ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಿ’

ಮಳೆ ಬಂದರೆ ರಸ್ತೆ ಮೇಲೆ ಚರಂಡಿ ನೀರು
Last Updated 6 ಜುಲೈ 2021, 3:17 IST
ಅಕ್ಷರ ಗಾತ್ರ

ಹುಮನಾಬಾದ್: ಇಲ್ಲಿಯ ವಿವಿಧ ಬಡಾವಣೆಗಳಲ್ಲಿ ಮಲೀನ ನೀರು ಹರಿದು ಹೋಗದೆ ಚರಂಡಿಗಳು ತುಂಬಿವೆ. ಗಲೀಜು ನೀರು ರಸ್ತೆಗಳ ಮೇಲೆ ನಿಂತು ಗಬ್ಬು ನಾರುತ್ತಿದೆ.

‘ಈಗಾಗಲೇ ಕೊರೊನಾ ಸೋಂಕಿನಿಂದ ಸಾರ್ವಜನಿಕರ ಬದುಕು ಹೈರಾಣಾಗಿದೆ. ಚರಂಡಿಗಳಲ್ಲಿ ಗಲೀಜು ನೀರು ತುಂಬಿರುವುದರಿಂದ ಮತ್ತೆ ಸಾಂಕ್ರಾಮಿಕ ರೋಗಗಳ ಎಂಬ ಭಯ ಕಾಡುತ್ತಿದೆ. ಜೋರಾಗಿ ಮಳೆ ಬಂದರೆ ರಸ್ತೆಯ ಮೇಲೆ ಕೊಳಚೆ ನೀರು ಸಂಗ್ರಹಗೊಂಡು ದುರ್ವಾಸನೆ ಬೀರುತ್ತದೆ’ ಎಂದು ಇಲ್ಲಿಯ ತೆಳಪೇಟೆ ಬಡಾವಣೆಯ ನಿವಾಸಿ ಶ್ರೀನಿವಾಸ ಹೇಳುತ್ತಾರೆ.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕಸ ಸಂಗ್ರಹವಾಗುತ್ತಿದೆ. ಇದರಿಂದಾಗಿ ಹಂದಿಗಳು ಮತ್ತು ಬೀದಿನಾಯಿಗಳು ರಸ್ತೆ ಮಧ್ಯೆ ನಿಂತು ಸಾರ್ವಜನಿಕರ ಓಡಾಡಕ್ಕೆ ತೊಂದರೆ ಮಾಡುತ್ತಿವೆ. ಪುರಸಭೆ ವತಿಯಿಂದ ಈ ಕಸ ವಿಲೇಮಾರಿ ಹಾಗೂ ಚರಂಡಿ ಸ್ವಚ್ಛತೆ ಸರಿಯಾದ ಸಮಯಕ್ಕೆ ನಡೆಯುತ್ತಿಲ್ಲ’ ಎಂದು ಶಿವಪುರ ಬಡವಾಣೆಯ ನಿವಾಸಿ ಹೇಳಿದರು.

‘ಕಸ ವಿಲೇಮಾರಿ ಬಗ್ಗೆ ಅನೇಕ ಬಾರಿ ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗಲಾದರೂ ಅಧಿಕಾರಿಗಳು ಪ್ರತಿ ಬಡಾವಣೆಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳನ್ನು ವೀಕ್ಷಿಸಿ ತಕ್ಷಣ ಪರಿಹಾರ ನೀಡಬೇಕು’ ಎಂದು ನಿವಾಸಿ ಸುನೀಲ ಡಿ.ಎನ್ ಪತ್ರಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT