<p><strong>ಬೀದರ್: </strong>ಮಂದಾರ ಕಲಾವಿದರ ವೇದಿಕೆಯಿಂದ ಡಾ.ಎಂ.ಜಿ.ದೇಶಪಾಂಡೆ ಅವರ 69ನೇ ಜನ್ಮದಿನದ ಅಂಗವಾಗಿ ರಾಜ್ಯಮಟ್ಟದ ಕವಿಗೋಷ್ಠಿ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 21ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೃಷ್ಣ ರಿಜೆನ್ಸಿ ಸಭಾಂಗಣದಲ್ಲಿ ನಡೆಯಲಿದೆ.</p>.<p>ಉಪ ಪೊಲೀಸ್ ಅಧೀಕ್ಷಕ ಬಸವೇಶ್ವರ ಹೀರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಎನ್ ತಿಮ್ಮಪ್ಪ ಅಧ್ಯಕ್ಷತೆ ವಹಿಸುವರು. ಎನ್.ಬಿ.ರೆಡ್ಡಿ ಗುರೂಜಿ ಸಾನ್ನಿಧ್ಯ ವಹಿಸುವರು.</p>.<p>ಸಾರ್ವಜನಿಕ ಗ್ರಂಥಾಲಯ ನಿರ್ದೇಶಕ ಡಾ.ಸತೀಶಮಾರ ಹೊಸಮನಿ, ಮೈಸೂರಿನ ಕವಿ ಜಯಪ್ಪ ಹೊನ್ನಾಳಿ, ಖ್ಯಾತ ಕವಯಿತ್ರಿ ಕಾವ್ಯಶ್ರೀ ಮಹಾಗಾಂವಕರ್, ರಾಜಾಚರ್ಯ, ಹಾಮಾ ಸತೀಶ, ಜಗನ್ನಾಥ್ ಹೆಬ್ಬಾಳೆ, ಸುರೇಶ್ ಚನಶೆಟ್ಟಿ, ಡಾ.ಸಿ.ಆನಂದರಾವ್, ಡಾ.ಎಂಆರ್ ನಾಗರಾಜರಾವ್, ಸಂಗಮೇಶ್ವರ ಜ್ಯಾಂತೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.</p>.<p>ಕವಿಗೋಷ್ಠಿಯಲ್ಲಿ ಮುಂಬೈ, ಬೆಂಗಳೂರು, ಧಾರವಾಡದ ಕವಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಮಂದಾರ ಕಲಾವಿದರ ವೇದಿಕೆಯಿಂದ ಡಾ.ಎಂ.ಜಿ.ದೇಶಪಾಂಡೆ ಅವರ 69ನೇ ಜನ್ಮದಿನದ ಅಂಗವಾಗಿ ರಾಜ್ಯಮಟ್ಟದ ಕವಿಗೋಷ್ಠಿ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 21ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೃಷ್ಣ ರಿಜೆನ್ಸಿ ಸಭಾಂಗಣದಲ್ಲಿ ನಡೆಯಲಿದೆ.</p>.<p>ಉಪ ಪೊಲೀಸ್ ಅಧೀಕ್ಷಕ ಬಸವೇಶ್ವರ ಹೀರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಎನ್ ತಿಮ್ಮಪ್ಪ ಅಧ್ಯಕ್ಷತೆ ವಹಿಸುವರು. ಎನ್.ಬಿ.ರೆಡ್ಡಿ ಗುರೂಜಿ ಸಾನ್ನಿಧ್ಯ ವಹಿಸುವರು.</p>.<p>ಸಾರ್ವಜನಿಕ ಗ್ರಂಥಾಲಯ ನಿರ್ದೇಶಕ ಡಾ.ಸತೀಶಮಾರ ಹೊಸಮನಿ, ಮೈಸೂರಿನ ಕವಿ ಜಯಪ್ಪ ಹೊನ್ನಾಳಿ, ಖ್ಯಾತ ಕವಯಿತ್ರಿ ಕಾವ್ಯಶ್ರೀ ಮಹಾಗಾಂವಕರ್, ರಾಜಾಚರ್ಯ, ಹಾಮಾ ಸತೀಶ, ಜಗನ್ನಾಥ್ ಹೆಬ್ಬಾಳೆ, ಸುರೇಶ್ ಚನಶೆಟ್ಟಿ, ಡಾ.ಸಿ.ಆನಂದರಾವ್, ಡಾ.ಎಂಆರ್ ನಾಗರಾಜರಾವ್, ಸಂಗಮೇಶ್ವರ ಜ್ಯಾಂತೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.</p>.<p>ಕವಿಗೋಷ್ಠಿಯಲ್ಲಿ ಮುಂಬೈ, ಬೆಂಗಳೂರು, ಧಾರವಾಡದ ಕವಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>