ತಾಲ್ಲೂಕಿನ ತಾಳಮಡಗಿ ಗ್ರಾಮದಲ್ಲಿ ಮನೆ, ಮನೆಗಳಿಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷ ಕೇವಲ ಅಧಿಕಾರಕ್ಕಾಗಿ ಸ್ವಾರ್ಥ ರಾಜಕಾರಣ ಮಾಡುತ್ತಿದ್ದು, ವಿಶ್ವ ಮೆಚ್ಚಿದ ನರೇಂದ್ರ ಮೋದಿ ಅವರ ಸಾಧನೆ ಬಗ್ಗೆ ಅವಹೇಳಕನಾರಿ ಮಾತುಗಳನ್ನು ಕಾಂಗ್ರೆಸ್ ನಾಯಕರು ಆಡುತ್ತಿರುವುದು ಅವರ ವ್ಯಕ್ತಿತ್ವದ ಪ್ರತಿಬಿಂಬವಾಗಿದೆ’ ಎಂದರು.