<p><strong>ಹುಮನಾಬಾದ್:</strong> ಪುರಸಭೆಯಲ್ಲಿ ಸಾಮಾನ್ಯ ಸಭೆ ಕರೆಯುತ್ತಿಲ್ಲ, ಮೂಲ ಸೌಕರ್ಯಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ಪುರಸಭೆ ಅಧ್ಯಕ್ಷರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಪುರಸಭೆ ಸದಸ್ಯರಿಂದ ಪುರಸಭೆ ಆವರಣದಲ್ಲಿ ಬುಧವಾರ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿತ್ತು.</p>.<p>ಈ ಬಗ್ಗೆ ಮನವಿ ಪತ್ರವನ್ನು ತಹಶೀಲ್ದಾರ್ ಅಂಜುಂ ತಬಸುಮ್ ಅವರ ಮೂಲಕ ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್ ಅವರಿಗೆ ಸಲ್ಲಿಸಲಾಯಿತು.</p>.<p>ನಂತರ ಪುರಸಭೆ ಸದಸ್ಯ ರಮೇಶ ಕಲ್ಲೂರ್ ಮಾತನಾಡಿ, ಪುರಸಭೆ ವ್ಯಾಪ್ತಿಯ ಬಹುತೇಕ ಬಡಾವಣೆಗಳಲ್ಲಿ ಸಿಸಿ ರಸ್ತೆ, ಚರಂಡಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಬಗ್ಗೆ ಪುರಸಭೆ ಅಧ್ಯಕ್ಷರು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಇಲ್ಲಿನ ಕೆಲ ಬಡಾವಣೆಗಳಲ್ಲಿ ಯಾವುದೇ ಖಾತೆಗಳನ್ನು ನೀಡುತ್ತಿಲ್ಲ. ಈ ಕುರಿತು ಅನೇಕ ಬಾರಿ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪುರಸಭೆಯಲ್ಲಿ ಸರಿಯಾಗಿ ಸಾಮಾನ್ಯ ಸಭೆಗಳನ್ನು ಸಹ ಕರೆಯುತ್ತಿಲ್ಲ. ಮೂಲಭೂತ ಸೌಕರ್ಯಗಳು ಒದಗಿಸುವಲ್ಲಿ ಪುರಸಭೆ ವಿಫಲವಾಗಿದ್ದು, ಅಧ್ಯಕ್ಷರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ವಿಜಯ್ ಕುಮಾರ್ ದುರ್ಗಾದ್, ಸುನೀಲ ಪಾಟೀಲ, ವೀರೇಶ್ ಸೀಗಿ, ಧನಲಕ್ಷ್ಮಿ ಗೋಡೆಖೆ, ಭೀಮಾಬಾಯಿ ಭೀಮರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ಪುರಸಭೆಯಲ್ಲಿ ಸಾಮಾನ್ಯ ಸಭೆ ಕರೆಯುತ್ತಿಲ್ಲ, ಮೂಲ ಸೌಕರ್ಯಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ಪುರಸಭೆ ಅಧ್ಯಕ್ಷರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಪುರಸಭೆ ಸದಸ್ಯರಿಂದ ಪುರಸಭೆ ಆವರಣದಲ್ಲಿ ಬುಧವಾರ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿತ್ತು.</p>.<p>ಈ ಬಗ್ಗೆ ಮನವಿ ಪತ್ರವನ್ನು ತಹಶೀಲ್ದಾರ್ ಅಂಜುಂ ತಬಸುಮ್ ಅವರ ಮೂಲಕ ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್ ಅವರಿಗೆ ಸಲ್ಲಿಸಲಾಯಿತು.</p>.<p>ನಂತರ ಪುರಸಭೆ ಸದಸ್ಯ ರಮೇಶ ಕಲ್ಲೂರ್ ಮಾತನಾಡಿ, ಪುರಸಭೆ ವ್ಯಾಪ್ತಿಯ ಬಹುತೇಕ ಬಡಾವಣೆಗಳಲ್ಲಿ ಸಿಸಿ ರಸ್ತೆ, ಚರಂಡಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಬಗ್ಗೆ ಪುರಸಭೆ ಅಧ್ಯಕ್ಷರು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಇಲ್ಲಿನ ಕೆಲ ಬಡಾವಣೆಗಳಲ್ಲಿ ಯಾವುದೇ ಖಾತೆಗಳನ್ನು ನೀಡುತ್ತಿಲ್ಲ. ಈ ಕುರಿತು ಅನೇಕ ಬಾರಿ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪುರಸಭೆಯಲ್ಲಿ ಸರಿಯಾಗಿ ಸಾಮಾನ್ಯ ಸಭೆಗಳನ್ನು ಸಹ ಕರೆಯುತ್ತಿಲ್ಲ. ಮೂಲಭೂತ ಸೌಕರ್ಯಗಳು ಒದಗಿಸುವಲ್ಲಿ ಪುರಸಭೆ ವಿಫಲವಾಗಿದ್ದು, ಅಧ್ಯಕ್ಷರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ವಿಜಯ್ ಕುಮಾರ್ ದುರ್ಗಾದ್, ಸುನೀಲ ಪಾಟೀಲ, ವೀರೇಶ್ ಸೀಗಿ, ಧನಲಕ್ಷ್ಮಿ ಗೋಡೆಖೆ, ಭೀಮಾಬಾಯಿ ಭೀಮರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>