<p><strong>ಚಿಟಗುಪ್ಪ</strong>: ಇಲ್ಲಿಯ ಪುರಸಭೆ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ತಕ್ಷಣ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕ ರಾಘವೇಂದ್ರ ರೇವಣಸಿದ್ದಪ್ಪ ಅವರು ಕಟ್ಟಡದ ಚಾವಣಿ ಮೇಲೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಮಂಗಳವಾರ ಸಂಭವಿಸಿದೆ.</p>.<p>‘ಎರಡು ತಿಂಗಳಿಂದ ಪೌರಕಾರ್ಮಿಕರ ಸಂಬಳ ಆಗದೇ ಇರುವುದರಿಂದ ಕುಟುಂಬದ ಸಮಸ್ಯೆಗಳಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ’ ಎಂದು ರಾಘವೇಂದ್ರ ತಿಳಿಸಿದ್ದಾರೆ.</p>.<p>‘ಧ್ವಜಾರೋಹಣ ನೆರವೇರಿಸಿದ ತಕ್ಷಣ ಎಲ್ಲರೂ ನಿಲ್ಲಿ ಎಂಬ ಜೋರಾದ ಶಬ್ದ ಕಟ್ಟಡದ ಮೇಲಿ ನಿಂದ ಕೇಳಿಬಂತು. ಆಗ ಎಲ್ಲರೂ ಮೇಲೆ ನೋಡಿದೆವು. ರಾಘವೇಂದ್ರ ಅವರು ಕೊರಳಿಗೆ ಹಗ್ಗದ ಕುಣಿಕೆ ಹಾಕಿಕೊಂಡು ಕಟ್ಟಡದಿಂದ ಕೆಳಗೆ ಜಿಗಿಯಲು ಯತ್ನಿಸಿದರು. ತಕ್ಷಣ ಪುರಸಭೆ ಸಿಬ್ಬಂದಿ ಹಾಗೂ ಸದಸ್ಯರು ಚಾವಣಿ ಮೇಲೆ ಹೋಗಿ ಅವರನ್ನು ಕಾಪಾಡಿದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಈ ಕುರಿತು ಮುಖ್ಯಾಧಿಕಾರಿ ಶ್ರೀಪಾದ್ ರಾಜಪುರೋಹಿತ, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ</strong>: ಇಲ್ಲಿಯ ಪುರಸಭೆ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ತಕ್ಷಣ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕ ರಾಘವೇಂದ್ರ ರೇವಣಸಿದ್ದಪ್ಪ ಅವರು ಕಟ್ಟಡದ ಚಾವಣಿ ಮೇಲೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಮಂಗಳವಾರ ಸಂಭವಿಸಿದೆ.</p>.<p>‘ಎರಡು ತಿಂಗಳಿಂದ ಪೌರಕಾರ್ಮಿಕರ ಸಂಬಳ ಆಗದೇ ಇರುವುದರಿಂದ ಕುಟುಂಬದ ಸಮಸ್ಯೆಗಳಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ’ ಎಂದು ರಾಘವೇಂದ್ರ ತಿಳಿಸಿದ್ದಾರೆ.</p>.<p>‘ಧ್ವಜಾರೋಹಣ ನೆರವೇರಿಸಿದ ತಕ್ಷಣ ಎಲ್ಲರೂ ನಿಲ್ಲಿ ಎಂಬ ಜೋರಾದ ಶಬ್ದ ಕಟ್ಟಡದ ಮೇಲಿ ನಿಂದ ಕೇಳಿಬಂತು. ಆಗ ಎಲ್ಲರೂ ಮೇಲೆ ನೋಡಿದೆವು. ರಾಘವೇಂದ್ರ ಅವರು ಕೊರಳಿಗೆ ಹಗ್ಗದ ಕುಣಿಕೆ ಹಾಕಿಕೊಂಡು ಕಟ್ಟಡದಿಂದ ಕೆಳಗೆ ಜಿಗಿಯಲು ಯತ್ನಿಸಿದರು. ತಕ್ಷಣ ಪುರಸಭೆ ಸಿಬ್ಬಂದಿ ಹಾಗೂ ಸದಸ್ಯರು ಚಾವಣಿ ಮೇಲೆ ಹೋಗಿ ಅವರನ್ನು ಕಾಪಾಡಿದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಈ ಕುರಿತು ಮುಖ್ಯಾಧಿಕಾರಿ ಶ್ರೀಪಾದ್ ರಾಜಪುರೋಹಿತ, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>