<p><strong>ಬೀದರ್:</strong> ತಮ್ಮ ಅಧೀನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾದ ಜಂಟಿ ಕೃಷಿ ನಿರ್ದೇಶಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಆಗ್ರಹಿಸಿದ್ದಾರೆ.</p>.<p>ಜಂಟಿ ನಿರ್ದೇಶಕಿ ಒಂದಿಲ್ಲೊಂದು ರೀತಿಯಲ್ಲಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 80 ಜನ ಅಧಿಕಾರಿ ಹಾಗೂ ಸಿಬ್ಬಂದಿ ಸಂಘಕ್ಕೆ ದೂರು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಕೃಷಿ ಇಲಾಖೆ ನೌಕರರ 15 ಕುಟುಂಬಗಳು ಕೊರೊನಾದಿಂದ ಬಳಲುತ್ತಿದ್ದರೂ ನಿರ್ದೇಶಕಿ ಕಚೇರಿಗೆ ಬರಲು ಹಾಗೂ ವರದಿ ತಯಾರಿಸಲು ಸೂಚಿಸುತ್ತಿದ್ದಾರೆ. ಅನಾರೋಗ್ಯದಿಂದ ಹಾಸಿಗೆ ಹಿಡಿದವರಿಗೆ ಮಲಗಿಯೇ ವರದಿ ತಯಾರಿಸಿ ಸಲ್ಲಿಸುವಂತೆ ಹೇಳಿ ಮಾನಸಿಕವಾಗಿ ಪೀಡಿಸುತ್ತಿದ್ದಾರೆ ಎನ್ನುವ ಆರೋಪ ಸಿಬ್ಬಂದಿಯದ್ದಾಗಿದೆ ಎಂದು ತಿಳಿಸಿದ್ದಾರೆ.</p>.<p>ಕೊರೊನಾ ಎರಡನೇ ಅಲೆ ತೀವ್ರವಾಗಿರುವ ಕಾರಣ ಶೇ 50 ರಷ್ಟು ನೌಕರರು ಮಾತ್ರ ಕಚೇರಿ ಕಾರ್ಯ ನಿರ್ವಹಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ, ಜಂಟಿ ನಿರ್ದೇಶಕಿ ಎಲ್ಲ ಅಧಿಕಾರಿ ಹಾಗೂ ನೌಕರರಿಗೂ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.</p>.<p>ಕಚೇರಿ ಕೆಲಸದ ಅವಧಿ ಮುಗಿದರೂ ರಾತ್ರಿ 8-9 ರವರೆಗೆ ಕಚೇರಿಯಲ್ಲಿ ಇರಬೇಕು. ನಿಗದಿತ ಸಮಯಕ್ಕಿಂತ ಮುಂಚೆ ಕಚೇರಿಗೆ ಬರಬೇಕು. ರಜೆ ದಿನಗಳಲ್ಲೂ ಕೆಲಸಕ್ಕೆ ಹಾಜರಾಗಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಸಿಬ್ಬಂದಿ ಮಾನಸಿಕವಾಗಿ ನರಕಯಾತನೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಕೂಡಲೇ ಜಂಟಿ ಕೃಷಿ ನಿರ್ದೇಶಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಮುಂಗಾರು ಬಿತ್ತನೆ ಬೀಜ ವಿತರಣೆ ಕಾರ್ಯ ನಿಲ್ಲಿಸಿ, ನೌಕರರ ಸಂಘವು ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ತಮ್ಮ ಅಧೀನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾರೆ ಎನ್ನಲಾದ ಜಂಟಿ ಕೃಷಿ ನಿರ್ದೇಶಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಆಗ್ರಹಿಸಿದ್ದಾರೆ.</p>.<p>ಜಂಟಿ ನಿರ್ದೇಶಕಿ ಒಂದಿಲ್ಲೊಂದು ರೀತಿಯಲ್ಲಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ ಎಂದು ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 80 ಜನ ಅಧಿಕಾರಿ ಹಾಗೂ ಸಿಬ್ಬಂದಿ ಸಂಘಕ್ಕೆ ದೂರು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಕೃಷಿ ಇಲಾಖೆ ನೌಕರರ 15 ಕುಟುಂಬಗಳು ಕೊರೊನಾದಿಂದ ಬಳಲುತ್ತಿದ್ದರೂ ನಿರ್ದೇಶಕಿ ಕಚೇರಿಗೆ ಬರಲು ಹಾಗೂ ವರದಿ ತಯಾರಿಸಲು ಸೂಚಿಸುತ್ತಿದ್ದಾರೆ. ಅನಾರೋಗ್ಯದಿಂದ ಹಾಸಿಗೆ ಹಿಡಿದವರಿಗೆ ಮಲಗಿಯೇ ವರದಿ ತಯಾರಿಸಿ ಸಲ್ಲಿಸುವಂತೆ ಹೇಳಿ ಮಾನಸಿಕವಾಗಿ ಪೀಡಿಸುತ್ತಿದ್ದಾರೆ ಎನ್ನುವ ಆರೋಪ ಸಿಬ್ಬಂದಿಯದ್ದಾಗಿದೆ ಎಂದು ತಿಳಿಸಿದ್ದಾರೆ.</p>.<p>ಕೊರೊನಾ ಎರಡನೇ ಅಲೆ ತೀವ್ರವಾಗಿರುವ ಕಾರಣ ಶೇ 50 ರಷ್ಟು ನೌಕರರು ಮಾತ್ರ ಕಚೇರಿ ಕಾರ್ಯ ನಿರ್ವಹಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ, ಜಂಟಿ ನಿರ್ದೇಶಕಿ ಎಲ್ಲ ಅಧಿಕಾರಿ ಹಾಗೂ ನೌಕರರಿಗೂ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.</p>.<p>ಕಚೇರಿ ಕೆಲಸದ ಅವಧಿ ಮುಗಿದರೂ ರಾತ್ರಿ 8-9 ರವರೆಗೆ ಕಚೇರಿಯಲ್ಲಿ ಇರಬೇಕು. ನಿಗದಿತ ಸಮಯಕ್ಕಿಂತ ಮುಂಚೆ ಕಚೇರಿಗೆ ಬರಬೇಕು. ರಜೆ ದಿನಗಳಲ್ಲೂ ಕೆಲಸಕ್ಕೆ ಹಾಜರಾಗಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಸಿಬ್ಬಂದಿ ಮಾನಸಿಕವಾಗಿ ನರಕಯಾತನೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಕೂಡಲೇ ಜಂಟಿ ಕೃಷಿ ನಿರ್ದೇಶಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಮುಂಗಾರು ಬಿತ್ತನೆ ಬೀಜ ವಿತರಣೆ ಕಾರ್ಯ ನಿಲ್ಲಿಸಿ, ನೌಕರರ ಸಂಘವು ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>