<p><strong>ಬಸವಕಲ್ಯಾಣ:</strong> ತಾಲ್ಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಇಲ್ಲದ್ದರಿಂದ ಕಬ್ಬು ಬೆಳೆ ಕ್ಷೇತ್ರ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ.</p>.<p>ಅನ್ಯ ತಾಲ್ಲೂಕಿಗೆ ಹಾಗೂ ಸಮೀಪದ ಮಹಾರಾಷ್ಟ್ರದ ಕಾರ್ಖಾನೆಗಳಿಗೆ ಕಬ್ಬು ಸಾಗಿಸಲು ಹೆಚ್ಚಿನ ಖರ್ಚು ಬರುತ್ತಿದೆ ಹಾಗೂ ಸಮಯಕ್ಕೆ ಹಣ ದೊರಕದ ಕಾರಣ ರೈತರು ಕಬ್ಬು ಬೆಳೆಯದಿದ್ದರೆ ಆಯಿತಲ್ಲ ಎಂಬ ನಿರ್ಧಾರಕ್ಕೆ ಬಂದಿರುವಂತೆ ಕಾಣುತ್ತಿದೆ.</p>.<p>ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಇಲ್ಲಿನ ಹೆಚ್ಚಿನ ಕಬ್ಬು ಹೋಗುತ್ತಿತ್ತು. ಆದರೆ ಆ ಕಾರ್ಖಾನೆ ಬಂದ್ ಆಗಿದೆ. ಬಸವಕಲ್ಯಾಣ ಸಮೀಪದ ಖಾಂಡಸಾರಿ ಸಕ್ಕರೆ ಕಾರ್ಖಾನೆಯೂ ಕಬ್ಬು ನುರಿಸುವುದನ್ನು ನಿಲ್ಲಿಸಿ ಅನೇಕ ವರ್ಷಗಳಾಗಿವೆ.</p>.<p>ಬೆಟಬಾಲ್ಕುಂದಾ, ಜಾನಾಪುರ, ಮಂಠಾಳ, ಚಂಡಕಾಪುರ, ಉಮಾಪುರ, ಮೋರಖಂಡಿ, ತಳಭೋಗ ವ್ಯಾಪ್ತಿಯಲ್ಲಿ ಬೆಲ್ಲ ತಯಾರಿಕೆಯ ಹತ್ತಾರು ಗಾಣಗಳು (ಅಲೆಮನೆ) ಇದ್ದವು. ಕಾರ್ಮಿಕರ ಕೊರತೆಯ ಕಾರಣಕ್ಕೆ ಅವುಗಳೂ ಹಾಳು ಬಿದ್ದಿದ್ದರಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ 2021 ರಲ್ಲಿ ಇದ್ದಂಥ 2383.95 ಹೆಕ್ಟೇರ್ ಕಬ್ಬು ಬೆಳೆ ಕ್ಷೇತ್ರ 2023-24 ರಲ್ಲಿ 1454.16 ಹೆಕ್ಟೇರ್ಗೆ ಇಳಿದಿದೆ.</p>.<p>ನದಿಗಳ ನೀರಾವರಿ ಸೌಲಭ್ಯವೂ ಇಲ್ಲ. ಬರೀ ಬಾವಿ ನೀರಾವರಿ ಆಧಾರಿತ ಬೇಸಾಯವಿದೆ. ಆದರೂ ಅನ್ಯ ಬೆಳೆಗಳಿಗೆ ಬೆಲೆ ಇಲ್ಲದಿದ್ದಾಗ ಇಲ್ಲಿ ಕಬ್ಬು ಹೆಚ್ಚಿನ ಪ್ರಮಾಣದಲ್ಲಿತ್ತು. ಕೆಲ ವರ್ಷಗಳಿಂದ ಸೋಯಾಬಿನ್ ಬೆಳೆಯುವುದು ಹೆಚ್ಚಾಗಿದೆ. ಈ ವರ್ಷ ಬಿಳಿಜೋಳ ಸಹ ಹೆಚ್ಚಿಗೆ ಇತ್ತು. ಆದರೆ ಕಬ್ಬು ಕಡಿಮೆ ಇತ್ತು. ಕಾರ್ಖಾನೆಯವರ ನಿರ್ಲಕ್ಷ್ಯದಿಂದ ಇನ್ನುವರೆಗೆ ಕೆಲ ಪ್ರಮಾಣದ ಕಬ್ಬು ಜಮೀನಿನಲ್ಲಿಯೇ ಉಳಿದಿದ್ದು, ರೈತರು ಅದನ್ನು ಗಾಣಗಳಿಗೆ ಸಾಗಿಸಿ ಬೆಲ್ಲ ತಯಾರಿಸುತ್ತಿರುವುದು ಕಂಡು ಬಂದಿದೆ.</p>.<p>‘ಕೆಲ ಪ್ರಮಾಣದ ಕಬ್ಬು ಕಾರ್ಖಾನೆಗೆ ಸಾಗಿಸದೆ ಉಳಿದಿರುವ ಕಾರಣ ಗಾಣಕ್ಕೆ ತಂದು ಬೆಲ್ಲ ತಯಾರಿಸುತ್ತಿದ್ದೇನೆ. ಒಂದು ಮುದ್ದೆ ಬೆಲ್ಲ ₹400ಕ್ಕೆ ಮಾರಾಟ ಆಗುತ್ತದೆ. ಎಲ್ಲ ಖರ್ಚು ಹೋಗಿ ₹200 ಉಳಿಯುತ್ತದೆ’ ಎಂದು ಜಾಫರವಾಡಿಯ ರೈತ ಶಾಂತವಿಜಯ ಪಾಟೀಲ ಹೇಳಿದ್ದಾರೆ.</p>.<p>‘ತಾಲ್ಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮೂರು ದಶಕಗಳಿಂದ ಪ್ರಯತ್ನ ಸಾಗಿದ್ದರೂ ಫಲ ದೊರಕಿಲ್ಲ. ಜನಪ್ರತಿನಿಧಿಗಳು ಸತತವಾಗಿ ಕ್ರಿಯಾಶೀಲರಾದರೆ ಮಾತ್ರ ಇಂಥ ಕೆಲಸ ಸಾಧ್ಯವಾಗುತ್ತದೆ’ ಎಂದು ರೈತ ಮುಖಂಡ ಮಡಿವಾಳಪ್ಪ ಪಾಟೀಲ ಸಸ್ತಾಪುರ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೀದರ್ ಜಿಲ್ಲೆಯಲ್ಲಿಯೇ ಹೆಚ್ಚಿನ ಕಬ್ಬು ಬೆಳೆಯಲಾಗುತ್ತದೆ. ಆ ಹಿರಿಮೆ ಉಳಿಸಿಕೊಂಡು ಹೋಗುವುದಕ್ಕೆ ಸರ್ಕಾರದ ಎಲ್ಲ ರೀತಿಯ ಸಹಾಯ ಅಗತ್ಯ’ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ನಿರ್ದೇಶಕ ಜ್ಞಾನೇಶ್ವರ ಮುಳೆ ತಿಳಿಸಿದರು.</p>.<p>‘ಸಕ್ಕರೆ ಕಾರ್ಖಾನೆ ಸ್ಥಾಪಿಸುವುದಲ್ಲದೆ ಬೆಲ್ಲದ ಗಾಣಗಳಿಗೂ ಸೌಲಭ್ಯ ನೀಡಿದರೆ ಕಬ್ಬು ಬೆಳೆಗಾರರಿಗೆ ಅನುಕೂಲ ಆಗುತ್ತದೆ’ ಎನ್ನುತ್ತಾರೆ ಮಂಠಾಳದ ರೈತ ಜಾಕೀರ್ ಶೇಖ್.</p>.<div><blockquote>ಬಸವಕಲ್ಯಾಣ ಮತ್ತು ಹುಲಸೂರ ತಾಲ್ಲೂಕುಗಳಲ್ಲಿ ಹಲವಾರು ಕಾರಣಗಳಿಂದ 4 ವರ್ಷಗಳ 990 ಹೆಕ್ಟೇರ್ನಷ್ಟು ಕಬ್ಬು ಬೆಳೆ ಕ್ಷೇತ್ರ ಕಡಿಮೆಯಾಗಿದೆ </blockquote><span class="attribution">ಮಾರ್ತಂಡ ಮಚಕೂರಿ ಕೃಷಿ ಸಹಾಯಕ ನಿರ್ದೇಶಕ</span></div>.<div><blockquote>ಸಕ್ಕರೆ ಕಾರ್ಖಾನೆ ಸ್ಥಾಪನೆಯಾದರೆ ರೈತರು ಕಬ್ಬು ಬೆಳೆಯುವುದು ಜಾಸ್ತಿ ಆಗುತ್ತದೆ. ಜೊತೆಯಲ್ಲಿಯೇ ನೀರಾವರಿ ಮತ್ತಿತರೆ ಸೌಲಭ್ಯವೂ ನೀಡುವುದು ಅತ್ಯಗತ್ಯ </blockquote><span class="attribution">ಶಾಂತವಿಜಯ ಪಾಟೀಲ ರೈತ ಜಾಫರವಾಡಿ</span></div>.<div><blockquote>ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಕ್ಕರೆ ಕಾರ್ಖಾನೆಗಳಿದ್ದು ಇಲ್ಲಿಯೂ ಕಾರ್ಖಾನೆ ಸ್ಥಾಪನೆಗಾಗಿ ಶಾಸಕ ಶರಣು ಸಲಗರ ಅವರು ಈಗಾಗಲೇ ಸ್ಥಳ ಪರಿಶೀಲಿಸಿದ್ದಾರೆ </blockquote><span class="attribution">ಜ್ಞಾನೇಶ್ವರ ಮುಳೆ ಮಾಜಿ ನಿರ್ದೇಶಕ ನಗರ ಯೋಜನಾ ಪ್ರಾಧಿಕಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ತಾಲ್ಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳು ಇಲ್ಲದ್ದರಿಂದ ಕಬ್ಬು ಬೆಳೆ ಕ್ಷೇತ್ರ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ.</p>.<p>ಅನ್ಯ ತಾಲ್ಲೂಕಿಗೆ ಹಾಗೂ ಸಮೀಪದ ಮಹಾರಾಷ್ಟ್ರದ ಕಾರ್ಖಾನೆಗಳಿಗೆ ಕಬ್ಬು ಸಾಗಿಸಲು ಹೆಚ್ಚಿನ ಖರ್ಚು ಬರುತ್ತಿದೆ ಹಾಗೂ ಸಮಯಕ್ಕೆ ಹಣ ದೊರಕದ ಕಾರಣ ರೈತರು ಕಬ್ಬು ಬೆಳೆಯದಿದ್ದರೆ ಆಯಿತಲ್ಲ ಎಂಬ ನಿರ್ಧಾರಕ್ಕೆ ಬಂದಿರುವಂತೆ ಕಾಣುತ್ತಿದೆ.</p>.<p>ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಇಲ್ಲಿನ ಹೆಚ್ಚಿನ ಕಬ್ಬು ಹೋಗುತ್ತಿತ್ತು. ಆದರೆ ಆ ಕಾರ್ಖಾನೆ ಬಂದ್ ಆಗಿದೆ. ಬಸವಕಲ್ಯಾಣ ಸಮೀಪದ ಖಾಂಡಸಾರಿ ಸಕ್ಕರೆ ಕಾರ್ಖಾನೆಯೂ ಕಬ್ಬು ನುರಿಸುವುದನ್ನು ನಿಲ್ಲಿಸಿ ಅನೇಕ ವರ್ಷಗಳಾಗಿವೆ.</p>.<p>ಬೆಟಬಾಲ್ಕುಂದಾ, ಜಾನಾಪುರ, ಮಂಠಾಳ, ಚಂಡಕಾಪುರ, ಉಮಾಪುರ, ಮೋರಖಂಡಿ, ತಳಭೋಗ ವ್ಯಾಪ್ತಿಯಲ್ಲಿ ಬೆಲ್ಲ ತಯಾರಿಕೆಯ ಹತ್ತಾರು ಗಾಣಗಳು (ಅಲೆಮನೆ) ಇದ್ದವು. ಕಾರ್ಮಿಕರ ಕೊರತೆಯ ಕಾರಣಕ್ಕೆ ಅವುಗಳೂ ಹಾಳು ಬಿದ್ದಿದ್ದರಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದ 2021 ರಲ್ಲಿ ಇದ್ದಂಥ 2383.95 ಹೆಕ್ಟೇರ್ ಕಬ್ಬು ಬೆಳೆ ಕ್ಷೇತ್ರ 2023-24 ರಲ್ಲಿ 1454.16 ಹೆಕ್ಟೇರ್ಗೆ ಇಳಿದಿದೆ.</p>.<p>ನದಿಗಳ ನೀರಾವರಿ ಸೌಲಭ್ಯವೂ ಇಲ್ಲ. ಬರೀ ಬಾವಿ ನೀರಾವರಿ ಆಧಾರಿತ ಬೇಸಾಯವಿದೆ. ಆದರೂ ಅನ್ಯ ಬೆಳೆಗಳಿಗೆ ಬೆಲೆ ಇಲ್ಲದಿದ್ದಾಗ ಇಲ್ಲಿ ಕಬ್ಬು ಹೆಚ್ಚಿನ ಪ್ರಮಾಣದಲ್ಲಿತ್ತು. ಕೆಲ ವರ್ಷಗಳಿಂದ ಸೋಯಾಬಿನ್ ಬೆಳೆಯುವುದು ಹೆಚ್ಚಾಗಿದೆ. ಈ ವರ್ಷ ಬಿಳಿಜೋಳ ಸಹ ಹೆಚ್ಚಿಗೆ ಇತ್ತು. ಆದರೆ ಕಬ್ಬು ಕಡಿಮೆ ಇತ್ತು. ಕಾರ್ಖಾನೆಯವರ ನಿರ್ಲಕ್ಷ್ಯದಿಂದ ಇನ್ನುವರೆಗೆ ಕೆಲ ಪ್ರಮಾಣದ ಕಬ್ಬು ಜಮೀನಿನಲ್ಲಿಯೇ ಉಳಿದಿದ್ದು, ರೈತರು ಅದನ್ನು ಗಾಣಗಳಿಗೆ ಸಾಗಿಸಿ ಬೆಲ್ಲ ತಯಾರಿಸುತ್ತಿರುವುದು ಕಂಡು ಬಂದಿದೆ.</p>.<p>‘ಕೆಲ ಪ್ರಮಾಣದ ಕಬ್ಬು ಕಾರ್ಖಾನೆಗೆ ಸಾಗಿಸದೆ ಉಳಿದಿರುವ ಕಾರಣ ಗಾಣಕ್ಕೆ ತಂದು ಬೆಲ್ಲ ತಯಾರಿಸುತ್ತಿದ್ದೇನೆ. ಒಂದು ಮುದ್ದೆ ಬೆಲ್ಲ ₹400ಕ್ಕೆ ಮಾರಾಟ ಆಗುತ್ತದೆ. ಎಲ್ಲ ಖರ್ಚು ಹೋಗಿ ₹200 ಉಳಿಯುತ್ತದೆ’ ಎಂದು ಜಾಫರವಾಡಿಯ ರೈತ ಶಾಂತವಿಜಯ ಪಾಟೀಲ ಹೇಳಿದ್ದಾರೆ.</p>.<p>‘ತಾಲ್ಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮೂರು ದಶಕಗಳಿಂದ ಪ್ರಯತ್ನ ಸಾಗಿದ್ದರೂ ಫಲ ದೊರಕಿಲ್ಲ. ಜನಪ್ರತಿನಿಧಿಗಳು ಸತತವಾಗಿ ಕ್ರಿಯಾಶೀಲರಾದರೆ ಮಾತ್ರ ಇಂಥ ಕೆಲಸ ಸಾಧ್ಯವಾಗುತ್ತದೆ’ ಎಂದು ರೈತ ಮುಖಂಡ ಮಡಿವಾಳಪ್ಪ ಪಾಟೀಲ ಸಸ್ತಾಪುರ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೀದರ್ ಜಿಲ್ಲೆಯಲ್ಲಿಯೇ ಹೆಚ್ಚಿನ ಕಬ್ಬು ಬೆಳೆಯಲಾಗುತ್ತದೆ. ಆ ಹಿರಿಮೆ ಉಳಿಸಿಕೊಂಡು ಹೋಗುವುದಕ್ಕೆ ಸರ್ಕಾರದ ಎಲ್ಲ ರೀತಿಯ ಸಹಾಯ ಅಗತ್ಯ’ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ನಿರ್ದೇಶಕ ಜ್ಞಾನೇಶ್ವರ ಮುಳೆ ತಿಳಿಸಿದರು.</p>.<p>‘ಸಕ್ಕರೆ ಕಾರ್ಖಾನೆ ಸ್ಥಾಪಿಸುವುದಲ್ಲದೆ ಬೆಲ್ಲದ ಗಾಣಗಳಿಗೂ ಸೌಲಭ್ಯ ನೀಡಿದರೆ ಕಬ್ಬು ಬೆಳೆಗಾರರಿಗೆ ಅನುಕೂಲ ಆಗುತ್ತದೆ’ ಎನ್ನುತ್ತಾರೆ ಮಂಠಾಳದ ರೈತ ಜಾಕೀರ್ ಶೇಖ್.</p>.<div><blockquote>ಬಸವಕಲ್ಯಾಣ ಮತ್ತು ಹುಲಸೂರ ತಾಲ್ಲೂಕುಗಳಲ್ಲಿ ಹಲವಾರು ಕಾರಣಗಳಿಂದ 4 ವರ್ಷಗಳ 990 ಹೆಕ್ಟೇರ್ನಷ್ಟು ಕಬ್ಬು ಬೆಳೆ ಕ್ಷೇತ್ರ ಕಡಿಮೆಯಾಗಿದೆ </blockquote><span class="attribution">ಮಾರ್ತಂಡ ಮಚಕೂರಿ ಕೃಷಿ ಸಹಾಯಕ ನಿರ್ದೇಶಕ</span></div>.<div><blockquote>ಸಕ್ಕರೆ ಕಾರ್ಖಾನೆ ಸ್ಥಾಪನೆಯಾದರೆ ರೈತರು ಕಬ್ಬು ಬೆಳೆಯುವುದು ಜಾಸ್ತಿ ಆಗುತ್ತದೆ. ಜೊತೆಯಲ್ಲಿಯೇ ನೀರಾವರಿ ಮತ್ತಿತರೆ ಸೌಲಭ್ಯವೂ ನೀಡುವುದು ಅತ್ಯಗತ್ಯ </blockquote><span class="attribution">ಶಾಂತವಿಜಯ ಪಾಟೀಲ ರೈತ ಜಾಫರವಾಡಿ</span></div>.<div><blockquote>ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಕ್ಕರೆ ಕಾರ್ಖಾನೆಗಳಿದ್ದು ಇಲ್ಲಿಯೂ ಕಾರ್ಖಾನೆ ಸ್ಥಾಪನೆಗಾಗಿ ಶಾಸಕ ಶರಣು ಸಲಗರ ಅವರು ಈಗಾಗಲೇ ಸ್ಥಳ ಪರಿಶೀಲಿಸಿದ್ದಾರೆ </blockquote><span class="attribution">ಜ್ಞಾನೇಶ್ವರ ಮುಳೆ ಮಾಜಿ ನಿರ್ದೇಶಕ ನಗರ ಯೋಜನಾ ಪ್ರಾಧಿಕಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>