<p><strong>ಕಮಲನಗರ</strong>: ಕೋವಿಡ್ ನಿಯಂತ್ರಣಕ್ಕಾಗಿ ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.</p>.<p>ಗುರುವಾರ ಬೆಳಿಗ್ಗೆಯಿಂದ ಸಂಜೆವರೆಗೂ ಮುರ್ಕಿ, ತೋರಣಾ, ಠಾಣಾಕುಶನೂರು, ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ದಿಢೀರನೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದ ಹಿನ್ನಲೆಯಲ್ಲಿ ಕೆಲ ಜನರು ತೊಂದರೆ ಅನುಭವಿಸಿದರು.</p>.<p>‘ನ್ಯಾಯಬೆಲೆ ಅಂಗಡಿ, ದಿನಸಿ, ತರಕಾರಿ, ಹಣ್ಣು, ಹಾಲು, ಬೇಕರಿ ಉತ್ಪನ್ನಗಳು, ಮೀನು-ಮಾಂಸ ಮತ್ತು ಪ್ರಾಣಿಗಳ ಮೇವಿನ ಅಂಗಡಿ ಜತೆಗೆ ಕೃಷಿ ನಿರ್ಮಾಣ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆಯಲು ಸರ್ಕಾರ ಅವಕಾಶ ನೀಡಿದೆ. ಉಳಿದೆಲ್ಲಾ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ’ ಎಂದು ಪಿಎಸ್ಐ ನಂದಿನಿ ಎಸ್. ತಿಳಿಸಿದರು.</p>.<p>‘ಶಾಲೆ, ಕಾಲೇಜು, ತರಬೇತಿ ಸಂಸ್ಥೆಗಳು ಮುಚ್ಚಿರಲಿವೆ. ಆನ್ಲೈನ್ ತರಗತಿಗಳಿಗೆ ಮಾತ್ರ ಅವಕಾಶವಿದೆ. ಆದರೆ, ಕಮಲನಗರ, ಡೋಣಗಾಂವ್, ಮುಧೋಳ (ಬಿ), ಠಾಣಾಕುಶನೂರು ಗ್ರಾಮದ ಕೆಲ ಖಾಸಗಿ ಶಾಲೆಗಳು ನಡೆಯುತ್ತಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಪಾಲಕರಾದ ಗಣೇಶ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ಕೋವಿಡ್ ನಿಯಂತ್ರಣಕ್ಕಾಗಿ ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.</p>.<p>ಗುರುವಾರ ಬೆಳಿಗ್ಗೆಯಿಂದ ಸಂಜೆವರೆಗೂ ಮುರ್ಕಿ, ತೋರಣಾ, ಠಾಣಾಕುಶನೂರು, ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ದಿಢೀರನೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದ ಹಿನ್ನಲೆಯಲ್ಲಿ ಕೆಲ ಜನರು ತೊಂದರೆ ಅನುಭವಿಸಿದರು.</p>.<p>‘ನ್ಯಾಯಬೆಲೆ ಅಂಗಡಿ, ದಿನಸಿ, ತರಕಾರಿ, ಹಣ್ಣು, ಹಾಲು, ಬೇಕರಿ ಉತ್ಪನ್ನಗಳು, ಮೀನು-ಮಾಂಸ ಮತ್ತು ಪ್ರಾಣಿಗಳ ಮೇವಿನ ಅಂಗಡಿ ಜತೆಗೆ ಕೃಷಿ ನಿರ್ಮಾಣ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆಯಲು ಸರ್ಕಾರ ಅವಕಾಶ ನೀಡಿದೆ. ಉಳಿದೆಲ್ಲಾ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ’ ಎಂದು ಪಿಎಸ್ಐ ನಂದಿನಿ ಎಸ್. ತಿಳಿಸಿದರು.</p>.<p>‘ಶಾಲೆ, ಕಾಲೇಜು, ತರಬೇತಿ ಸಂಸ್ಥೆಗಳು ಮುಚ್ಚಿರಲಿವೆ. ಆನ್ಲೈನ್ ತರಗತಿಗಳಿಗೆ ಮಾತ್ರ ಅವಕಾಶವಿದೆ. ಆದರೆ, ಕಮಲನಗರ, ಡೋಣಗಾಂವ್, ಮುಧೋಳ (ಬಿ), ಠಾಣಾಕುಶನೂರು ಗ್ರಾಮದ ಕೆಲ ಖಾಸಗಿ ಶಾಲೆಗಳು ನಡೆಯುತ್ತಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಪಾಲಕರಾದ ಗಣೇಶ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>