<p><strong>ಬೀದರ್</strong>: ‘ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲದ ಪ್ರಯೋಜನ ಪಡೆಯಬೇಕು’ ಎಂದು ಕೆನರಾ ಬ್ಯಾಂಕ್ ಕಲಬುರ್ಗಿ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕಎಚ್.ಕೆ. ಗಂಗಾಧರ ಸಲಹೆ ಮಾಡಿದರು.</p>.<p>ಕೆನರಾ ಬ್ಯಾಂಕ್ ವತಿಯಿಂದ ಇಲ್ಲಿಯ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಶೈಕ್ಷಣಿಕ ಸಾಲ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /><br />‘ದೇಶದ 14 ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ವ್ಯವಹಾರಕ್ಕಷ್ಟೇ ಸೀಮಿತವಾಗಿಲ್ಲ. ಮಹಿಳಾ ಸಬಲೀಕರಣ, ಶೈಕ್ಷಣಿಕ ಪ್ರಗತಿಗೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ’ ಎಂದು ತಿಳಿಸಿದರು.</p>.<p>‘ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಅರ್ಹತೆ ಗಳಿಸುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಒದಗಿಸುತ್ತಿದೆ. ಶೈಕ್ಷಣಿಕ ಸಾಲಕ್ಕೆ ಸರ್ಕಾರ ಸಹಾಯಧನ ನೀಡುತ್ತಿದೆ’ ಹೇಳಿದರು.</p>.<p>‘ಶೈಕ್ಷಣಿಕ ಸಾಲವನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಳ್ಳಬೇಕು. ಶಿಕ್ಷಣ ಪೂರೈಸಿದ ನಂತರ ಪ್ರಾಮಾಣಿಕವಾಗಿ ಬ್ಯಾಂಕ್ಗೆ ಸಾಲ ಮರು ಪಾವತಿ ಮಾಡಬೇಕು’ ಎಂದು ತಿಳಿಸಿದರು.</p>.<p>‘ನರ್ಸರಿಯಿಂದ ಶುರುವಾದ ಶಾಹೀನ್ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ. ಸಂಸ್ಥೆಯ ಅಡಿಯ ಶಾಲಾ ಕಾಲೇಜುಗಳಲ್ಲಿ ಸದ್ಯ 15 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ನೀಟ್ನಲ್ಲಿ ಪ್ರತಿಭೆ ಮೆರೆದಿರುವುದು ಪ್ರಶಂಸನೀಯ’ ಎಂದರು.</p>.<p>ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಮಾತನಾಡಿ, ‘ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ಕೋರ್ಸ್ಗಳ ಕನಸಿಗೆ ಈಗ ಬಡತನ ಅಡ್ಡಿಯಾಗದು. ಅವರ ಶಿಕ್ಷಣಕ್ಕೆ ಹಲವು ಮಾರ್ಗಗಳು ತೆರೆದುಕೊಳ್ಳುತ್ತಿವೆ. ಅವುಗಳಲ್ಲಿ ಶೈಕ್ಷಣಿಕ ಸಾಲವೂ ಒಂದು’ ಎಂದು ಹೇಳಿದರು.</p>.<p>‘ವೃತ್ತಿಪರ ಕೋರ್ಸ್ಗಳಿಗೆ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಬ್ಯಾಂಕ್ಗಳು ಶೈಕ್ಷಣಿಕ ಸಾಲ ನೀಡುತ್ತಿವೆ. ವಿದ್ಯಾರ್ಥಿಗಳ ಶಿಕ್ಷಣದ ಅವಧಿಯಲ್ಲಿ ಈ ಸಾಲಕ್ಕೆ ಯಾವುದೇ ಬಡ್ಡಿ ಇರುವುದಿಲ್ಲ. ಶಿಕ್ಷಣ ಪೂರೈಸಿದ ನಂತರ ಸಾಲ ಮರು ಪಾವತಿ ಮಾಡಬೇಕಾಗಲಿದೆ’ ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳು ಶೈಕ್ಷಣಿಕ ಸಾಲವನ್ನು ತಮ್ಮ ಜೀವನದ ಗುರಿ ಸಾಧನೆಗೆ ಬಳಸಿಕೊಳ್ಳಬೇಕು. ಶಿಕ್ಷಣ ಪೂರೈಸಿದ ನಂತರ ಅದನ್ನು ಮರು ಪಾವತಿಸಿ ಇತರ ವಿದ್ಯಾರ್ಥಿಗಳಿಗೂ ಸಾಲ ಒದಗಿಸಲು ಬ್ಯಾಂಕ್ಗಳಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಹೇಳಿದರು.</p>.<p>ಶೈಕ್ಷಣಿಕ ಸಾಲಕ್ಕೆ ಸಂಬಂಧಿಸಿದ ಪಾಲಕರು ಹಾಗೂ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಕೆನರಾ ಬ್ಯಾಂಕ್ ಅಧಿಕಾರಿಗಳು ಸಮಾಧಾನಕರ ಉತ್ತರ ನೀಡಿದರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲದ ಅರ್ಜಿಗಳನ್ನು ಕೂಡ ವಿತರಿಸಲಾಯಿತು.</p>.<p>ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕ ಬಿ. ವೆಂಕಟರಾಮಲು, ಪ್ರಬಂಧಕ ವಿಜಯ ರಾಮರಾವ್ ಕುಲಕರ್ಣಿ, ಬೀದರ್ ಶಾಖೆಯ ಮುಖ್ಯ ವ್ಯವಸ್ಥಾಪಕ ಕಾಮೇಶ್ವರರಾವ್, ಔರಾದ್ ಶಾಖೆಯ ವ್ಯವಸ್ಥಾಪಕ ಚಂದ್ರಶೇಖರ ಶಾನಗೊಂಡ, ರವಿಕಾಂತ ಉಪಸ್ಥಿತರಿದ್ದರು.<br />ಚಿಟ್ಟಾ ಶಾಖೆಯ ಹಿರಿಯ ವ್ಯವಸ್ಥಾಪಕ ಬಸವರಾಜ ಕೋಳಿ ಕಾರ್ಯಕ್ರಮ ಸಂಘಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲದ ಪ್ರಯೋಜನ ಪಡೆಯಬೇಕು’ ಎಂದು ಕೆನರಾ ಬ್ಯಾಂಕ್ ಕಲಬುರ್ಗಿ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕಎಚ್.ಕೆ. ಗಂಗಾಧರ ಸಲಹೆ ಮಾಡಿದರು.</p>.<p>ಕೆನರಾ ಬ್ಯಾಂಕ್ ವತಿಯಿಂದ ಇಲ್ಲಿಯ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಶೈಕ್ಷಣಿಕ ಸಾಲ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /><br />‘ದೇಶದ 14 ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ವ್ಯವಹಾರಕ್ಕಷ್ಟೇ ಸೀಮಿತವಾಗಿಲ್ಲ. ಮಹಿಳಾ ಸಬಲೀಕರಣ, ಶೈಕ್ಷಣಿಕ ಪ್ರಗತಿಗೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ’ ಎಂದು ತಿಳಿಸಿದರು.</p>.<p>‘ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಅರ್ಹತೆ ಗಳಿಸುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಒದಗಿಸುತ್ತಿದೆ. ಶೈಕ್ಷಣಿಕ ಸಾಲಕ್ಕೆ ಸರ್ಕಾರ ಸಹಾಯಧನ ನೀಡುತ್ತಿದೆ’ ಹೇಳಿದರು.</p>.<p>‘ಶೈಕ್ಷಣಿಕ ಸಾಲವನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಳ್ಳಬೇಕು. ಶಿಕ್ಷಣ ಪೂರೈಸಿದ ನಂತರ ಪ್ರಾಮಾಣಿಕವಾಗಿ ಬ್ಯಾಂಕ್ಗೆ ಸಾಲ ಮರು ಪಾವತಿ ಮಾಡಬೇಕು’ ಎಂದು ತಿಳಿಸಿದರು.</p>.<p>‘ನರ್ಸರಿಯಿಂದ ಶುರುವಾದ ಶಾಹೀನ್ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ. ಸಂಸ್ಥೆಯ ಅಡಿಯ ಶಾಲಾ ಕಾಲೇಜುಗಳಲ್ಲಿ ಸದ್ಯ 15 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ನೀಟ್ನಲ್ಲಿ ಪ್ರತಿಭೆ ಮೆರೆದಿರುವುದು ಪ್ರಶಂಸನೀಯ’ ಎಂದರು.</p>.<p>ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಮಾತನಾಡಿ, ‘ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ಕೋರ್ಸ್ಗಳ ಕನಸಿಗೆ ಈಗ ಬಡತನ ಅಡ್ಡಿಯಾಗದು. ಅವರ ಶಿಕ್ಷಣಕ್ಕೆ ಹಲವು ಮಾರ್ಗಗಳು ತೆರೆದುಕೊಳ್ಳುತ್ತಿವೆ. ಅವುಗಳಲ್ಲಿ ಶೈಕ್ಷಣಿಕ ಸಾಲವೂ ಒಂದು’ ಎಂದು ಹೇಳಿದರು.</p>.<p>‘ವೃತ್ತಿಪರ ಕೋರ್ಸ್ಗಳಿಗೆ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಬ್ಯಾಂಕ್ಗಳು ಶೈಕ್ಷಣಿಕ ಸಾಲ ನೀಡುತ್ತಿವೆ. ವಿದ್ಯಾರ್ಥಿಗಳ ಶಿಕ್ಷಣದ ಅವಧಿಯಲ್ಲಿ ಈ ಸಾಲಕ್ಕೆ ಯಾವುದೇ ಬಡ್ಡಿ ಇರುವುದಿಲ್ಲ. ಶಿಕ್ಷಣ ಪೂರೈಸಿದ ನಂತರ ಸಾಲ ಮರು ಪಾವತಿ ಮಾಡಬೇಕಾಗಲಿದೆ’ ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳು ಶೈಕ್ಷಣಿಕ ಸಾಲವನ್ನು ತಮ್ಮ ಜೀವನದ ಗುರಿ ಸಾಧನೆಗೆ ಬಳಸಿಕೊಳ್ಳಬೇಕು. ಶಿಕ್ಷಣ ಪೂರೈಸಿದ ನಂತರ ಅದನ್ನು ಮರು ಪಾವತಿಸಿ ಇತರ ವಿದ್ಯಾರ್ಥಿಗಳಿಗೂ ಸಾಲ ಒದಗಿಸಲು ಬ್ಯಾಂಕ್ಗಳಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಹೇಳಿದರು.</p>.<p>ಶೈಕ್ಷಣಿಕ ಸಾಲಕ್ಕೆ ಸಂಬಂಧಿಸಿದ ಪಾಲಕರು ಹಾಗೂ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಕೆನರಾ ಬ್ಯಾಂಕ್ ಅಧಿಕಾರಿಗಳು ಸಮಾಧಾನಕರ ಉತ್ತರ ನೀಡಿದರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲದ ಅರ್ಜಿಗಳನ್ನು ಕೂಡ ವಿತರಿಸಲಾಯಿತು.</p>.<p>ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕ ಬಿ. ವೆಂಕಟರಾಮಲು, ಪ್ರಬಂಧಕ ವಿಜಯ ರಾಮರಾವ್ ಕುಲಕರ್ಣಿ, ಬೀದರ್ ಶಾಖೆಯ ಮುಖ್ಯ ವ್ಯವಸ್ಥಾಪಕ ಕಾಮೇಶ್ವರರಾವ್, ಔರಾದ್ ಶಾಖೆಯ ವ್ಯವಸ್ಥಾಪಕ ಚಂದ್ರಶೇಖರ ಶಾನಗೊಂಡ, ರವಿಕಾಂತ ಉಪಸ್ಥಿತರಿದ್ದರು.<br />ಚಿಟ್ಟಾ ಶಾಖೆಯ ಹಿರಿಯ ವ್ಯವಸ್ಥಾಪಕ ಬಸವರಾಜ ಕೋಳಿ ಕಾರ್ಯಕ್ರಮ ಸಂಘಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>