<p><strong>ಚಿಟಗುಪ್ಪ (ಹುಮನಾಬಾದ್):</strong> ತಾಲ್ಲೂಕಿನ ಬಸೀರಾಪೂರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ, ನಾಗಪ್ಪ ಕರಕನ್ನಳ್ಳಿ ಅವರ ವರ್ಗಾವಣೆ ರದ್ದು ಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ಗ್ರಾಮದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p>.<p>ಬೆಳಿಗ್ಗೆ ಎಂದಿನಂತೆ ಶಾಲಾ ಮೈದಾನದಲ್ಲಿ ಪ್ರಾರ್ಥನೆ ಮಾಡಿದ್ದ 1- 8ನೇ ತರಗತಿಯ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿ ಕೊಠಡಿಯೊಳಗೆ ಕುಳಿತುಕೊಳ್ಳದೆ ಮತ್ತು ಶಿಕ್ಷಕರನ್ನು ಒಳಗಡೆ ಇರಲು ಬಿಡದೆ ಎಲ್ಲಾ ಶಿಕ್ಷಕರಿಗೆ ಹೊರಗಡೆ ಕಳಿಸಿ ಕೊಠಡಿಗಳಿಗೆ ಬೀಗ ಹಾಕಿದ್ದಾರೆ.</p>.<p>ತರಗತಿ ಬಹಿಷ್ಕರಿಸಿ ಕಾಂಪೌಂಡ್ ಹೊರಗೆ ಬಂದ ವಿದ್ಯಾರ್ಥಿಗಳು ಶಾಲಾ ಗೇಟ್ಗೆ ಬೀಗಹಾಕಿ ಗೇಟ್ ಬಳಿಯೆ ಕುಳಿತು ಯಾವುದೇ ಕಾರಣಕ್ಕೂ ನಮ್ಮ ನೆಚ್ಚಿನ ಕನ್ನಡ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಅವರನ್ನು ಬೇರೆಡೆ ವರ್ಗಾವಣೆ ಮಾಡಬಾರದು. ಅವರ ವರ್ಗಾವಣೆ ಆದೇಶವನ್ನು ಈ ಕೂಡಲೇ ರದ್ದುಗೊಳಿಸಬೇಕು. ಆದೇಶ ಹಿಂಪಡೆಯುವವರೆಗೂ ನಾವು ತರಗತಿ ಒಳಗೆ ಕುಳಿತುಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದರು.</p>.<p>ಈ ಮಧ್ಯೆ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾಗ ಪ್ರತಿಭಟನೆ ನಿಲ್ಲಿಸಿ ಎಂದಿನಂತೆ ತರಗತಿಗೆ ಹಾಜರಾದರು.</p>.<p>‘ಇಲ್ಲಿನ ಕನ್ನಡ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಅವರು 25 ವರ್ಷ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸರ್ಕಾರ ನಿಯಮ ಅನುಸಾರ ಹೆಚ್ಚುವರಿ ಶಿಕ್ಷಕರಾಗಿ ಆಯ್ಕೆಯಾದ ಪ್ರಯುಕ್ತ ಸೆ.11ರಂದು ತಾಲ್ಲೂಕಿನ ಪೋಲಕಪಳ್ಳಿ ಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಸರ್ಕಾರದ ನಿಯಮಾನುಸಾರ ವರ್ಗಾವಣೆ ಆಗಿದೆ. ಆದರೆ ವಿದ್ಯಾರ್ಥಿಗಳು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನೋಡಿದರೆ ಇಲ್ಲಿಂದ ಕಾಲ್ಕಿತ್ತಲು ಮನಸ್ಸು ಒಪ್ಪುತ್ತಿಲ್ಲ’ ಎಂದು ನೋವಿನಿಂದ ಹೇಳಿದರು. ಈ ಬಗ್ಗೆ ಮಾಹಿತಿ ಪಡೆಯಲು ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗೂಡಾಳ್ ಅವರಿಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. </p>.<div><blockquote>ಶಿಕ್ಷಕರ ವರ್ಗಾವಣೆ ಖಂಡಿಸಿ 15ರಂದು ಗ್ರಾಮಸ್ಥರಿಂದ ಶಾಲೆಯ ಎದುರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ </blockquote><span class="attribution">ಶ್ರೀಕಾಂತ ಪಾಟೀಲ ಬಸೀರಾಪೂರ್ ಗ್ರಾ.ಪಂ. ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ (ಹುಮನಾಬಾದ್):</strong> ತಾಲ್ಲೂಕಿನ ಬಸೀರಾಪೂರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ, ನಾಗಪ್ಪ ಕರಕನ್ನಳ್ಳಿ ಅವರ ವರ್ಗಾವಣೆ ರದ್ದು ಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ಗ್ರಾಮದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p>.<p>ಬೆಳಿಗ್ಗೆ ಎಂದಿನಂತೆ ಶಾಲಾ ಮೈದಾನದಲ್ಲಿ ಪ್ರಾರ್ಥನೆ ಮಾಡಿದ್ದ 1- 8ನೇ ತರಗತಿಯ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿ ಕೊಠಡಿಯೊಳಗೆ ಕುಳಿತುಕೊಳ್ಳದೆ ಮತ್ತು ಶಿಕ್ಷಕರನ್ನು ಒಳಗಡೆ ಇರಲು ಬಿಡದೆ ಎಲ್ಲಾ ಶಿಕ್ಷಕರಿಗೆ ಹೊರಗಡೆ ಕಳಿಸಿ ಕೊಠಡಿಗಳಿಗೆ ಬೀಗ ಹಾಕಿದ್ದಾರೆ.</p>.<p>ತರಗತಿ ಬಹಿಷ್ಕರಿಸಿ ಕಾಂಪೌಂಡ್ ಹೊರಗೆ ಬಂದ ವಿದ್ಯಾರ್ಥಿಗಳು ಶಾಲಾ ಗೇಟ್ಗೆ ಬೀಗಹಾಕಿ ಗೇಟ್ ಬಳಿಯೆ ಕುಳಿತು ಯಾವುದೇ ಕಾರಣಕ್ಕೂ ನಮ್ಮ ನೆಚ್ಚಿನ ಕನ್ನಡ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಅವರನ್ನು ಬೇರೆಡೆ ವರ್ಗಾವಣೆ ಮಾಡಬಾರದು. ಅವರ ವರ್ಗಾವಣೆ ಆದೇಶವನ್ನು ಈ ಕೂಡಲೇ ರದ್ದುಗೊಳಿಸಬೇಕು. ಆದೇಶ ಹಿಂಪಡೆಯುವವರೆಗೂ ನಾವು ತರಗತಿ ಒಳಗೆ ಕುಳಿತುಕೊಳ್ಳುವುದಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದರು.</p>.<p>ಈ ಮಧ್ಯೆ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾಗ ಪ್ರತಿಭಟನೆ ನಿಲ್ಲಿಸಿ ಎಂದಿನಂತೆ ತರಗತಿಗೆ ಹಾಜರಾದರು.</p>.<p>‘ಇಲ್ಲಿನ ಕನ್ನಡ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಅವರು 25 ವರ್ಷ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸರ್ಕಾರ ನಿಯಮ ಅನುಸಾರ ಹೆಚ್ಚುವರಿ ಶಿಕ್ಷಕರಾಗಿ ಆಯ್ಕೆಯಾದ ಪ್ರಯುಕ್ತ ಸೆ.11ರಂದು ತಾಲ್ಲೂಕಿನ ಪೋಲಕಪಳ್ಳಿ ಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಸರ್ಕಾರದ ನಿಯಮಾನುಸಾರ ವರ್ಗಾವಣೆ ಆಗಿದೆ. ಆದರೆ ವಿದ್ಯಾರ್ಥಿಗಳು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನೋಡಿದರೆ ಇಲ್ಲಿಂದ ಕಾಲ್ಕಿತ್ತಲು ಮನಸ್ಸು ಒಪ್ಪುತ್ತಿಲ್ಲ’ ಎಂದು ನೋವಿನಿಂದ ಹೇಳಿದರು. ಈ ಬಗ್ಗೆ ಮಾಹಿತಿ ಪಡೆಯಲು ಹಲವು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗೂಡಾಳ್ ಅವರಿಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. </p>.<div><blockquote>ಶಿಕ್ಷಕರ ವರ್ಗಾವಣೆ ಖಂಡಿಸಿ 15ರಂದು ಗ್ರಾಮಸ್ಥರಿಂದ ಶಾಲೆಯ ಎದುರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ </blockquote><span class="attribution">ಶ್ರೀಕಾಂತ ಪಾಟೀಲ ಬಸೀರಾಪೂರ್ ಗ್ರಾ.ಪಂ. ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>