ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಭಿ ಎನ್‍ಜಿಒ: ಕಾಲ್ನಡಿಗೆ ಜಾಥಾ

Last Updated 10 ಆಗಸ್ಟ್ 2022, 15:39 IST
ಅಕ್ಷರ ಗಾತ್ರ


ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಸುರಭಿ ಎನ್‍ಜಿಒ ವತಿಯಿಂದ ನಗರದಲ್ಲಿ ಬುಧವಾರ ಕಾಲ್ನಡಿಗೆ ಜಾಥಾ ನಡೆಯಿತು.
ಬಸವೇಶ್ವರ ವೃತ್ತದಿಂದ ಆರಂಭಗೊಂಡ ಜಾಥಾ ಪ್ರಮುಖ ಬೀದಿಗಳ ಮೂಲಕ ಶಿವಾಜಿ ವೃತ್ತಕ್ಕೆ ತಲುಪಿ ಸಮಾರೋಪಗೊಂಡಿತು.
ವಿದ್ಯಾರ್ಥಿಗಳು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದರು.
ಸುರಭಿ ಎನ್‍ಜಿಒ ಕಾರ್ಯದರ್ಶಿ ಅನುಪಮಾ ಏರೋಳಕರ್, ಪ್ರಯಾವಿ ಆಸ್ಪತ್ರೆ ಸಂಸ್ಥಾಪಕ ಡಾ. ಅಮರ ಏರೋಳಕರ್, ಬಿಡಿಎ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ ಟೊಣ್ಣೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT