<p>ಪ್ರಜಾವಾಣಿ ವಾರ್ತೆ</p>.<p>ಬೀದರ್: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ನಗರದ ಬಸವೇಶ್ವರ ಶಿಕ್ಷಣ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ’ನೆನಪಿನಂಗಳ’ದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.</p>.<p>2022-23ನೇ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರಾಗಿ ನೇಮಕ ಹೊಂದಿದ 52 ಜನರನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಸನ್ಮಾನಿಸಿದರು.</p>.<p>ಶಿಕ್ಷಣ ರಂಗದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠವಾದುದು. ಸಮಾಜ ಬದಲಾವಣೆ ಹಾಗೂ ನಿರ್ಮಾಣದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.</p>.<p>ಭಾಲ್ಕಿಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ, ಪ್ರಾಂಶುಪಾಲ ಮಲ್ಲಿಕಾರ್ಜುನ ಚ. ಕನಕಟ್ಟೆ, ಶಂಭುಲಿಂಗ ವಾಲದೊಡ್ಡಿ, ನಿವೃತ್ತ ಶಿಕ್ಷಣಾಧಿಕಾರಿ ಇನಾಯತ ಸಿಂಧೆ, ಶರಣಪ್ಪ ಮೂಲಗೆ, ಬಿ.ವಿ. ಭೂಮರಡ್ಡಿ ಕಾಲೇಜಿನ ಪ್ರಾಂಶುಪಾಲ ಪಿ.ವಿಠ್ಠಲರೆಡ್ಡಿ, ಉಪನ್ಯಾಸಕಿ ವೀಣಾ ಜಲಾದಿ ಹಾಜರಿದ್ದರು. </p>.<p>ಪಾಂಡುರಂಗ ಕುಂಬಾರ ಸ್ವಾಗತಿಸಿದರೆ, ಸಂತೋಷಕುಮಾರ ಸಜ್ಜನ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಬೀದರ್: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ನಗರದ ಬಸವೇಶ್ವರ ಶಿಕ್ಷಣ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ’ನೆನಪಿನಂಗಳ’ದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.</p>.<p>2022-23ನೇ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರಾಗಿ ನೇಮಕ ಹೊಂದಿದ 52 ಜನರನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಸನ್ಮಾನಿಸಿದರು.</p>.<p>ಶಿಕ್ಷಣ ರಂಗದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠವಾದುದು. ಸಮಾಜ ಬದಲಾವಣೆ ಹಾಗೂ ನಿರ್ಮಾಣದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.</p>.<p>ಭಾಲ್ಕಿಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ, ಪ್ರಾಂಶುಪಾಲ ಮಲ್ಲಿಕಾರ್ಜುನ ಚ. ಕನಕಟ್ಟೆ, ಶಂಭುಲಿಂಗ ವಾಲದೊಡ್ಡಿ, ನಿವೃತ್ತ ಶಿಕ್ಷಣಾಧಿಕಾರಿ ಇನಾಯತ ಸಿಂಧೆ, ಶರಣಪ್ಪ ಮೂಲಗೆ, ಬಿ.ವಿ. ಭೂಮರಡ್ಡಿ ಕಾಲೇಜಿನ ಪ್ರಾಂಶುಪಾಲ ಪಿ.ವಿಠ್ಠಲರೆಡ್ಡಿ, ಉಪನ್ಯಾಸಕಿ ವೀಣಾ ಜಲಾದಿ ಹಾಜರಿದ್ದರು. </p>.<p>ಪಾಂಡುರಂಗ ಕುಂಬಾರ ಸ್ವಾಗತಿಸಿದರೆ, ಸಂತೋಷಕುಮಾರ ಸಜ್ಜನ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>