<p><strong>ಬೀದರ್:</strong> ಪ್ರತಿ ಟನ್ ಕಬ್ಬಿಗೆ ₹3,200 ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ಬೀದರ್ ಜಿಲ್ಲಾ ಸಂಯುಕ್ತ ಕಿಸಾನ್ ಮೋರ್ಚಾ (ರೈತ ಸಂಘಗಳ ಒಕ್ಕೂಟ) ನೇತೃತ್ವದಲ್ಲಿ ರೈತರು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಭಾನುವಾರ ನಾಲ್ಕನೇ ದಿನಕ್ಕೆ ಕಾಲಿರಿಸಿತು.</p>.<p>ಜಿಲ್ಲೆಯ ವಿವಿಧ ಭಾಗಗಳ ರೈತರು ಧರಣಿಯಲ್ಲಿ ಭಾಗವಹಿಸಿದ್ದರು. ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಕೇಂದ್ರದ ಮಾಜಿ ಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಅವರು ಧರಣಿ ಸ್ಥಳಕ್ಕೆ ತೆರಳಿ, ರೈತರಿಗೆ ಬೆಂಬಲ ಸೂಚಿಸಿದರು. </p>.<p>ಭಗವಂತ ಖೂಬಾ ಮಾತನಾಡಿ, ರೈತರ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಇದೆ. ರೈತರ ಹೋರಾಟ ನ್ಯಾಯಸಮ್ಮತ ಮತ್ತು ಭಾವನಾತ್ಮಕ ಬೇಡಿಕೆಯಾಗಿದೆ. ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ನಿಗದಿಪಡಿಸಬೇಕು. ಆದರೆ, ನಮ್ಮ ಜಿಲ್ಲೆಯ ರೈತರು ತಮ್ಮ ಹೃದಯ ವೈಶಾಲ್ಯತೆ ತೋರಿಸಿ ₹3,100ರಿಂದ ₹3,200ಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಗೆ ಸ್ಪಂದಿಸದಿರುವ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾಡಳಿತ ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಒಳ್ಳೆಯದಾಗುವುದಿಲ್ಲ. ರೈತರ ಕಳಕಳಿ ಶಾಪ ತಟ್ಟುತ್ತದೆ ಎಂದು ಟೀಕಿಸಿದರು.</p>.<p>ರೈತರು ಸದುದ್ದೇಶದಿಂದ ಹೋರಾಟ ಮಾಡುತ್ತಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು. ನಾನು ನನ್ನ ತನು–ಮನ–ಧನದಿಂದ ರೈತರ ಜೊತೆ ನಿಲ್ಲುತ್ತೇನೆ. ಬಿಜೆಪಿಯ ನಾಲ್ವರು ಶಾಸಕರು ಈ ವಿಷಯವಾಗಿ ಬರುವ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದರು.</p>.<p>ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆಯುತ್ತಿರುವ ಹೋರಾಟಗಳಿಗೆ ಅಲ್ಲಿನ ಸಚಿವರು ಭೇಟಿ ನೀಡಿದರೂ ಬೀದರ್ ಜಿಲ್ಲೆಯ ಇಬ್ಬರು ಸಚಿವರು ರೈತರತ್ತ ಗಮನ ಹರಿಸಿಲ್ಲ. ಇವರು ಬೇಷರಮ್ ಮಂತ್ರಿಗಳು ಎಂದು ಕಿಡಿಕಾರಿದರು.</p>.<p>ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ರೈತರಿಗೆ ಸಾಲ ನೀಡುವ ಬದಲು ಬಡ್ಡಿ ವಸೂಲಿ ಮಾಡುವವರಂತೆ ವರ್ತಿಸುತ್ತಿದ್ದಾರೆ. ಸಚಿವ ಈಶ್ವರ ಖಂಡ್ರೆ ಅವರು ತಮ್ಮ ಸಹೋದರನಿಗೆಬುದ್ದಿ ಹೇಳಬೇಕು. ರೈತರ ಜೊತೆಗೆ ಆಟವಾಡುವುದನ್ನು ನಿಲ್ಲಿಸಬೇಕು ಎಂದು ಖೂಬಾ ಒತ್ತಾಯಿಸಿದರು.</p>.<p>2020–21ರಲ್ಲಿ ಬೀದರ್ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳೊಂದಿಗೆ ಸಭೆ ನಡೆಸಿ ಕಬ್ಬಿನ ಬೆಲೆಯನ್ನು ₹1400ರಿಂದ ₹2,250ಕ್ಕೆ ಏರಿಸಲು ನಾನು ಶ್ರಮಿಸಿದ್ದೆ. ಉಸ್ತುವಾರಿ ಸಚಿವರು ರೈತರ ಹೋರಾಟದತ್ತ ಮುಖ ಮಾಡಿಯೂ ನೋಡಿರಲಿಲ್ಲ. ತಮ್ಮ ಸಹೋದರನ ಸಕ್ಕರೆ ಕಾರ್ಖಾನೆ ಉಳಿಸಿಕೊಳ್ಳಲು ಆಸಕ್ತಿ ತೋರುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ರೈತ ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಸಿದ್ರಾಮಪ್ಪ ಆಣದೂರೆ, ಶ್ರೀಮಂತ ಬಿರಾದಾರ, ಪ್ರಕಾಶ ಬಾವುಗೆ, ಶಾಂತಮ್ಮ ಮೂಲಗೆ, ಶಿವಲೀಲಾ ಹೊಳಸಮುದ್ರ, ವಿಜಯಕುಮಾರ ಬಾವುಗೆ, ವೀರಾರೆಡ್ಡಿ, ವಿಠಲ್ ರಾವ್, ನಾಗಶೆಟ್ಟಿ, ಭೀಮರಾವ್, ಖಮರ್ ಪಟೇಲ್ ಇತರರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಪ್ರತಿ ಟನ್ ಕಬ್ಬಿಗೆ ₹3,200 ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ಬೀದರ್ ಜಿಲ್ಲಾ ಸಂಯುಕ್ತ ಕಿಸಾನ್ ಮೋರ್ಚಾ (ರೈತ ಸಂಘಗಳ ಒಕ್ಕೂಟ) ನೇತೃತ್ವದಲ್ಲಿ ರೈತರು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಭಾನುವಾರ ನಾಲ್ಕನೇ ದಿನಕ್ಕೆ ಕಾಲಿರಿಸಿತು.</p>.<p>ಜಿಲ್ಲೆಯ ವಿವಿಧ ಭಾಗಗಳ ರೈತರು ಧರಣಿಯಲ್ಲಿ ಭಾಗವಹಿಸಿದ್ದರು. ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಕೇಂದ್ರದ ಮಾಜಿ ಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಅವರು ಧರಣಿ ಸ್ಥಳಕ್ಕೆ ತೆರಳಿ, ರೈತರಿಗೆ ಬೆಂಬಲ ಸೂಚಿಸಿದರು. </p>.<p>ಭಗವಂತ ಖೂಬಾ ಮಾತನಾಡಿ, ರೈತರ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಇದೆ. ರೈತರ ಹೋರಾಟ ನ್ಯಾಯಸಮ್ಮತ ಮತ್ತು ಭಾವನಾತ್ಮಕ ಬೇಡಿಕೆಯಾಗಿದೆ. ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ನಿಗದಿಪಡಿಸಬೇಕು. ಆದರೆ, ನಮ್ಮ ಜಿಲ್ಲೆಯ ರೈತರು ತಮ್ಮ ಹೃದಯ ವೈಶಾಲ್ಯತೆ ತೋರಿಸಿ ₹3,100ರಿಂದ ₹3,200ಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಗೆ ಸ್ಪಂದಿಸದಿರುವ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾಡಳಿತ ಮತ್ತು ಸಕ್ಕರೆ ಕಾರ್ಖಾನೆಗಳಿಗೆ ಒಳ್ಳೆಯದಾಗುವುದಿಲ್ಲ. ರೈತರ ಕಳಕಳಿ ಶಾಪ ತಟ್ಟುತ್ತದೆ ಎಂದು ಟೀಕಿಸಿದರು.</p>.<p>ರೈತರು ಸದುದ್ದೇಶದಿಂದ ಹೋರಾಟ ಮಾಡುತ್ತಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು. ನಾನು ನನ್ನ ತನು–ಮನ–ಧನದಿಂದ ರೈತರ ಜೊತೆ ನಿಲ್ಲುತ್ತೇನೆ. ಬಿಜೆಪಿಯ ನಾಲ್ವರು ಶಾಸಕರು ಈ ವಿಷಯವಾಗಿ ಬರುವ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದರು.</p>.<p>ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆಯುತ್ತಿರುವ ಹೋರಾಟಗಳಿಗೆ ಅಲ್ಲಿನ ಸಚಿವರು ಭೇಟಿ ನೀಡಿದರೂ ಬೀದರ್ ಜಿಲ್ಲೆಯ ಇಬ್ಬರು ಸಚಿವರು ರೈತರತ್ತ ಗಮನ ಹರಿಸಿಲ್ಲ. ಇವರು ಬೇಷರಮ್ ಮಂತ್ರಿಗಳು ಎಂದು ಕಿಡಿಕಾರಿದರು.</p>.<p>ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ರೈತರಿಗೆ ಸಾಲ ನೀಡುವ ಬದಲು ಬಡ್ಡಿ ವಸೂಲಿ ಮಾಡುವವರಂತೆ ವರ್ತಿಸುತ್ತಿದ್ದಾರೆ. ಸಚಿವ ಈಶ್ವರ ಖಂಡ್ರೆ ಅವರು ತಮ್ಮ ಸಹೋದರನಿಗೆಬುದ್ದಿ ಹೇಳಬೇಕು. ರೈತರ ಜೊತೆಗೆ ಆಟವಾಡುವುದನ್ನು ನಿಲ್ಲಿಸಬೇಕು ಎಂದು ಖೂಬಾ ಒತ್ತಾಯಿಸಿದರು.</p>.<p>2020–21ರಲ್ಲಿ ಬೀದರ್ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳೊಂದಿಗೆ ಸಭೆ ನಡೆಸಿ ಕಬ್ಬಿನ ಬೆಲೆಯನ್ನು ₹1400ರಿಂದ ₹2,250ಕ್ಕೆ ಏರಿಸಲು ನಾನು ಶ್ರಮಿಸಿದ್ದೆ. ಉಸ್ತುವಾರಿ ಸಚಿವರು ರೈತರ ಹೋರಾಟದತ್ತ ಮುಖ ಮಾಡಿಯೂ ನೋಡಿರಲಿಲ್ಲ. ತಮ್ಮ ಸಹೋದರನ ಸಕ್ಕರೆ ಕಾರ್ಖಾನೆ ಉಳಿಸಿಕೊಳ್ಳಲು ಆಸಕ್ತಿ ತೋರುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ರೈತ ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಸಿದ್ರಾಮಪ್ಪ ಆಣದೂರೆ, ಶ್ರೀಮಂತ ಬಿರಾದಾರ, ಪ್ರಕಾಶ ಬಾವುಗೆ, ಶಾಂತಮ್ಮ ಮೂಲಗೆ, ಶಿವಲೀಲಾ ಹೊಳಸಮುದ್ರ, ವಿಜಯಕುಮಾರ ಬಾವುಗೆ, ವೀರಾರೆಡ್ಡಿ, ವಿಠಲ್ ರಾವ್, ನಾಗಶೆಟ್ಟಿ, ಭೀಮರಾವ್, ಖಮರ್ ಪಟೇಲ್ ಇತರರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>