<p><strong>ಜನವಾಡ:</strong> ಹೈನುಗಾರಿಕೆಯಿಂದ ಕೃಷಿಯಲ್ಲಿ ಸುಸ್ಥಿರತೆ ಕಂಡುಕೊಳ್ಳಬಹುದು ಎಂದು ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ದಿಲೀಪಕುಮಾರ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ ವೈಜ್ಞಾನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಸ್ತುತ ರೈತರಿಂದ ರೈತರಿಗೆ ಪ್ರಸಾರವಾಗುವ ತಾಂತ್ರಿಕತೆಗಳು ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಹೀಗಾಗಿ ಸುಧಾರಿತ ಹೈನುಗಾರಿಕೆ ತಾಂತ್ರಿಕತೆಗಳನ್ನು ರೈತರು ಇತರರಿಗೂ ಪರಿಚಯಿಸಬೇಕು ಎಂದು ಸಲಹೆ ಮಾಡಿದರು.</p>.<p>ಕಲಬುರ್ಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕ ಶಾಲಿವಾನ್ ವಾಡೆ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆಗೆ ವಿಪುಲ ಅವಕಾಶಗಳು ಇವೆ. ಹಾಲು ಉತ್ಪಾದಕರು ಗುಂಪು ರಚಿಸಿಕೊಳ್ಳುವ ಮೂಲಕ ಹಾಲಿಗೆ ಮಾರುಕಟ್ಟೆ ಹಾಗೂ ಆಕರ್ಷಕ ಬೆಲೆ ಪಡೆಯಬಹುದು ಎಂದು ತಿಳಿಸಿದರು.</p>.<p>ಒಕ್ಕೂಟದಿಂದ ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಗಿದೆ. ಇನ್ನೂ 250 ಸಂಘಗಳ ರಚನೆಗೆ ಯೋಜನೆ ರೂಪಿಸಲಾಗಿದೆ. ನಂದಿನಿಯ 54 ಮಳಿಗೆಗಳು ಹಾಲು ಹಾಗೂ ಹಾಲಿನ ವಿವಿಧ ಉತ್ಪನ್ನಗಳ ಮಾರಾಟದಲ್ಲಿ ತೊಡಗಿಸಿಕೊಂಡಿವೆ ಎಂದು ಹೇಳಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಮಾತನಾಡಿ, ರೈತರು ತಮ್ಮ ಕಸುಬುಗಳಿಗೆ ವೈಜ್ಞಾನಿಕ ಸ್ಪರ್ಶ ನೀಡಿದ್ದಲ್ಲಿ ಮಾತ್ರ ವೃತ್ತಿಪರತೆ ಸಾಧಿಸಬಹುದು. ಗುಣಮಟ್ಟದ ಕೃಷಿ ಉತ್ಪನ್ನ ಉತ್ಪಾದಿಸಬಹುದು. ಶುದ್ಧ ಹಾಲಿಗೆ ಈಗ ಬಹು ಬೇಡಿಕೆ ಇದೆ ಎಂದು ತಿಳಿಸಿದರು.</p>.<p>ಕೃಷಿ ವಿಜ್ಞಾನ ಕೇಂದ್ರವು ರೈತರಿಗೆ ಆಧುನಿಕ ತಂತ್ರಜ್ಞಾನಗಳ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.</p>.<p>ತರಬೇತಿ ಸಂಯೋಜಕ ಡಾ. ಅಕ್ಷಯಕುಮಾರ ಮಾತನಾಡಿ, ಹೈನುಗಾರಿಕೆ ರೈತರಿಗೆ ನಿರಂತರ ಆದಾಯ ತಂದುಕೊಡುವ ಉಪ ಕಸುಬು ಆಗಿದೆ ಎಂದು ತಿಳಿಸಿದರು.</p>.<p>ಡಾ. ದೀಪಕ್ ಪಾಟೀಲ, ಡಾ. ಕಿರಣ ಉಪಸ್ಥಿತರಿದ್ದರು. ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು. ಡಾ. ಆರ್.ಎಲ್. ಜಾಧವ್ ಸ್ವಾಗತಿಸಿದರು. ಡಾ. ರಾಜೇಶ್ವರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ:</strong> ಹೈನುಗಾರಿಕೆಯಿಂದ ಕೃಷಿಯಲ್ಲಿ ಸುಸ್ಥಿರತೆ ಕಂಡುಕೊಳ್ಳಬಹುದು ಎಂದು ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ದಿಲೀಪಕುಮಾರ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ ವೈಜ್ಞಾನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಸ್ತುತ ರೈತರಿಂದ ರೈತರಿಗೆ ಪ್ರಸಾರವಾಗುವ ತಾಂತ್ರಿಕತೆಗಳು ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಹೀಗಾಗಿ ಸುಧಾರಿತ ಹೈನುಗಾರಿಕೆ ತಾಂತ್ರಿಕತೆಗಳನ್ನು ರೈತರು ಇತರರಿಗೂ ಪರಿಚಯಿಸಬೇಕು ಎಂದು ಸಲಹೆ ಮಾಡಿದರು.</p>.<p>ಕಲಬುರ್ಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕ ಶಾಲಿವಾನ್ ವಾಡೆ ಮಾತನಾಡಿ, ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆಗೆ ವಿಪುಲ ಅವಕಾಶಗಳು ಇವೆ. ಹಾಲು ಉತ್ಪಾದಕರು ಗುಂಪು ರಚಿಸಿಕೊಳ್ಳುವ ಮೂಲಕ ಹಾಲಿಗೆ ಮಾರುಕಟ್ಟೆ ಹಾಗೂ ಆಕರ್ಷಕ ಬೆಲೆ ಪಡೆಯಬಹುದು ಎಂದು ತಿಳಿಸಿದರು.</p>.<p>ಒಕ್ಕೂಟದಿಂದ ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಗಿದೆ. ಇನ್ನೂ 250 ಸಂಘಗಳ ರಚನೆಗೆ ಯೋಜನೆ ರೂಪಿಸಲಾಗಿದೆ. ನಂದಿನಿಯ 54 ಮಳಿಗೆಗಳು ಹಾಲು ಹಾಗೂ ಹಾಲಿನ ವಿವಿಧ ಉತ್ಪನ್ನಗಳ ಮಾರಾಟದಲ್ಲಿ ತೊಡಗಿಸಿಕೊಂಡಿವೆ ಎಂದು ಹೇಳಿದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಮಾತನಾಡಿ, ರೈತರು ತಮ್ಮ ಕಸುಬುಗಳಿಗೆ ವೈಜ್ಞಾನಿಕ ಸ್ಪರ್ಶ ನೀಡಿದ್ದಲ್ಲಿ ಮಾತ್ರ ವೃತ್ತಿಪರತೆ ಸಾಧಿಸಬಹುದು. ಗುಣಮಟ್ಟದ ಕೃಷಿ ಉತ್ಪನ್ನ ಉತ್ಪಾದಿಸಬಹುದು. ಶುದ್ಧ ಹಾಲಿಗೆ ಈಗ ಬಹು ಬೇಡಿಕೆ ಇದೆ ಎಂದು ತಿಳಿಸಿದರು.</p>.<p>ಕೃಷಿ ವಿಜ್ಞಾನ ಕೇಂದ್ರವು ರೈತರಿಗೆ ಆಧುನಿಕ ತಂತ್ರಜ್ಞಾನಗಳ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.</p>.<p>ತರಬೇತಿ ಸಂಯೋಜಕ ಡಾ. ಅಕ್ಷಯಕುಮಾರ ಮಾತನಾಡಿ, ಹೈನುಗಾರಿಕೆ ರೈತರಿಗೆ ನಿರಂತರ ಆದಾಯ ತಂದುಕೊಡುವ ಉಪ ಕಸುಬು ಆಗಿದೆ ಎಂದು ತಿಳಿಸಿದರು.</p>.<p>ಡಾ. ದೀಪಕ್ ಪಾಟೀಲ, ಡಾ. ಕಿರಣ ಉಪಸ್ಥಿತರಿದ್ದರು. ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು. ಡಾ. ಆರ್.ಎಲ್. ಜಾಧವ್ ಸ್ವಾಗತಿಸಿದರು. ಡಾ. ರಾಜೇಶ್ವರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>