ಬೀದರ್: ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿರುವ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾನೂನು ಪ್ರಕೋಷ್ಠದ ಜಿಲ್ಲಾ ಘಟಕದ ಸಂಚಾಲಕ ಸಂಜೀವಕುಮಾರ ಸಜ್ಜನ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿ ಮುಖಂಡರು ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.