<p><strong>ಹುಲಸೂರ: </strong>‘ಮಠದ ಸ್ವಾಮೀಜಿಗಳು ಭಕ್ತರ ಸಂಕಷ್ಟ ಪರಿಹರಿಸುವ ಕೆಲಸ ಮಾಡಬೇಕು’ ಎಂದು ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದರು.</p>.<p>ಪಟ್ಟಣ ಹೊರವಲಯದ ಜಗದ್ಗುರು ಅಲ್ಲಮಪ್ರಭು ದೇವರ ಶೂನ್ಯಪೀಠ ಅನುಭವ ಮಂಟಪದಲ್ಲಿ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ರಥೋತ್ಸವದ ಅಂಗವಾಗಿ ನಡೆಯುತ್ತಿರುವ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸ್ವಾಮೀಜಿಗಳು ಧರ್ಮ ಹಾಗೂ ದೇವರನ್ನು ಬಿಟ್ಟು ಮನುಷ್ಯರ ಜೀವನದ ಕುರಿತು ಚಿಂತನೆ ಮಾಡುವ ಕೆಲಸ ಮಾಡಬೇಕು. ಮನುಷ್ಯನ ಕುರಿತು 12ನೇ ಶತಮಾನದಲ್ಲಿ ಬಸವಣ್ಣನವರು ಸೇರಿ ಎಲ್ಲ ಶರಣರು ವಚನಗಳಲ್ಲಿ ಚಿಂತನೆ ಮಾಡಿದ್ದಾರೆ. ಮನುಷ್ಯನ ಎಲ್ಲ ಸಮಸ್ಯೆಗಳಿಗೆ ವಚನಗಳಲ್ಲಿ ಪರಿಹಾರ ಇದೆ ಎಂದರು.</p>.<p>ಧಾರವಾಡದ ಶಿವಯೋಗ ಆಶ್ರಮದ ಬಸವಾನಂದ ಸ್ವಾಮೀಜಿ ಮಾತನಾಡಿ,‘ಬಸವಾದಿ ಶರಣರ ವಚನಗಳೆಂದರೆ ಅಮೃತವಿದ್ದಂತೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇವುಗಳಿಂದ ಮಾನಸಿಕ ವೈಕಲ್ಯ ಹೋಗುವುದು’ ಎಂದು ತಿಳಿಸಿದರು.</p>.<p>ಗುರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ, ಸಾಯಗಾಂವ ವಿರಕ್ತ ಮಠದ ಶಿವಾನಂದ ದೇವರು, ಉಸ್ತೂರಿ ವಿರಕ್ತ ಮಠದ ಕೋರಣೇಶ್ವರ ಸ್ವಾಮಿ ಮಾತನಾಡಿದರು.</p>.<p>ಗದಗದ ವೀರೇಶ್ವರ ಪುಣ್ಯಾಶ್ರಮದ ಜಗದೀಶ ಸೂಲ್ತಾನಪುರೆ ಸಂಗೀತ ಸೇವೆ ನೀಡಿದರು. ಶೇಖರ್ ಇಮ್ಮಡಿ ತಬಲಾ ಸಾಥ್ ನೀಡಿದರು.</p>.<p>ರಾಜಕುಮಾರ ನಿಡೋದೆ ನಿರೂಪಿಸಿದರು. ಗಂಗಮ್ಮ ನಾಗಣ್ಣ ಖಫಲೆ ಪ್ರಸಾದ ಸೇವೆ ಮಾಡಿದರು.</p>.<p>ಶಿವಾನಂದ ಶಿವಯೋಗಿಗಳ ಟ್ರಸ್ಟ್ ಅಧ್ಯಕ್ಷ ಬಸವರಾಜ ಮುಕ್ತಾ, ಗುರು ಬಸವೇಶ್ವರ ಅಕ್ಕನ ಬಳಗದ ಅಧ್ಯಕ್ಷೆ ಶಶಿಕಲಾ ಓಂಕಾರ ಪಟ್ಟೆ, ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷೆ ಶ್ರೀದೇವಿ ನಿಡೋದೆ, ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ ಖಫಲೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ: </strong>‘ಮಠದ ಸ್ವಾಮೀಜಿಗಳು ಭಕ್ತರ ಸಂಕಷ್ಟ ಪರಿಹರಿಸುವ ಕೆಲಸ ಮಾಡಬೇಕು’ ಎಂದು ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದರು.</p>.<p>ಪಟ್ಟಣ ಹೊರವಲಯದ ಜಗದ್ಗುರು ಅಲ್ಲಮಪ್ರಭು ದೇವರ ಶೂನ್ಯಪೀಠ ಅನುಭವ ಮಂಟಪದಲ್ಲಿ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ರಥೋತ್ಸವದ ಅಂಗವಾಗಿ ನಡೆಯುತ್ತಿರುವ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸ್ವಾಮೀಜಿಗಳು ಧರ್ಮ ಹಾಗೂ ದೇವರನ್ನು ಬಿಟ್ಟು ಮನುಷ್ಯರ ಜೀವನದ ಕುರಿತು ಚಿಂತನೆ ಮಾಡುವ ಕೆಲಸ ಮಾಡಬೇಕು. ಮನುಷ್ಯನ ಕುರಿತು 12ನೇ ಶತಮಾನದಲ್ಲಿ ಬಸವಣ್ಣನವರು ಸೇರಿ ಎಲ್ಲ ಶರಣರು ವಚನಗಳಲ್ಲಿ ಚಿಂತನೆ ಮಾಡಿದ್ದಾರೆ. ಮನುಷ್ಯನ ಎಲ್ಲ ಸಮಸ್ಯೆಗಳಿಗೆ ವಚನಗಳಲ್ಲಿ ಪರಿಹಾರ ಇದೆ ಎಂದರು.</p>.<p>ಧಾರವಾಡದ ಶಿವಯೋಗ ಆಶ್ರಮದ ಬಸವಾನಂದ ಸ್ವಾಮೀಜಿ ಮಾತನಾಡಿ,‘ಬಸವಾದಿ ಶರಣರ ವಚನಗಳೆಂದರೆ ಅಮೃತವಿದ್ದಂತೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇವುಗಳಿಂದ ಮಾನಸಿಕ ವೈಕಲ್ಯ ಹೋಗುವುದು’ ಎಂದು ತಿಳಿಸಿದರು.</p>.<p>ಗುರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ, ಸಾಯಗಾಂವ ವಿರಕ್ತ ಮಠದ ಶಿವಾನಂದ ದೇವರು, ಉಸ್ತೂರಿ ವಿರಕ್ತ ಮಠದ ಕೋರಣೇಶ್ವರ ಸ್ವಾಮಿ ಮಾತನಾಡಿದರು.</p>.<p>ಗದಗದ ವೀರೇಶ್ವರ ಪುಣ್ಯಾಶ್ರಮದ ಜಗದೀಶ ಸೂಲ್ತಾನಪುರೆ ಸಂಗೀತ ಸೇವೆ ನೀಡಿದರು. ಶೇಖರ್ ಇಮ್ಮಡಿ ತಬಲಾ ಸಾಥ್ ನೀಡಿದರು.</p>.<p>ರಾಜಕುಮಾರ ನಿಡೋದೆ ನಿರೂಪಿಸಿದರು. ಗಂಗಮ್ಮ ನಾಗಣ್ಣ ಖಫಲೆ ಪ್ರಸಾದ ಸೇವೆ ಮಾಡಿದರು.</p>.<p>ಶಿವಾನಂದ ಶಿವಯೋಗಿಗಳ ಟ್ರಸ್ಟ್ ಅಧ್ಯಕ್ಷ ಬಸವರಾಜ ಮುಕ್ತಾ, ಗುರು ಬಸವೇಶ್ವರ ಅಕ್ಕನ ಬಳಗದ ಅಧ್ಯಕ್ಷೆ ಶಶಿಕಲಾ ಓಂಕಾರ ಪಟ್ಟೆ, ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷೆ ಶ್ರೀದೇವಿ ನಿಡೋದೆ, ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ ಖಫಲೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>