ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಠಾಣದಲ್ಲಿ ಭಾನುವಾರ ಬೈಕ್‌ ರ್‍ಯಾಲಿ 

Last Updated 14 ಆಗಸ್ಟ್ 2022, 13:25 IST
ಅಕ್ಷರ ಗಾತ್ರ

ಬೀದರ್: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿಯ ಬೀದರ್‌ ದಕ್ಷಿಣ ಕ್ಷೇತ್ರದ ಘಟಕದ ವತಿಯಿಂದ ತಾಲ್ಲೂಕಿನ ಕಮಠಾಣದಲ್ಲಿ ಭಾನುವಾರ ಬೈಕ್‌ ರ್‍ಯಾಲಿ ನಡೆಯಿತು

ಕಮಠಾಣದಿಂದ ಪ್ರಾರಂಭವಾದ ಬೈಕ್ ರ‍್ಯಾಲಿ ವಿವಿಧ ಗ್ರಾಮಗಳಲ್ಲಿ ಸಂಚರಿಸಿತು. ಇದಕ್ಕೂ ಮೊದಲು ಬೈಕ್‌ ರ್‍ಯಾಲಿಗೆ ಚಾಲನೆ ನೀಡಿದ ಕೆಎಸ್‌ಐಐಡಿಸಿ ನಿಗಮದ ಅಧ್ಯಕ್ಷ ಡಾ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಕಲಬುರಗಿ ವಿಭಾಗದ ಸಹ ಪ್ರಭಾರಿ ಈಶ್ವರ್ ಸಿಂಗ್ ಠಾಕೂರ್, ಮಂಡಲದ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಮಂಡಲದ ಉಪಾಧ್ಯಕ್ಷ ಸಂತೋಷ್ ಸೊರಳ್ಳಿ, ಬೀದರ್ ದಕ್ಷಿಣ ಯುವ ಮೋರ್ಚಾ ಮಂಡಲ ಅಧ್ಯಕ್ಷ ಸಾಯಿನಾಥ್ ಪಾಟೀಲ್, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಯ್ಯ ಸ್ವಾಮಿ, ಚೆನ್ನಪ್ಪ ಗೌರಶೆಟ್ಟಿ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT