<p><strong>ಖಟಕಚಿಂಚೋಳಿ: </strong>ಸಮೀಪದ ದಾಡಗಿ ಗ್ರಾಮಕ್ಕೆ ಹೆಚ್ಚುವರಿ ಬಸ್ಗಳ ಓಡಾಟ ಹಾಗೂ ನಿರ್ದಿಷ್ಟ ಸಮಯ ನಿಗದಿಪಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆನಡೆಸಿದರು.</p>.<p>ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳುಬೆಳಿಗ್ಗೆ 7 ಗಂಟೆಗೆ ಬಸ್ ನಿಲ್ದಾಣಕ್ಕೆ ಬಂದರೂ ಬಸ್ಗಳು ಬಂದಿರುವುದಿಲ್ಲ. ಇದರಿಂದ ಕಾಲೇಜಿಗೆ ತಡವಾಗುತ್ತಿದ್ದು, ತರಗತಿತಯ ಪಾಠ ಕೇಳಲು ಆಗುತ್ತಿಲ್ಲ. ಬಹುತೇಕ ಸಯವನ್ನು ನಿಲ್ದಾಣದಲ್ಲಿ ಕಳೆಯುವಂತೆ ಆಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.</p>.<p>ವಿಳಂಬಕ್ಕೆ ಬೇಸತ್ತ ವಿದ್ಯಾರ್ಥಿಗಳು ಮೂರು ಗಂಟೆ ಪ್ರತಿಭಟನೆ ನಡೆಸಿ, ಭಾಲ್ಕಿಯ ಕೆಎಸ್ಆರ್ಟಿಸಿ ವ್ಯವಸ್ಥಾಪಕರ ಅಧೀನ ಅಧಿಕಾರಿಯ ಮೌಖಿಕ ಮನವಿ ಮೇರೆಗೆ ಪ್ರತಿಭಟನೆ ಹಿಂಪಡೆದರು.</p>.<p>ನಿಮುಂಗಡ ಹಣ ಪಾವತಿಸಿ ಪಾಸ್ ಕೂಡ ಪಡೆದುಕೊಂಡಿದ್ದೇವೆ. ಆದರೂ ಸಕಾಲಕ್ಕೆ ಬಸ್ಗಳು ಬರುತ್ತಿಲ್ಲ. ಬಸ್ ಪಾಸ್ ಇದ್ದು ಇಲ್ಲದಂತಾಗಿದೆಎಂದರು.</p>.<p>ಸಂಬಂಧ ಪಟ್ಟ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಬಸ್ ಓಡಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳ ಜತೆಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಬಿವಿಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ಧ ಜಾಡರ್ ಎಚ್ಚರಿಕೆ ನೀಡಿದ್ದಾರೆ.</p>.<p>ಪ್ರತಿ ಹಳ್ಳಿಗೂ ಬಸ್ ಸೇವೆ ಕಲ್ಪಿಸುವಂತೆ ಭಾಲ್ಕಿಯ ಘಟಕ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಇದುವರೆಗೂ ಸ್ಪಂದನೆ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದುಸಾಮಾಜಿಕ ಕಾರ್ಯಕರ್ತ ಭದ್ರು ಭವರಾ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ: </strong>ಸಮೀಪದ ದಾಡಗಿ ಗ್ರಾಮಕ್ಕೆ ಹೆಚ್ಚುವರಿ ಬಸ್ಗಳ ಓಡಾಟ ಹಾಗೂ ನಿರ್ದಿಷ್ಟ ಸಮಯ ನಿಗದಿಪಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆನಡೆಸಿದರು.</p>.<p>ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳುಬೆಳಿಗ್ಗೆ 7 ಗಂಟೆಗೆ ಬಸ್ ನಿಲ್ದಾಣಕ್ಕೆ ಬಂದರೂ ಬಸ್ಗಳು ಬಂದಿರುವುದಿಲ್ಲ. ಇದರಿಂದ ಕಾಲೇಜಿಗೆ ತಡವಾಗುತ್ತಿದ್ದು, ತರಗತಿತಯ ಪಾಠ ಕೇಳಲು ಆಗುತ್ತಿಲ್ಲ. ಬಹುತೇಕ ಸಯವನ್ನು ನಿಲ್ದಾಣದಲ್ಲಿ ಕಳೆಯುವಂತೆ ಆಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.</p>.<p>ವಿಳಂಬಕ್ಕೆ ಬೇಸತ್ತ ವಿದ್ಯಾರ್ಥಿಗಳು ಮೂರು ಗಂಟೆ ಪ್ರತಿಭಟನೆ ನಡೆಸಿ, ಭಾಲ್ಕಿಯ ಕೆಎಸ್ಆರ್ಟಿಸಿ ವ್ಯವಸ್ಥಾಪಕರ ಅಧೀನ ಅಧಿಕಾರಿಯ ಮೌಖಿಕ ಮನವಿ ಮೇರೆಗೆ ಪ್ರತಿಭಟನೆ ಹಿಂಪಡೆದರು.</p>.<p>ನಿಮುಂಗಡ ಹಣ ಪಾವತಿಸಿ ಪಾಸ್ ಕೂಡ ಪಡೆದುಕೊಂಡಿದ್ದೇವೆ. ಆದರೂ ಸಕಾಲಕ್ಕೆ ಬಸ್ಗಳು ಬರುತ್ತಿಲ್ಲ. ಬಸ್ ಪಾಸ್ ಇದ್ದು ಇಲ್ಲದಂತಾಗಿದೆಎಂದರು.</p>.<p>ಸಂಬಂಧ ಪಟ್ಟ ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಬಸ್ ಓಡಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳ ಜತೆಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಬಿವಿಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ಧ ಜಾಡರ್ ಎಚ್ಚರಿಕೆ ನೀಡಿದ್ದಾರೆ.</p>.<p>ಪ್ರತಿ ಹಳ್ಳಿಗೂ ಬಸ್ ಸೇವೆ ಕಲ್ಪಿಸುವಂತೆ ಭಾಲ್ಕಿಯ ಘಟಕ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಇದುವರೆಗೂ ಸ್ಪಂದನೆ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದುಸಾಮಾಜಿಕ ಕಾರ್ಯಕರ್ತ ಭದ್ರು ಭವರಾ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>