<p><strong>ಬೀದರ್:</strong> ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಲ್ಲಿ ಅಪೌಷ್ಟಿಕತೆ, ಗರ್ಭಿಣಿ ಹಾಗೂ ಬಾಣಂತಿಯರಲ್ಲಿ ರಕ್ತಹೀನತೆ ತಡೆಗೆ ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಎಸ್ ರತ್ನಾಕರ ಹೇಳಿದರು.</p>.<p>ನಗರದ ಮೈಲೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪೋಷಣ ಮಾಸಾಚರಣೆ ಮತ್ತು ಪ್ರಧಾನಮಂತ್ರಿ ಮಾತೃವಂದನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಅಂಗನವಾಡಿ ಕೇಂದ್ರಗಳ ಫಲಾನುಭವಿಗಳು ನಿತ್ಯ ಹಸಿ ಸೊಪ್ಪು, ಮೊಳಕೆ ಬರಿಸಿದ ಕಾಳು, ತರಕಾರಿ, ಮೊಟ್ಟೆ ಹಾಗೂ ಹಣ್ಣುಗಳನ್ನು ಸೇವಿಸಬೇಕು. ಇದರಿಂದ ಆರೋಗ್ಯ ವೃದ್ಧಿ ಸಾಧ್ಯವಿದೆ ಎಂದು ತಿಳಿಸಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಅಧ್ಯಕ್ಷೆ ಲಕ್ಷ್ಮಿ ದಂಡೆ ಮಾತನಾಡಿದರು.</p>.<p>ಮಾತೃ ವಂದನ, ಪೋಷಣ ಅಭಿಯಾನದ ಸಿಬ್ಬಂದಿ, ಅಂಗನವಾಡಿ ಮೇಲ್ವಿಚಾರಕರು, ಮಹಿಳಾ ಶಕ್ತಿ ಕೇಂದ್ರಗಳ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಫಲಾನುಭವಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಲ್ಲಿ ಅಪೌಷ್ಟಿಕತೆ, ಗರ್ಭಿಣಿ ಹಾಗೂ ಬಾಣಂತಿಯರಲ್ಲಿ ರಕ್ತಹೀನತೆ ತಡೆಗೆ ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಎಸ್ ರತ್ನಾಕರ ಹೇಳಿದರು.</p>.<p>ನಗರದ ಮೈಲೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪೋಷಣ ಮಾಸಾಚರಣೆ ಮತ್ತು ಪ್ರಧಾನಮಂತ್ರಿ ಮಾತೃವಂದನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಅಂಗನವಾಡಿ ಕೇಂದ್ರಗಳ ಫಲಾನುಭವಿಗಳು ನಿತ್ಯ ಹಸಿ ಸೊಪ್ಪು, ಮೊಳಕೆ ಬರಿಸಿದ ಕಾಳು, ತರಕಾರಿ, ಮೊಟ್ಟೆ ಹಾಗೂ ಹಣ್ಣುಗಳನ್ನು ಸೇವಿಸಬೇಕು. ಇದರಿಂದ ಆರೋಗ್ಯ ವೃದ್ಧಿ ಸಾಧ್ಯವಿದೆ ಎಂದು ತಿಳಿಸಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಅಧ್ಯಕ್ಷೆ ಲಕ್ಷ್ಮಿ ದಂಡೆ ಮಾತನಾಡಿದರು.</p>.<p>ಮಾತೃ ವಂದನ, ಪೋಷಣ ಅಭಿಯಾನದ ಸಿಬ್ಬಂದಿ, ಅಂಗನವಾಡಿ ಮೇಲ್ವಿಚಾರಕರು, ಮಹಿಳಾ ಶಕ್ತಿ ಕೇಂದ್ರಗಳ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಫಲಾನುಭವಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>