ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಾದ್| ವಿದ್ಯಾರ್ಥಿನಿ ಸಾವು: ಆರೋಪಿಗಳ ಬಂಧನಕ್ಕೆ ಆಗ್ರಹ

Last Updated 9 ಫೆಬ್ರುವರಿ 2023, 6:46 IST
ಅಕ್ಷರ ಗಾತ್ರ

ಔರಾದ್: ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ನಡೆದ ವಿದ್ಯಾರ್ಥಿನಿ ಸಾವಿನ ಘಟನೆ ಖಂಡಿಸಿ ಇಲ್ಲಿಯ ಗೋರ ಸೇನಾ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಸೇನಾದ ತಾಲ್ಲೂಕು ಘಟಕದ ಅಧ್ಯಕ್ಷ ದಿನೇಶ ರಾಠೋಡ, ರಾಜಕುಮಾರ, ವಿವೇಕ ಪವಾರ್, ಮೋತಿರಾಮ ರಾಠೋಡ, ಗಣಪತಿ ರಾಠೋಡ, ರಮೇಶ ಚವಾಣ್, ದೇವಿದಾಸ ಜಾಧವ ಹಾಗೂ ಮತ್ತಿತರರು ಇಲ್ಲಿಯ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಬೇರೆ ಬೇರೆ ಕಡೆ ಈ ರೀತಿ ಬಾಲಕಿಯರು, ಶಾಲಾ–ಕಾಲೇಜು ವಿದ್ಯಾರ್ಥಿನಿಯರ ಕೊಲೆ ಪ್ರಕರಣಗಳು ನಡೆಯುತ್ತಿವೆ. ಸರ್ಕಾರ ಈ ವಿಷಯದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT