ಡಿಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಚನಬಸಯ್ಯ ಸ್ವಾಮಿ ಮಾತನಾಡಿ, ‘ಬೀದರ್ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಗಣಕೀಕರಣಗೊಂಡಿವೆ. ಕಂಪ್ಯೂಟರ್ ಬಳಸಲು ಗೊತ್ತಿಲ್ಲದವರು ಅನಕ್ಷರಸ್ಥರ ಸಾಲಿನಲ್ಲಿ ಗುರುತಿಸಿ ಕೊಳ್ಳುತ್ತಿದ್ದಾರೆ. ಆದ್ದರಿಂದ ಎಲ್ಲ ನೌಕರರು ಕಂಪ್ಯೂಟರ್ ಶಿಕ್ಷಣ ಪಡೆಯಬೇಕು’ ಎಂದರು.