‘ನ್ಯಾಯಬೆಲೆ ಅಂಗಡಿ, ದಿನಸಿ, ತರಕಾರಿ, ಹಣ್ಣು, ಹಾಲು, ಬೇಕರಿ ಉತ್ಪನ್ನಗಳು, ಮೀನು-ಮಾಂಸ ಮತ್ತು ಪ್ರಾಣಿಗಳ ಮೇವಿನ ಅಂಗಡಿ ಜತೆಗೆ ಕೃಷಿ ನಿರ್ಮಾಣ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆಯಲು ಸರ್ಕಾರ ಅವಕಾಶ ನೀಡಿದೆ. ಉಳಿದೆಲ್ಲಾ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ’ ಎಂದು ಪಿಎಸ್ಐ ನಂದಿನಿ ಎಸ್. ತಿಳಿಸಿದರು.