<p><strong>ಬಸವಕಲ್ಯಾಣ</strong>: ‘ಶಾಸಕರಾಗಿದ್ದ ಬಿ.ನಾರಾಯಣರಾವ್ ಅವರು 30 ತಿಂಗಳಲ್ಲಿ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ಗೆ ಬಲ ತಂದಿವೆ. ಇದರಿಂದ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಗೆಲುವು ನಿಶ್ಚಿತವಾಗಿದೆ’ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.</p>.<p>ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಸ್ಲಿಂ ಹಾಗೂ ಇತರೆ ಸಮುದಾಯದವರು ಕಾಂಗ್ರೆಸ್ ಬೆಂಬಲಿ ಸುತ್ತಿದ್ದಾರೆ. ಎಐಎಂಐಎಂನ ನಗರಸಭೆ ಸದಸ್ಯರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಸ್ಲಿಂ ಲೀಗ್ ಅಭ್ಯರ್ಥಿಯೂ ಬೆಂಬಲಿಸುವ ಭರವಸೆ ನೀಡಿದ್ದಾರೆ. ಆದ್ದರಿಂದ ಗೆಲುವು ಸುಲಭ ಆಗಲಿದೆ. ಕುಮಾರಸ್ವಾಮಿ ಅವರು ₹10 ಕೋಟಿ ಪಡೆದು ಮುಸ್ಲಿಂ ಅಭ್ಯರ್ಥಿ ನಿಲ್ಲಿಸಿರುವ ಬಗ್ಗೆ ಅವರು ಎಲ್ಲಿ ಕರೆದರೂ ಚರ್ಚೆಗೆ ಹೋಗಲು ಸಿದ್ಧನಿದ್ದೇನೆ’ ಎಂದರು.</p>.<p>ಎಐಎಂಐಎಂ ಮುಖಂಡರಾದ ರಾಮ ಗೋಡಬೋಲೆ, ಬಸವರಾಜ ಪಕ್ಷಕ್ಕೆ ಸೇರ್ಪಡೆಗೊಂಡರು.</p>.<p>ಶಾಸಕರಾದ ರಾಜಶೇಖರ ಪಾಟೀಲ, ರಿಜ್ವಾನ್ ಇರ್ಷಾದ್, ಪ್ರಿಯಾಂಕ್ ಖರ್ಗೆ, ವಿಜಯಸಿಂಗ್, ಪಕ್ಷದ ಯುವ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಹ್ಯಾರೀಸ್ ನಲಪಾಡ್, ಆನಂದ ದೇವಪ್ಪ, ದತ್ತು ಮೂಲಗೆ, ಗೌತಮ ನಾರಾಯಣರಾವ್, ಚಂದ್ರಕಾಂತ ಮೇತ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ‘ಶಾಸಕರಾಗಿದ್ದ ಬಿ.ನಾರಾಯಣರಾವ್ ಅವರು 30 ತಿಂಗಳಲ್ಲಿ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ಗೆ ಬಲ ತಂದಿವೆ. ಇದರಿಂದ ಅಭ್ಯರ್ಥಿ ಮಾಲಾ ಬಿ.ನಾರಾಯಣರಾವ್ ಗೆಲುವು ನಿಶ್ಚಿತವಾಗಿದೆ’ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು.</p>.<p>ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಸ್ಲಿಂ ಹಾಗೂ ಇತರೆ ಸಮುದಾಯದವರು ಕಾಂಗ್ರೆಸ್ ಬೆಂಬಲಿ ಸುತ್ತಿದ್ದಾರೆ. ಎಐಎಂಐಎಂನ ನಗರಸಭೆ ಸದಸ್ಯರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಸ್ಲಿಂ ಲೀಗ್ ಅಭ್ಯರ್ಥಿಯೂ ಬೆಂಬಲಿಸುವ ಭರವಸೆ ನೀಡಿದ್ದಾರೆ. ಆದ್ದರಿಂದ ಗೆಲುವು ಸುಲಭ ಆಗಲಿದೆ. ಕುಮಾರಸ್ವಾಮಿ ಅವರು ₹10 ಕೋಟಿ ಪಡೆದು ಮುಸ್ಲಿಂ ಅಭ್ಯರ್ಥಿ ನಿಲ್ಲಿಸಿರುವ ಬಗ್ಗೆ ಅವರು ಎಲ್ಲಿ ಕರೆದರೂ ಚರ್ಚೆಗೆ ಹೋಗಲು ಸಿದ್ಧನಿದ್ದೇನೆ’ ಎಂದರು.</p>.<p>ಎಐಎಂಐಎಂ ಮುಖಂಡರಾದ ರಾಮ ಗೋಡಬೋಲೆ, ಬಸವರಾಜ ಪಕ್ಷಕ್ಕೆ ಸೇರ್ಪಡೆಗೊಂಡರು.</p>.<p>ಶಾಸಕರಾದ ರಾಜಶೇಖರ ಪಾಟೀಲ, ರಿಜ್ವಾನ್ ಇರ್ಷಾದ್, ಪ್ರಿಯಾಂಕ್ ಖರ್ಗೆ, ವಿಜಯಸಿಂಗ್, ಪಕ್ಷದ ಯುವ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಹ್ಯಾರೀಸ್ ನಲಪಾಡ್, ಆನಂದ ದೇವಪ್ಪ, ದತ್ತು ಮೂಲಗೆ, ಗೌತಮ ನಾರಾಯಣರಾವ್, ಚಂದ್ರಕಾಂತ ಮೇತ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>