>ನಗರದ ಅನುಭವ ಮಂಟಪದಲ್ಲಿ ಸೋಮವಾರ ನಡೆದ ಉತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ವಿಶ್ವ ಬಸವಧರ್ಮ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಪ್ರತಿವರ್ಷ ಮೂರು ದಿನಗಳವರೆಗೆ ಉತ್ಸವ ಜರುಗುತ್ತಿತ್ತು. ಕೋವಿಡ್ ಕಾರಣ ಈ ವರ್ಷ ಒಂದು ದಿನ ನಡೆಯಲಿದೆ. ಗೋಷ್ಠಿ, ಪ್ರಶಸ್ತಿ ಪ್ರದಾನ ಹಾಗೂ ಇತರೆ ಚಟುವಟಿಕೆಗಳು ನಡೆಯಲಿವೆ. ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಅವರು ಉತ್ಸವವನ್ನು ಉದ್ಘಾಟಿಸುವರು’ ಎಂದು ತಿಳಿಸಿದರು.</p>.<p>ಶಾಸಕ ಶರಣು ಸಲಗರ ಅವರನ್ನು ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಸತ್ಕರಿಸಲಾಯಿತು.</p>.<p>ಹುಲಸೂರ ಶಿವಾನಂದ ಸ್ವಾಮೀಜಿ, ಭಾಲ್ಕಿ ಗುರುಬಸವ ಪಟ್ಟದ್ದೇವರು, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಬಸವರಾಜ ಧನ್ನೂರ, ಶಿವರಾಜ ನರಶೆಟ್ಟಿ, ಶಶಿಕಾಂತ ದುರ್ಗೆ, ಜಯರಾಜ ಖಂಡ್ರೆ, ಡಾ.ಜಗನ್ನಾಥ ಹೆಬ್ಬಾಳೆ, ಗುರುನಾಥ ಗಡ್ಡೆ, ನವಲಿಂಗಕುಮಾರ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>