ಬಸವಕಲ್ಯಾಣ: ನಗರದ ತ್ರಿಪುರಾಂತದಲ್ಲಿ ಅಂಗನವಾಡಿ ಕಾರ್ಯಕರ್ತೆ ವಿಜಯಕುಮಾರಿ ಅವರ ಕೊರಳಲ್ಲಿನ 50 ಗ್ರಾಂ ಚಿನ್ನಾಭರಣವನ್ನು ಅಪರಿಚಿತರು ದೋಚಿ ಪರಾರಿಯಾದ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ಈ ಘಟನೆ ನಡೆದಿದ್ದು ಅಂಗನವಾಡಿ ಕಾರ್ಯಕರ್ತೆ ಹಾಗೂ ಇನ್ನೊಬ್ಬ ಮಹಿಳೆ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಚಿನ್ನಾಭರಣ ದೋಚಲಾಗಿದೆ. ಒಟ್ಟು ₹ 2.40 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ.