ಜಿಲ್ಲೆಯ ಜನರನ್ನು ಕೊರೊನಾ ಸೋಂಕಿನಿಂದ ರಕ್ಷಿಸಲು ರಾಜ್ಯ ಸರ್ಕಾರಿ ನೌಕರರು ಹಗಲಿರುಳು ಎನ್ನದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಕೆಲವರು ಕೊರೊನಾ ವಾರಿಯರ್ಸ್ಗಳ ಆತ್ಮಸ್ಥೈರ್ಯ ಕುಗ್ಗಿಸುವ, ಅವರ ಮೇಲೆ ಹಲ್ಲೆ ನಡೆಸುವ ಹಾಗೂ ಅವರಿಗೆ ಜೀವ ಬೆದರಿಕೆ ಒಡ್ಡುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ದೂರಿದರು.