ಮಂಗಳವಾರ, ಮಾರ್ಚ್ 28, 2023
31 °C

ವಿಶೇಷ ಚೇತನರ ಕಲ್ಯಾಣಕ್ಕೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ವಿಶೇಷ ಚೇತನರ ಕಲ್ಯಾಣಕ್ಕೆ ಶ್ರಮಿಸಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಬಸವಪ್ರಕಾಶ ಕಲ್ಚರಲ್ ಮತ್ತು ವೆಲ್‍ಫೇರ್ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಕಲಾ ಪ್ರತಿಭೋತ್ಸವದಲ್ಲಿ ವಿಶೇಷ ಚೇತನ ಸಾಧಕರಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ವಿಶೇಷ ಚೇತನರು ಯಾವುದೇ ರೀತಿಯ ಕೀಳರಿಮೆ ಹೊಂದಿರಬಾರದು. ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಸಂಸ್ಥೆಯ ಪ್ರಮುಖರಾದ ದಿಲೀಪ್ ಕಾಡವಾದ್, ಎಸ್.ಬಿ. ಕುಚಬಾಳ್, ಮಲ್ಲಿಕಾರ್ಜುನ ಲದ್ದೇಕರ್, ಮಹೇಶಕುಮಾರ ಕುಂಬಾರ್, ರಾಜೋದ್ದಿನ್, ಆರ್.ಎಂ. ಯತ್ನಾಳ್ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು