<p><strong>ಬೀದರ್:</strong> ‘ವಿಧಾನಸಭೆಯಿಂದ ಶಾಸಕರನ್ನು ಆರು ತಿಂಗಳ ಅವಧಿಗೆ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಪ್ರತಿಕ್ರಿಯಿಸಿದ್ದಾರೆ.</p>.<p>ಶಾಸಕರಾದವರು ಜನರ ಭಾವನೆಗಳನ್ನು ವಿಧಾನಸೌಧದಲ್ಲಿ ವ್ಯಕ್ತಪಡಿಸಿ, ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಾರೆ. ಆದರೆ, ಅವರನ್ನು ಗಣನೆಗೆ ತೆಗೆದುಕೊಳ್ಳದೆ, ಅವರ ಭಾವನೆಗಳಿಗೆ ಬೆಲೆ ಕೊಡದೆ ರಾಜ್ಯ ಸರ್ಕಾರ ಮನಸ್ಸಿಗೆ ತೋಚಿದಂತೆ ನಡೆದುಕೊಂಡಿರುವುದು ಸರಿಯಲ್ಲ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ರಾಜ್ಯದಲ್ಲಿ ಒಂದು ತರಹ ಅರಾಜಕತೆ ಸೃಷ್ಟಿಯಾದಂತೆ ಜನರಿಗೆ ಭಾಸವಾಗುತ್ತಿದೆ. ಶಾಸಕರು ‘ಮಧುಬಲೆ’ಯಂತಹ ಮುಖ್ಯವಾದ ವಿಷಯದ ಕುರಿತು ಮಾತನಾಡುತ್ತಿದ್ದರು. ಅದಕ್ಕೆ ಸ್ಪಂದಿಸಿ ತನಿಖೆ ನಡೆಸಬೇಕಿತ್ತು. ಆದರೆ, ಅವರನ್ನು ಅಮಾನತುಗೊಳಿಸಿರುವುದು ಖಂಡನಾರ್ಹ ಎಂದಿದ್ದಾರೆ.</p>.<p>ಕಮಲನಗರದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ರೈತರ ಜಮೀನು ಪಡೆಯಲಾಗಿದೆ. ಪಹಣಿಯಲ್ಲೂ ಪ್ರಜಾಸೌಧ ಎಂದು ನಮೂದಾಗಿದೆ. ಕೂಡಲೇ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ವಿಧಾನಸಭೆಯಿಂದ ಶಾಸಕರನ್ನು ಆರು ತಿಂಗಳ ಅವಧಿಗೆ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಪ್ರತಿಕ್ರಿಯಿಸಿದ್ದಾರೆ.</p>.<p>ಶಾಸಕರಾದವರು ಜನರ ಭಾವನೆಗಳನ್ನು ವಿಧಾನಸೌಧದಲ್ಲಿ ವ್ಯಕ್ತಪಡಿಸಿ, ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಾರೆ. ಆದರೆ, ಅವರನ್ನು ಗಣನೆಗೆ ತೆಗೆದುಕೊಳ್ಳದೆ, ಅವರ ಭಾವನೆಗಳಿಗೆ ಬೆಲೆ ಕೊಡದೆ ರಾಜ್ಯ ಸರ್ಕಾರ ಮನಸ್ಸಿಗೆ ತೋಚಿದಂತೆ ನಡೆದುಕೊಂಡಿರುವುದು ಸರಿಯಲ್ಲ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ರಾಜ್ಯದಲ್ಲಿ ಒಂದು ತರಹ ಅರಾಜಕತೆ ಸೃಷ್ಟಿಯಾದಂತೆ ಜನರಿಗೆ ಭಾಸವಾಗುತ್ತಿದೆ. ಶಾಸಕರು ‘ಮಧುಬಲೆ’ಯಂತಹ ಮುಖ್ಯವಾದ ವಿಷಯದ ಕುರಿತು ಮಾತನಾಡುತ್ತಿದ್ದರು. ಅದಕ್ಕೆ ಸ್ಪಂದಿಸಿ ತನಿಖೆ ನಡೆಸಬೇಕಿತ್ತು. ಆದರೆ, ಅವರನ್ನು ಅಮಾನತುಗೊಳಿಸಿರುವುದು ಖಂಡನಾರ್ಹ ಎಂದಿದ್ದಾರೆ.</p>.<p>ಕಮಲನಗರದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ರೈತರ ಜಮೀನು ಪಡೆಯಲಾಗಿದೆ. ಪಹಣಿಯಲ್ಲೂ ಪ್ರಜಾಸೌಧ ಎಂದು ನಮೂದಾಗಿದೆ. ಕೂಡಲೇ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>