<p><strong>ಭಾಲ್ಕಿ</strong>: ತಾಲ್ಲೂಕಿನ ದಾಡಗಿ ಕ್ರಾಸ್ ಸಮೀಪದ ಬಸವಣ್ಣನವರ ಪ್ರತಿಮೆಗೆ ಈಚೆಗೆ ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ತಗುಲಿ ಬಸವಣ್ಣನವರ ಪ್ರತಿಮೆ ವಿರೂಪಗೊಂಡಿದ್ದು, ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಖಟಕಚಿಂಚೋಳಿ ಪಿಎಸ್ಐ ಸುದರ್ಶನ ರೆಡ್ಡಿ ತಿಳಿಸಿದ್ದಾರೆ.</p>.<p>ಘಟನೆ ಸಂಬಂಧ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರೀಶೀಲಿಸಿದಾಗ ಅಂದು ಮಧ್ಯರಾತ್ರಿ ಆ ಮಾರ್ಗವಾಗಿ ಘೋಡವಾಡಿಯಿಂದ ಕಬ್ಬು ತೆಗೆದುಕೊಂಡು ಉದಗೀರ್ ಕಡೆಗೆ ಇದೊಂದೇ ಟ್ರ್ಯಾಕ್ಟರ್ ಸಾಗಿತ್ತು. ಈ ಟ್ರ್ಯಾಕ್ಟರ್ ತೆರಳಿದ ಸಂಪೂರ್ಣ ಮಾಹಿತಿ ಕಲೆ ಹಾಕಿದಾಗ ಉದಗೀರ್ನ ವಿಲಾಸ ಶುಗರ್ ಫ್ಯಾಕ್ಟರಿಯಲ್ಲಿ ಟ್ರ್ಯಾಕ್ಟರ್ ಪತ್ತೆಯಾಗಿತ್ತು. ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ತನ್ನ ನಿರ್ಲಕ್ಷ್ಯದಿಂದಲೇ ಪ್ರತಿಮೆ ವಿರೂಪಗೊಂಡಿದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಪಿಎಸ್ಐ ಸುದರ್ಶನ ರೆಡ್ಡಿ ತಿಳಿಸಿದರು.</p>.<p>ಈ ಸಂಬಂಧ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಥ ಘಟನೆಗಳು ನಡೆಯದಂತೆ ತಡೆಯಲು ದಾಡಗಿ ಕ್ರಾಸ್ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.</p>.<p>ರಸ್ತೆ ಅಗಲೀಕರಣ ಕಾರ್ಯ ಹಾಗೂ ನೂತನ ಬಸವಣ್ಣನವರ ಮೂರ್ತಿ ಸ್ಥಾಪನೆ ಶೀಘ್ರದಲ್ಲಿ ಆಗಬೇಕು ಎಂಬುದು ಬಸವಭಕ್ತರ ಒತ್ತಾಯ.</p>.<p>ಮಂಗಳವಾರ (ಜ.14) ಮಧ್ಯರಾತ್ರಿ ಕಿಡಿಗೇಡಿಗಳು ಬಸವಣ್ಣನವರ ಪ್ರತಿಮೆಯ ಬಲಗೈಯನ್ನು ಕತ್ತರಿಸಿ, ಷಟಸ್ಥಲ ಧ್ವಜ ಬೀಳಿಸಿ ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿ ಬುಧವಾರ ದಾಡಗಿ ಗ್ರಾಮಸ್ಥರು, ತಾಲ್ಲೂಕಿನ ಬಸವ ಭಕ್ಕರು ಸೇರಿಕೊಂಡು ಹುಮನಾಬಾದ್-ಭಾಲ್ಕಿ-ಬಸವಕಲ್ಯಾಣ ಮಾರ್ಗದ ರಸ್ತೆ ಸಂಚಾರ ತಡೆದು, ಟೈರ್ಗೆ ಬೆಂಕಿಹಚ್ಚುವ ಮೂಲಕ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆ ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ತಾಲ್ಲೂಕಿನ ದಾಡಗಿ ಕ್ರಾಸ್ ಸಮೀಪದ ಬಸವಣ್ಣನವರ ಪ್ರತಿಮೆಗೆ ಈಚೆಗೆ ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ತಗುಲಿ ಬಸವಣ್ಣನವರ ಪ್ರತಿಮೆ ವಿರೂಪಗೊಂಡಿದ್ದು, ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಖಟಕಚಿಂಚೋಳಿ ಪಿಎಸ್ಐ ಸುದರ್ಶನ ರೆಡ್ಡಿ ತಿಳಿಸಿದ್ದಾರೆ.</p>.<p>ಘಟನೆ ಸಂಬಂಧ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರೀಶೀಲಿಸಿದಾಗ ಅಂದು ಮಧ್ಯರಾತ್ರಿ ಆ ಮಾರ್ಗವಾಗಿ ಘೋಡವಾಡಿಯಿಂದ ಕಬ್ಬು ತೆಗೆದುಕೊಂಡು ಉದಗೀರ್ ಕಡೆಗೆ ಇದೊಂದೇ ಟ್ರ್ಯಾಕ್ಟರ್ ಸಾಗಿತ್ತು. ಈ ಟ್ರ್ಯಾಕ್ಟರ್ ತೆರಳಿದ ಸಂಪೂರ್ಣ ಮಾಹಿತಿ ಕಲೆ ಹಾಕಿದಾಗ ಉದಗೀರ್ನ ವಿಲಾಸ ಶುಗರ್ ಫ್ಯಾಕ್ಟರಿಯಲ್ಲಿ ಟ್ರ್ಯಾಕ್ಟರ್ ಪತ್ತೆಯಾಗಿತ್ತು. ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ತನ್ನ ನಿರ್ಲಕ್ಷ್ಯದಿಂದಲೇ ಪ್ರತಿಮೆ ವಿರೂಪಗೊಂಡಿದೆ ಎಂದು ಒಪ್ಪಿಕೊಂಡಿದ್ದಾನೆ ಎಂದು ಪಿಎಸ್ಐ ಸುದರ್ಶನ ರೆಡ್ಡಿ ತಿಳಿಸಿದರು.</p>.<p>ಈ ಸಂಬಂಧ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಥ ಘಟನೆಗಳು ನಡೆಯದಂತೆ ತಡೆಯಲು ದಾಡಗಿ ಕ್ರಾಸ್ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.</p>.<p>ರಸ್ತೆ ಅಗಲೀಕರಣ ಕಾರ್ಯ ಹಾಗೂ ನೂತನ ಬಸವಣ್ಣನವರ ಮೂರ್ತಿ ಸ್ಥಾಪನೆ ಶೀಘ್ರದಲ್ಲಿ ಆಗಬೇಕು ಎಂಬುದು ಬಸವಭಕ್ತರ ಒತ್ತಾಯ.</p>.<p>ಮಂಗಳವಾರ (ಜ.14) ಮಧ್ಯರಾತ್ರಿ ಕಿಡಿಗೇಡಿಗಳು ಬಸವಣ್ಣನವರ ಪ್ರತಿಮೆಯ ಬಲಗೈಯನ್ನು ಕತ್ತರಿಸಿ, ಷಟಸ್ಥಲ ಧ್ವಜ ಬೀಳಿಸಿ ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿ ಬುಧವಾರ ದಾಡಗಿ ಗ್ರಾಮಸ್ಥರು, ತಾಲ್ಲೂಕಿನ ಬಸವ ಭಕ್ಕರು ಸೇರಿಕೊಂಡು ಹುಮನಾಬಾದ್-ಭಾಲ್ಕಿ-ಬಸವಕಲ್ಯಾಣ ಮಾರ್ಗದ ರಸ್ತೆ ಸಂಚಾರ ತಡೆದು, ಟೈರ್ಗೆ ಬೆಂಕಿಹಚ್ಚುವ ಮೂಲಕ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆ ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>