<p><strong>ಔರಾದ್:</strong> ‘ವಿದ್ಯಾರ್ಥಿಗಳಲ್ಲಿ ಸಾಧಿಸಬೇಕು ಎಂಬುವ ಹಂಬಲ ಇದ್ದರೆ, ಸಾಧಿಸುವ ಮಾರ್ಗ ಸುಲಭವಾಗಿರುತ್ತದೆ’ ಎಂದು ಪ್ರಾಂಶುಪಾಲ ಡಾ.ಮನ್ಮಥ ಡೋಳೆ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬಾದಲಗಾಂವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ‘ನಾಲಂದಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉಪನ್ಯಾಸ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.</p>.<p>ಮಹಾತ್ಮ ಗಾಂಧಿ, ಡಾ. ಬಿ.ಆರ್.ಅಂಬೇಡ್ಕರ್ ಸೇರಿದಂತೆ ಈ ದೇಶದಲ್ಲಿ ಆಗಿ ಹೋದ ಮಹಾತ್ಮರ ಚರಿತ್ರೆ ಅದ್ಭುತವಾಗಿದೆ. ಅದು ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು’ ಎಂದು ತಿಳಿಸಿದರು.</p>.<p>‘ಬಡತನ ಮನುಷ್ಯನಿಗೆ ಬಹಳ ದೊಡ್ಡ ಪಾಠ ಕಲಿಸುತ್ತದೆ. ವಿದ್ಯಾರ್ಥಿಗಳು ನಾವು ಬಡವರು ಎಂಬ ಕೊರಗು ಇಟ್ಟುಕೊಳ್ಳಬಾರದು. ಧೈರ್ಯದಿಂದ ಮುನ್ನುಗ್ಗಿದರೆ, ಮುಂದೊಂದು ದಿನ ನೀವು ದೇಶದ ದೊಡ್ಡ ವ್ಯಕ್ತಿಯಾಗುತ್ತೀರಿ’ ಎಂದು ಸಲಹೆ ನೀಡಿದರು.</p>.<p>ವಕೀಲ ಸುಧೀರ್ ಮಡಿವಾಳ ಮಾತನಾಡಿ,‘ಇದು ಮನುಷ್ಯ ಮಾಡಿದ ಕೆಟ್ಟ ವ್ಯವಸ್ಥೆ. ಲಂಚ ಕೊಡುವುದು ಮತ್ತು ಪಡೆಯುವುದು ಅಪರಾಧ. ಆದರೂ ಇದು ಎಲ್ಲೆಡೆ ತೀವ್ರವಾಗಿ ಹಬ್ಬುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಈ ದೇಶದ ಆಡಳಿತ ವ್ಯವಸ್ಥೆ ಸಂವಿಧಾನದ ಮೇಲೆ ನಿಂತಿದೆ. ಭ್ರಷ್ಟಾಚಾರ ಸೇರಿದಂತೆ ಸಮಾಜದಲ್ಲಿನ ಕೆಟ್ಟ ವ್ಯವಸ್ಥೆಗೆ ಇದರಲ್ಲಿ ಅವಕಾಶವಿಲ್ಲ. ಆದರೂ ಕೆಲವರು ಇದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಹೇಳಿದರು.</p>.<p>ಪ್ರಾಂಶುಪಾಲ ನವೀಲಕುಮಾರ ಉತ್ಕಾರ್,‘ದೇಶದ ಭವಿಷ್ಯ ವಿದ್ಯಾರ್ಥಿ ಮತ್ತು ಯುವ ಜನಾಂಗದ ಮೇಲೆ ನಿಂತಿದೆ. ಹೀಗಾಗಿ ಇವರ ಮೇಲೆ ಬಹುದೊಡ್ಡ ಹೊಣೆಗಾರಿಕೆ ಇದೆ. ದೇಶದಲ್ಲಿ ನಡೆಯುವ ಪ್ರತಿಯೊಂದು ಸಂಗತಿ ಸೂಕ್ಷ್ಮವಾಗಿ ಗಮನಿಸಿ ಆ ನಿಟ್ಟಿನಲ್ಲಿ ತಮ್ಮ ಹೊಣೆಗಾರಿಕೆ ನಿಭಾಯಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪತ್ರಕರ್ತ ಮನ್ಮಥಪ್ಪ ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ನಾಗುರಾವ, ಮುಖ್ಯ ಶಿಕ್ಷಕ ವಿಶ್ವನಾಥ ಗುರುಣೆ ಹಾಗೂ ಉಪನ್ಯಾಸಕ ನಾಗನಾಥ ಬಿರಾದಾರ ಇದ್ದರು.</p>.<p>ಉಪನ್ಯಾಸಕ ಗುಣವಂತ ಮಾಶೆಟ್ಟಿ ಸ್ವಾಗತಿಸಿದರು. ಯೋಜನಾಧಿಕಾರಿ ಮಲ್ಲಿಕಾರ್ಜುನ ಪೂಜಾರಿ ನಿರೂಪಿಸಿದರು. ರಾಜಕುಮಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ‘ವಿದ್ಯಾರ್ಥಿಗಳಲ್ಲಿ ಸಾಧಿಸಬೇಕು ಎಂಬುವ ಹಂಬಲ ಇದ್ದರೆ, ಸಾಧಿಸುವ ಮಾರ್ಗ ಸುಲಭವಾಗಿರುತ್ತದೆ’ ಎಂದು ಪ್ರಾಂಶುಪಾಲ ಡಾ.ಮನ್ಮಥ ಡೋಳೆ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬಾದಲಗಾಂವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ‘ನಾಲಂದಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉಪನ್ಯಾಸ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.</p>.<p>ಮಹಾತ್ಮ ಗಾಂಧಿ, ಡಾ. ಬಿ.ಆರ್.ಅಂಬೇಡ್ಕರ್ ಸೇರಿದಂತೆ ಈ ದೇಶದಲ್ಲಿ ಆಗಿ ಹೋದ ಮಹಾತ್ಮರ ಚರಿತ್ರೆ ಅದ್ಭುತವಾಗಿದೆ. ಅದು ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು’ ಎಂದು ತಿಳಿಸಿದರು.</p>.<p>‘ಬಡತನ ಮನುಷ್ಯನಿಗೆ ಬಹಳ ದೊಡ್ಡ ಪಾಠ ಕಲಿಸುತ್ತದೆ. ವಿದ್ಯಾರ್ಥಿಗಳು ನಾವು ಬಡವರು ಎಂಬ ಕೊರಗು ಇಟ್ಟುಕೊಳ್ಳಬಾರದು. ಧೈರ್ಯದಿಂದ ಮುನ್ನುಗ್ಗಿದರೆ, ಮುಂದೊಂದು ದಿನ ನೀವು ದೇಶದ ದೊಡ್ಡ ವ್ಯಕ್ತಿಯಾಗುತ್ತೀರಿ’ ಎಂದು ಸಲಹೆ ನೀಡಿದರು.</p>.<p>ವಕೀಲ ಸುಧೀರ್ ಮಡಿವಾಳ ಮಾತನಾಡಿ,‘ಇದು ಮನುಷ್ಯ ಮಾಡಿದ ಕೆಟ್ಟ ವ್ಯವಸ್ಥೆ. ಲಂಚ ಕೊಡುವುದು ಮತ್ತು ಪಡೆಯುವುದು ಅಪರಾಧ. ಆದರೂ ಇದು ಎಲ್ಲೆಡೆ ತೀವ್ರವಾಗಿ ಹಬ್ಬುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಈ ದೇಶದ ಆಡಳಿತ ವ್ಯವಸ್ಥೆ ಸಂವಿಧಾನದ ಮೇಲೆ ನಿಂತಿದೆ. ಭ್ರಷ್ಟಾಚಾರ ಸೇರಿದಂತೆ ಸಮಾಜದಲ್ಲಿನ ಕೆಟ್ಟ ವ್ಯವಸ್ಥೆಗೆ ಇದರಲ್ಲಿ ಅವಕಾಶವಿಲ್ಲ. ಆದರೂ ಕೆಲವರು ಇದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಹೇಳಿದರು.</p>.<p>ಪ್ರಾಂಶುಪಾಲ ನವೀಲಕುಮಾರ ಉತ್ಕಾರ್,‘ದೇಶದ ಭವಿಷ್ಯ ವಿದ್ಯಾರ್ಥಿ ಮತ್ತು ಯುವ ಜನಾಂಗದ ಮೇಲೆ ನಿಂತಿದೆ. ಹೀಗಾಗಿ ಇವರ ಮೇಲೆ ಬಹುದೊಡ್ಡ ಹೊಣೆಗಾರಿಕೆ ಇದೆ. ದೇಶದಲ್ಲಿ ನಡೆಯುವ ಪ್ರತಿಯೊಂದು ಸಂಗತಿ ಸೂಕ್ಷ್ಮವಾಗಿ ಗಮನಿಸಿ ಆ ನಿಟ್ಟಿನಲ್ಲಿ ತಮ್ಮ ಹೊಣೆಗಾರಿಕೆ ನಿಭಾಯಿಸಬೇಕು’ ಎಂದು ಸಲಹೆ ನೀಡಿದರು.</p>.<p>ಪತ್ರಕರ್ತ ಮನ್ಮಥಪ್ಪ ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ನಾಗುರಾವ, ಮುಖ್ಯ ಶಿಕ್ಷಕ ವಿಶ್ವನಾಥ ಗುರುಣೆ ಹಾಗೂ ಉಪನ್ಯಾಸಕ ನಾಗನಾಥ ಬಿರಾದಾರ ಇದ್ದರು.</p>.<p>ಉಪನ್ಯಾಸಕ ಗುಣವಂತ ಮಾಶೆಟ್ಟಿ ಸ್ವಾಗತಿಸಿದರು. ಯೋಜನಾಧಿಕಾರಿ ಮಲ್ಲಿಕಾರ್ಜುನ ಪೂಜಾರಿ ನಿರೂಪಿಸಿದರು. ರಾಜಕುಮಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>