<p><strong>ಬೀದರ್:</strong> ಜೈ ಹಿಂದ್ ಸಂಘಟನೆಯಿಂದ ನಗರದ ಮಂಗಲಪೇಟ್ನಲ್ಲಿರುವ ವೃತ್ತದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜಯಂತಿ ಶನಿವಾರ ಆಚರಿಸಲಾಯಿತು.</p>.<p>ಜೈ ಹಿಂದ್ ಸಂಘಟನೆಯ ಅಧ್ಯಕ್ಷ ವೀರು ರೆಡ್ಡಿ ದಿಗ್ವಾಲ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುತ್ಥಳಿಗೆ ಪುಷ್ಪಾರ್ಚನೆಯಿಂದ ಗೌರವ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ನೇತಾಜಿಯವರ ತ್ಯಾಗ, ಸಮರ್ಪಣೆ ಹಾಗೂ ಶೌರ್ಯ ನಮ್ಮೆಲ್ಲರಿಗೂ ಆದರ್ಶ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕ್ರಾಂತಿಕಾರಕ ಚಿಂತನೆಗಳು, ಆಜಾದ್ ಹಿಂದ್ ಸೇನೆಯ ಮೂಲಕ ನೀಡಿದ ಹೋರಾಟ ಹಾಗೂ ಅಚಲ ದೇಶಭಕ್ತಿ ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿವೆ. ಈ ವೃತ್ತವು ಮುಂದಿನ ತಲೆಮಾರಿಗೆ ದೇಶಭಕ್ತಿ, ಶಿಸ್ತು ಮತ್ತು ರಾಷ್ಟ್ರಸೇವೆಯ ಮನೋಭಾವವನ್ನು ಸದಾ ಜಾಗೃತಗೊಳಿಸುವ ಕೇಂದ್ರವಾಗಲಿದೆ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ದತ್ತು ಗುತ್ತೇದಾರ್, ಡಾ. ಶಾಮರಾವ್, ಬಸಂತರಾವ ದಿಗ್ವಾಲ್, ಮಾದೇವ ದೇಶಮುಖ್, ಶೇಖ್ ಇಬ್ರಾಹಿಂ, ಜಗದೀಶ್ ಗುಮ್ಮಳ, ಹರೀಶ್ ಅನಿಲ್ ಕುಮಾರ್, ಗೋಪಾಲ್ ಕುಕ್ಕುಡಲ್, ಪ್ರಶಾಂತ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.</p>.<p><strong>ಮೇರಾ ಯುವ ಭಾರತ್, ರೈಸಿಂಗ್ ಹ್ಯಾಂಡ್ಸ್ ಯುತ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ: </strong>ಎರಡೂ ಸಂಸ್ಥೆಗಳ ಸಹಯೋಗದೊಂದಿಗೆ ಇಲ್ಲಿನ ಶಿವನಗರ ಶ್ರೀ ಸಾಯಿ ಚೈತನ್ಯ ಪದವಿ ಕಾಲೇಜಿನಲ್ಲಿ ಶನಿವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನದ ಅಂಗವಾಗಿ ಪರಾಕ್ರಮ ದಿನ ಆಚರಿಸಲಾಯಿತು.</p>.<p>ಮೇರಾ ಯುವ ಭಾರತ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರ್ಮೆ, ದಿಶಾಗುಂಪು ಸಂಸ್ಥೆಯ ಕಾರ್ಯದರ್ಶಿ ಅಭಿಷೇಕ್ ಕುಲಕರ್ಣಿ, ಆಡಳಿತಾಧಿಕಾರಿ ಪ್ರವೀಣ ಕುಲಕರ್ಣಿ, ರೈಸಿಂಗ್ ಹ್ಯಾಂಡ್ಸ್ ಯುತ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸತೀಶ್ ಎಸ್. ಬೆಳಕೋಟೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜೈ ಹಿಂದ್ ಸಂಘಟನೆಯಿಂದ ನಗರದ ಮಂಗಲಪೇಟ್ನಲ್ಲಿರುವ ವೃತ್ತದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 129ನೇ ಜಯಂತಿ ಶನಿವಾರ ಆಚರಿಸಲಾಯಿತು.</p>.<p>ಜೈ ಹಿಂದ್ ಸಂಘಟನೆಯ ಅಧ್ಯಕ್ಷ ವೀರು ರೆಡ್ಡಿ ದಿಗ್ವಾಲ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುತ್ಥಳಿಗೆ ಪುಷ್ಪಾರ್ಚನೆಯಿಂದ ಗೌರವ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ನೇತಾಜಿಯವರ ತ್ಯಾಗ, ಸಮರ್ಪಣೆ ಹಾಗೂ ಶೌರ್ಯ ನಮ್ಮೆಲ್ಲರಿಗೂ ಆದರ್ಶ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕ್ರಾಂತಿಕಾರಕ ಚಿಂತನೆಗಳು, ಆಜಾದ್ ಹಿಂದ್ ಸೇನೆಯ ಮೂಲಕ ನೀಡಿದ ಹೋರಾಟ ಹಾಗೂ ಅಚಲ ದೇಶಭಕ್ತಿ ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿವೆ. ಈ ವೃತ್ತವು ಮುಂದಿನ ತಲೆಮಾರಿಗೆ ದೇಶಭಕ್ತಿ, ಶಿಸ್ತು ಮತ್ತು ರಾಷ್ಟ್ರಸೇವೆಯ ಮನೋಭಾವವನ್ನು ಸದಾ ಜಾಗೃತಗೊಳಿಸುವ ಕೇಂದ್ರವಾಗಲಿದೆ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ದತ್ತು ಗುತ್ತೇದಾರ್, ಡಾ. ಶಾಮರಾವ್, ಬಸಂತರಾವ ದಿಗ್ವಾಲ್, ಮಾದೇವ ದೇಶಮುಖ್, ಶೇಖ್ ಇಬ್ರಾಹಿಂ, ಜಗದೀಶ್ ಗುಮ್ಮಳ, ಹರೀಶ್ ಅನಿಲ್ ಕುಮಾರ್, ಗೋಪಾಲ್ ಕುಕ್ಕುಡಲ್, ಪ್ರಶಾಂತ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.</p>.<p><strong>ಮೇರಾ ಯುವ ಭಾರತ್, ರೈಸಿಂಗ್ ಹ್ಯಾಂಡ್ಸ್ ಯುತ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ: </strong>ಎರಡೂ ಸಂಸ್ಥೆಗಳ ಸಹಯೋಗದೊಂದಿಗೆ ಇಲ್ಲಿನ ಶಿವನಗರ ಶ್ರೀ ಸಾಯಿ ಚೈತನ್ಯ ಪದವಿ ಕಾಲೇಜಿನಲ್ಲಿ ಶನಿವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನದ ಅಂಗವಾಗಿ ಪರಾಕ್ರಮ ದಿನ ಆಚರಿಸಲಾಯಿತು.</p>.<p>ಮೇರಾ ಯುವ ಭಾರತ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರ್ಮೆ, ದಿಶಾಗುಂಪು ಸಂಸ್ಥೆಯ ಕಾರ್ಯದರ್ಶಿ ಅಭಿಷೇಕ್ ಕುಲಕರ್ಣಿ, ಆಡಳಿತಾಧಿಕಾರಿ ಪ್ರವೀಣ ಕುಲಕರ್ಣಿ, ರೈಸಿಂಗ್ ಹ್ಯಾಂಡ್ಸ್ ಯುತ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸತೀಶ್ ಎಸ್. ಬೆಳಕೋಟೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>