<p><strong>ಖಟಕಚಿಂಚೋಳಿ</strong>: ಗ್ರಾಮದ ಕನ್ನಡ ಮತ್ತು ಉರ್ದು ಮಾಧ್ಯಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ.</p><p>ಶಾಲೆಯಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲಾ ಆವರಣದಲ್ಲಿದ್ದ ಎರಡು ಬೋರ್ವೆಲ್ಗಳೂ ಕೆಟ್ಟಿದ್ದರಿಂದ ಹದಿನೈದು ದಿನಗಳಿಂದ ಕುಡಿಯಲು, ಬಿಸಿಯೂಟದ ಅಡುಗೆ ಮಾಡಲು, ಶೌಚಾಲಯ ಬಳಕೆಗೆ ನೀರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.</p><p>‘ಶಾಲೆಯಲ್ಲಿ ನೀರು ಇಲ್ಲದಿರುವುದರಿಂದ ನಾವೆಲ್ಲರೂ ಮನೆಯಿಂದ ನೀರು ತರುತ್ತಿದ್ದೇವೆ. ಶೌಚಾಲಯ<br>ದಲ್ಲಿ ಹನಿ ನೀರು ಇಲ್ಲದಿರುವುದರಿಂದ ಗಬ್ಬು ವಾಸನೆ ಬರುತ್ತಿದೆ. ಶೌಚಕ್ಕೆ ಹೊರಗಡೆಯೂ ಹೋಗುವಂತಿಲ್ಲ. ದುರ್ವಾಸನೆಯಲ್ಲಿಯೇ ಮೂಗು ಮುಚ್ಚಿಕೊಂಡು ಶೌಚಕ್ಕೆ ಹೋಗುವಂತಾಗಿದೆ’ ಎಂದು ಪ್ರೌಢಶಾಲೆ ವಿದ್ಯಾರ್ಥಿನಿಯರು ಅಳಲು ತೋಡಿಕೊಳ್ಳುತ್ತಾರೆ.</p><p>‘ಶಾಲೆಯಲ್ಲಿ ಬೋರ್ವೆಲ್ ಕೆಟ್ಟು ಹೋಗಿ ಬಹಳ ದಿನಗಳಾಗಿವೆ. ಆದರೂ ಸಮಸ್ಯೆ ಬಗೆಹರಿಸಲು ಯಾರೂ ಮುಂದಾಗುತ್ತಿಲ್ಲ. ಇದರಿಂದ ಮಕ್ಕಳು ಸಂಕಷ್ಟ ಅನುಭವಿಸುತ್ತಿದ್ದಾರೆ. ತಕ್ಷಣವೇ ದುರಸ್ತಿಗೊಳಿಸಬೇಕು’ ಎಂದು ಪಾಲಕರು ಒತ್ತಾಯಿಸಿದ್ದಾರೆ.</p><p>‘ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಹಾಜರಾತಿಯಲ್ಲಿ ಇಳಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, ಕ್ಷೇತ್ರ ಶಿಕ್ಷಣಾಧಿಕಾರಿ ತಕ್ಷಣವೇ ಸಮಸ್ಯೆಯನ್ನು ಬಗೆಹರಿಸಲು ಕ್ರಮಕೈಗೊಳ್ಳಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ರೇವಣಸಿದ್ಧ ಜಾಡರ್ ಆಗ್ರಹಿಸಿದ್ದಾರೆ.</p><p>ಶಾಲೆಯಲ್ಲಿನ ನೀರಿನ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರವಾಣಿ ಕರೆ ಮಾಡಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.</p>.<h2>ಸುತ್ತಮುತ್ತಲಿನ ಮನೆಗಳಿಗೆ ತೆರಳುತ್ತೇವೆ’</h2><h2></h2><p>‘ಶಾಲೆಯಲ್ಲಿ ಕುಡಿಯಲು ನೀರಿಲ್ಲ. ನಾವೆಲ್ಲರೂ ಮಧ್ಯಾಹ್ನ ಊಟದ ನಂತರ ಶಾಲೆಯ ಸುತ್ತ ಮುತ್ತಲಿನ ಮನೆಗಳಿಗೆ ತೆರಳಿ ನೀರು ಕುಡಿಯುತ್ತಿದ್ದೇವೆ’ ಎಂದು ವಿದ್ಯಾರ್ಥಿ ಮಹಾಲಿಂಗ ಹೇಳಿದರು.</p><p>‘ಶಾಲೆಯಲ್ಲಿ ಬೋರವೆಲ್ ಕೆಟ್ಟಿರುವ ಬಗ್ಗೆ ಪಂಚಾಯಿತಿಯವರ ಗಮನಕ್ಕೆ ತರಲಾಗಿದೆ. ಆದರೆ, ಬೋರ್ವೆಲ್ ಭೂಮಿಯ ಆಳದಲ್ಲಿ ಸಿಲುಕಿರುವುದರಿಂದ ಹೊರಬರುತ್ತಿಲ್ಲ. ಒಂದೆರಡು ದಿನಗಳಲ್ಲಿ ದುರಸ್ತಿಗೊಳಿಸಲಾಗುವುದು’ ಎಂದು ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಜಕುಮಾರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<div><blockquote>ಶಾಲಾ ಆವರಣದಲ್ಲಿ ಹೊಸ ಬೋರ್ವೆಲ್ ಕೊರೆಸಲು ಶಾಸಕರು ಅಧಿಕಾರಿಗಳಿಗೆ ಸೂಚಿಸಬೇಕು </blockquote><span class="attribution">ರೇವಣಸಿದ್ಧ ಜಾಡರ್ಸಾ ಮಾಜಿಕ ಕಾರ್ಯಕರ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ</strong>: ಗ್ರಾಮದ ಕನ್ನಡ ಮತ್ತು ಉರ್ದು ಮಾಧ್ಯಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ.</p><p>ಶಾಲೆಯಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲಾ ಆವರಣದಲ್ಲಿದ್ದ ಎರಡು ಬೋರ್ವೆಲ್ಗಳೂ ಕೆಟ್ಟಿದ್ದರಿಂದ ಹದಿನೈದು ದಿನಗಳಿಂದ ಕುಡಿಯಲು, ಬಿಸಿಯೂಟದ ಅಡುಗೆ ಮಾಡಲು, ಶೌಚಾಲಯ ಬಳಕೆಗೆ ನೀರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.</p><p>‘ಶಾಲೆಯಲ್ಲಿ ನೀರು ಇಲ್ಲದಿರುವುದರಿಂದ ನಾವೆಲ್ಲರೂ ಮನೆಯಿಂದ ನೀರು ತರುತ್ತಿದ್ದೇವೆ. ಶೌಚಾಲಯ<br>ದಲ್ಲಿ ಹನಿ ನೀರು ಇಲ್ಲದಿರುವುದರಿಂದ ಗಬ್ಬು ವಾಸನೆ ಬರುತ್ತಿದೆ. ಶೌಚಕ್ಕೆ ಹೊರಗಡೆಯೂ ಹೋಗುವಂತಿಲ್ಲ. ದುರ್ವಾಸನೆಯಲ್ಲಿಯೇ ಮೂಗು ಮುಚ್ಚಿಕೊಂಡು ಶೌಚಕ್ಕೆ ಹೋಗುವಂತಾಗಿದೆ’ ಎಂದು ಪ್ರೌಢಶಾಲೆ ವಿದ್ಯಾರ್ಥಿನಿಯರು ಅಳಲು ತೋಡಿಕೊಳ್ಳುತ್ತಾರೆ.</p><p>‘ಶಾಲೆಯಲ್ಲಿ ಬೋರ್ವೆಲ್ ಕೆಟ್ಟು ಹೋಗಿ ಬಹಳ ದಿನಗಳಾಗಿವೆ. ಆದರೂ ಸಮಸ್ಯೆ ಬಗೆಹರಿಸಲು ಯಾರೂ ಮುಂದಾಗುತ್ತಿಲ್ಲ. ಇದರಿಂದ ಮಕ್ಕಳು ಸಂಕಷ್ಟ ಅನುಭವಿಸುತ್ತಿದ್ದಾರೆ. ತಕ್ಷಣವೇ ದುರಸ್ತಿಗೊಳಿಸಬೇಕು’ ಎಂದು ಪಾಲಕರು ಒತ್ತಾಯಿಸಿದ್ದಾರೆ.</p><p>‘ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಹಾಜರಾತಿಯಲ್ಲಿ ಇಳಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, ಕ್ಷೇತ್ರ ಶಿಕ್ಷಣಾಧಿಕಾರಿ ತಕ್ಷಣವೇ ಸಮಸ್ಯೆಯನ್ನು ಬಗೆಹರಿಸಲು ಕ್ರಮಕೈಗೊಳ್ಳಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ರೇವಣಸಿದ್ಧ ಜಾಡರ್ ಆಗ್ರಹಿಸಿದ್ದಾರೆ.</p><p>ಶಾಲೆಯಲ್ಲಿನ ನೀರಿನ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರವಾಣಿ ಕರೆ ಮಾಡಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.</p>.<h2>ಸುತ್ತಮುತ್ತಲಿನ ಮನೆಗಳಿಗೆ ತೆರಳುತ್ತೇವೆ’</h2><h2></h2><p>‘ಶಾಲೆಯಲ್ಲಿ ಕುಡಿಯಲು ನೀರಿಲ್ಲ. ನಾವೆಲ್ಲರೂ ಮಧ್ಯಾಹ್ನ ಊಟದ ನಂತರ ಶಾಲೆಯ ಸುತ್ತ ಮುತ್ತಲಿನ ಮನೆಗಳಿಗೆ ತೆರಳಿ ನೀರು ಕುಡಿಯುತ್ತಿದ್ದೇವೆ’ ಎಂದು ವಿದ್ಯಾರ್ಥಿ ಮಹಾಲಿಂಗ ಹೇಳಿದರು.</p><p>‘ಶಾಲೆಯಲ್ಲಿ ಬೋರವೆಲ್ ಕೆಟ್ಟಿರುವ ಬಗ್ಗೆ ಪಂಚಾಯಿತಿಯವರ ಗಮನಕ್ಕೆ ತರಲಾಗಿದೆ. ಆದರೆ, ಬೋರ್ವೆಲ್ ಭೂಮಿಯ ಆಳದಲ್ಲಿ ಸಿಲುಕಿರುವುದರಿಂದ ಹೊರಬರುತ್ತಿಲ್ಲ. ಒಂದೆರಡು ದಿನಗಳಲ್ಲಿ ದುರಸ್ತಿಗೊಳಿಸಲಾಗುವುದು’ ಎಂದು ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಜಕುಮಾರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.</p>.<div><blockquote>ಶಾಲಾ ಆವರಣದಲ್ಲಿ ಹೊಸ ಬೋರ್ವೆಲ್ ಕೊರೆಸಲು ಶಾಸಕರು ಅಧಿಕಾರಿಗಳಿಗೆ ಸೂಚಿಸಬೇಕು </blockquote><span class="attribution">ರೇವಣಸಿದ್ಧ ಜಾಡರ್ಸಾ ಮಾಜಿಕ ಕಾರ್ಯಕರ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>