<p><strong>ಬೀದರ್: </strong>‘ಸಾರ್ವಜನಿಕರು ಅಂಚೆ ಇಲಾಖೆಯ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬೇಕು’ ಎಂದು ಸಂಸದ ಭಗವಂತ ಖೂಬಾ ಸಲಹೆ ಮಾಡಿದರು.</p>.<p>ನಗರದ ಶಹಾಪುರ ಗೇಟ್ ಹತ್ತಿರದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ಆವರಣದಲ್ಲಿ ಬುಧವಾರ ನೂತನ ಅಂಚೆ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಚೆ ಇಲಾಖೆ ಉತ್ತಮ ಸೇವೆಗೆ ಹೆಸರಾಗಿದೆ. ವಿವಿಧ ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಡಿಜಿಟಲ್ ಇಂಡಿಯಾದ ಭಾಗವಾಗಿಯೇ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ಸ್ ಪೇಮೆಂಟ್ ಬ್ಯಾಂಕ್ ತೆರೆದಿದೆ. ವಿದ್ಯಾರ್ಥಿಗಳು ಈ ಬ್ಯಾಂಕ್ ಅನ್ನು ಬಳಸಿಕೊಂಡು ನಗದು ರಹಿತ ವ್ಯವಹಾರ ನಡೆಸಬೇಕು’ ಎಂದು ಅಂಚೆ ಇಲಾಖೆಯ ಪಾಸ್ಪೋರ್ಟ್ ಸೇವಾ ಕೇಂದ್ರದ ಅಧಿಕಾರಿ ಮಂಗಲಾ ಭಾಗವತ ಹೇಳಿದರು.</p>.<p>‘ಶಾಹೀನ್ ಕಾಲೇಜಿನಲ್ಲಿ ದೇಶದ ವಿವಿಧೆಡೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅಂಚೆ ಇಲಾಖೆಯು ಕಾಲೇಜು ಆವರಣದಲ್ಲಿ ಅಂಚೆ ಶಾಖೆ ತೆರೆದಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ್ ತಿಳಿಸಿದರು.</p>.<p>‘ಅಂಚೆ ಇಲಾಖೆಯು ಎಲ್ಲ ವರ್ಗದ ಜನರನ್ನು ದೃಷ್ಟಿಕೋನದಲ್ಲಿ ಇಟ್ಟುಕೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನ ಅವುಗಳ ಲಾಭ ಪಡೆಯಬೇಕು’ ಎಂದು ಹೇಳಿದರು.</p>.<p>ಬೀದರ್ ಅಂಚೆ ಅಧೀಕ್ಷಕ ವಿ. ನರಸಿಂಹರಾವ್ ಅವರು, ಸುಕನ್ಯಾ ಸಮೃದ್ಧಿ, ಉಳಿತಾಯ ಖಾತೆ, ಠೇವಣಿ ಖಾತೆ ಸೇರಿದಂತೆ ಅಂಚೆ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ. ಸಿದ್ರಾಮ, ಅಂಚೆ ನಿರೀಕ್ಷಕ ಇಂದ್ರೇಶ್, ಇಂಡಿಯಾ ಪೋಸ್ಟ್ಸ್ ಪೇಮೆಂಟ್ ಬ್ಯಾಂಕ್ ವ್ಯವಸ್ಥಾಪಕ ಮಿರ್ಜಾ ಬೇಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಸಾರ್ವಜನಿಕರು ಅಂಚೆ ಇಲಾಖೆಯ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬೇಕು’ ಎಂದು ಸಂಸದ ಭಗವಂತ ಖೂಬಾ ಸಲಹೆ ಮಾಡಿದರು.</p>.<p>ನಗರದ ಶಹಾಪುರ ಗೇಟ್ ಹತ್ತಿರದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ಆವರಣದಲ್ಲಿ ಬುಧವಾರ ನೂತನ ಅಂಚೆ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಚೆ ಇಲಾಖೆ ಉತ್ತಮ ಸೇವೆಗೆ ಹೆಸರಾಗಿದೆ. ವಿವಿಧ ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಡಿಜಿಟಲ್ ಇಂಡಿಯಾದ ಭಾಗವಾಗಿಯೇ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ಸ್ ಪೇಮೆಂಟ್ ಬ್ಯಾಂಕ್ ತೆರೆದಿದೆ. ವಿದ್ಯಾರ್ಥಿಗಳು ಈ ಬ್ಯಾಂಕ್ ಅನ್ನು ಬಳಸಿಕೊಂಡು ನಗದು ರಹಿತ ವ್ಯವಹಾರ ನಡೆಸಬೇಕು’ ಎಂದು ಅಂಚೆ ಇಲಾಖೆಯ ಪಾಸ್ಪೋರ್ಟ್ ಸೇವಾ ಕೇಂದ್ರದ ಅಧಿಕಾರಿ ಮಂಗಲಾ ಭಾಗವತ ಹೇಳಿದರು.</p>.<p>‘ಶಾಹೀನ್ ಕಾಲೇಜಿನಲ್ಲಿ ದೇಶದ ವಿವಿಧೆಡೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅಂಚೆ ಇಲಾಖೆಯು ಕಾಲೇಜು ಆವರಣದಲ್ಲಿ ಅಂಚೆ ಶಾಖೆ ತೆರೆದಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ್ ತಿಳಿಸಿದರು.</p>.<p>‘ಅಂಚೆ ಇಲಾಖೆಯು ಎಲ್ಲ ವರ್ಗದ ಜನರನ್ನು ದೃಷ್ಟಿಕೋನದಲ್ಲಿ ಇಟ್ಟುಕೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಜನ ಅವುಗಳ ಲಾಭ ಪಡೆಯಬೇಕು’ ಎಂದು ಹೇಳಿದರು.</p>.<p>ಬೀದರ್ ಅಂಚೆ ಅಧೀಕ್ಷಕ ವಿ. ನರಸಿಂಹರಾವ್ ಅವರು, ಸುಕನ್ಯಾ ಸಮೃದ್ಧಿ, ಉಳಿತಾಯ ಖಾತೆ, ಠೇವಣಿ ಖಾತೆ ಸೇರಿದಂತೆ ಅಂಚೆ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ. ಸಿದ್ರಾಮ, ಅಂಚೆ ನಿರೀಕ್ಷಕ ಇಂದ್ರೇಶ್, ಇಂಡಿಯಾ ಪೋಸ್ಟ್ಸ್ ಪೇಮೆಂಟ್ ಬ್ಯಾಂಕ್ ವ್ಯವಸ್ಥಾಪಕ ಮಿರ್ಜಾ ಬೇಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>