ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಾದ್: ಮಾಂಜ್ರಾ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ

Last Updated 17 ಆಗಸ್ಟ್ 2022, 4:59 IST
ಅಕ್ಷರ ಗಾತ್ರ

ಔರಾದ್: ತಾಲ್ಲೂಕಿನ ಚಟ್ನಾಳ ಗ್ರಾಮದ ವೃದ್ಧೆ ವಚಲಾಬಾಯಿ ರಾಮಣ್ಣ ಉಪ್ಪಾರ (65) ಕೌಠಾ ಸಮೀಪದ ಮಾಂಜ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಮನೆಯಿಂದ ಹೋಗಿ ಸಂಜೆ ವೇಳೆ ನದಿಗೆ ಹಾರಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳೀಯರ ಸಹಾಯದಿಂದ ವಚಲಾಬಾಯಿ ಅವರ ಶವ ಹೊರ ತೆಗೆದಿದ್ದಾರೆ. ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವಚಲಾಬಾಯಿ ಅವರು ಯಾರೂ ನೋಡುವವರಿಲ್ಲದೆ ಮಾನಸಿಕವಾಗಿ ನೊಂದಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT