<p><strong>ಬೀದರ್: </strong>‘ರಾಜ್ಯದ ಸೌಹಾರ್ದ ಸಹಕಾರಿಗಳು ಆದಾಯ ತೆರಿಗೆ ಕಲಂ 80ಪಿ(2)ರ ಅಡಿಯಲ್ಲಿ ತೆರಿಗೆ ವಿನಾಯಿತಿಗೆ ಅರ್ಹವೆಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ’ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಗುರುನಾಥ ಜ್ಯಾಂತಿಕರ್ ತಿಳಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನ್ಯಾಯಾಲಯದ ತೀರ್ಪಿನಿಂದಾಗಿ ಸಂಯುಕ್ತ ಸೌಹಾರ್ದ ಸಹಕಾರಿಗಳ ಆದಾಯ ತೆರಿಗೆ ತೊಂದರೆಗೆ ಪರಿಹಾರ ದೊರಕಿದೆ’ ಎಂದು ಹೇಳಿದರು.</p>.<p>‘ಈ ಮೊದಲು ಸೌಹಾರ್ದ ಸಹಕಾರಿ ಅಧಿನಿಯಮದ ಅಡಿ ನೋಂದಣಿಯಾದ ಸೌಹಾರ್ದ ಸಹಕಾರಿಗಳನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸಹಕಾರ ಸಂಘಗಳೆಂದು ಪರಿಗಣಿಸಿರಲಿಲ್ಲ. ತೆರಿಗೆ ಪಾವತಿಗೆ ನೋಟಿಸ್ ಕೊಡುತ್ತಿದ್ದರು’ ಎಂದು ತಿಳಿಸಿದರು.</p>.<p>‘ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ಎರಡು ವರ್ಷಗಳಿಂದ ಸಮಸ್ಯೆಯ ಪರಿಹಾರಕ್ಕೆ ನಿರಂತರ ಪ್ರಯತ್ನ ನಡೆಸಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಸೆಳೆದಿತ್ತು. ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿತ್ತು’ ಎಂದು ಹೇಳಿದರು.</p>.<p>‘ಸೌಹಾರ್ದ ಸಹಕಾರ ಕ್ಷೇತ್ರದ ಆದಾಯ ತೆರಿಗೆ ತೊಂದರೆಗಳನ್ನು ನಿವಾರಿಸುವ ದಿಸೆಯಲ್ಲಿಸೌಹಾರ್ದ ಸಹಕಾರಿ ಕಾಯ್ದೆ ತಿದ್ದುಪಡಿಗೂ ಪ್ರಯತ್ನ ನಡೆಸಲಾಗುತ್ತಿದೆ.<br />ಈ ಕುರಿತು ಮುಖ್ಯಮಂತ್ರಿ ಹಾಗೂ ಸಹಕಾರ ಸಚಿವರ ಗಮನ ಸೆಳೆಯಲಾಗಿದೆ. ಸಕಾರಾತ್ಮಕ ಸ್ಪಂದನೆ ದೊರಕಿದೆ. ಈಗಾಗಲೇ ಕಾಯ್ದೆ ತಿದ್ದುಪಡಿ ಪ್ರಕ್ರಿಯೆ ಶುರುವಾಗಿದೆ’ ಎಂದರು.</p>.<p>‘ಸಮಗ್ರ ಸಹಕಾರ ಕ್ಷೇತ್ರದ ಅನೇಕ ಆದಾಯ ತೆರಿಗೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೌಹಾರ್ದ ಸಹಕಾರಿಯು ರಾಷ್ಟ್ರಮಟ್ಟದ ಸಂಸ್ಥೆಯಾದ ಸಹಕಾರ ಭಾರತಿಯೊಂದಿಗೆ ಪ್ರಯತ್ನಗಳನ್ನು ನಡೆಸುತ್ತಿದೆ. ಈ ಸಂಬಂಧ ಕೇಂದ್ರ ಹಣಕಾಸು ಸಚಿವರಿಗೆ ಮನವಿಯನ್ನೂ ಸಲ್ಲಿಸಲಾಗಿದೆ’ ಎಂದು ತಿಳಿಸಿದರು. ಜಿಲ್ಲಾ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷ ಸಂಜೀವ ಕುಮಾರ ಪಾಟೀಲ, ನಿರ್ದೇಶಕರಾದ ಜಗನ್ನಾಥ ಕರಂಜೆ, ನಂದಾ ವಿವೇಕಾನಂದ, ಶ್ರೀಕಾಂತ ಸ್ವಾಮಿ, ಸಂಯೋಜಕ ವೀರಶೆಟ್ಟಿ ಕಾಮಣ್ಣ, ಅಮೃತ ಹೊಸಮನಿ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ರಾಜ್ಯದ ಸೌಹಾರ್ದ ಸಹಕಾರಿಗಳು ಆದಾಯ ತೆರಿಗೆ ಕಲಂ 80ಪಿ(2)ರ ಅಡಿಯಲ್ಲಿ ತೆರಿಗೆ ವಿನಾಯಿತಿಗೆ ಅರ್ಹವೆಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ’ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಗುರುನಾಥ ಜ್ಯಾಂತಿಕರ್ ತಿಳಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನ್ಯಾಯಾಲಯದ ತೀರ್ಪಿನಿಂದಾಗಿ ಸಂಯುಕ್ತ ಸೌಹಾರ್ದ ಸಹಕಾರಿಗಳ ಆದಾಯ ತೆರಿಗೆ ತೊಂದರೆಗೆ ಪರಿಹಾರ ದೊರಕಿದೆ’ ಎಂದು ಹೇಳಿದರು.</p>.<p>‘ಈ ಮೊದಲು ಸೌಹಾರ್ದ ಸಹಕಾರಿ ಅಧಿನಿಯಮದ ಅಡಿ ನೋಂದಣಿಯಾದ ಸೌಹಾರ್ದ ಸಹಕಾರಿಗಳನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸಹಕಾರ ಸಂಘಗಳೆಂದು ಪರಿಗಣಿಸಿರಲಿಲ್ಲ. ತೆರಿಗೆ ಪಾವತಿಗೆ ನೋಟಿಸ್ ಕೊಡುತ್ತಿದ್ದರು’ ಎಂದು ತಿಳಿಸಿದರು.</p>.<p>‘ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ಎರಡು ವರ್ಷಗಳಿಂದ ಸಮಸ್ಯೆಯ ಪರಿಹಾರಕ್ಕೆ ನಿರಂತರ ಪ್ರಯತ್ನ ನಡೆಸಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಸೆಳೆದಿತ್ತು. ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿತ್ತು’ ಎಂದು ಹೇಳಿದರು.</p>.<p>‘ಸೌಹಾರ್ದ ಸಹಕಾರ ಕ್ಷೇತ್ರದ ಆದಾಯ ತೆರಿಗೆ ತೊಂದರೆಗಳನ್ನು ನಿವಾರಿಸುವ ದಿಸೆಯಲ್ಲಿಸೌಹಾರ್ದ ಸಹಕಾರಿ ಕಾಯ್ದೆ ತಿದ್ದುಪಡಿಗೂ ಪ್ರಯತ್ನ ನಡೆಸಲಾಗುತ್ತಿದೆ.<br />ಈ ಕುರಿತು ಮುಖ್ಯಮಂತ್ರಿ ಹಾಗೂ ಸಹಕಾರ ಸಚಿವರ ಗಮನ ಸೆಳೆಯಲಾಗಿದೆ. ಸಕಾರಾತ್ಮಕ ಸ್ಪಂದನೆ ದೊರಕಿದೆ. ಈಗಾಗಲೇ ಕಾಯ್ದೆ ತಿದ್ದುಪಡಿ ಪ್ರಕ್ರಿಯೆ ಶುರುವಾಗಿದೆ’ ಎಂದರು.</p>.<p>‘ಸಮಗ್ರ ಸಹಕಾರ ಕ್ಷೇತ್ರದ ಅನೇಕ ಆದಾಯ ತೆರಿಗೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೌಹಾರ್ದ ಸಹಕಾರಿಯು ರಾಷ್ಟ್ರಮಟ್ಟದ ಸಂಸ್ಥೆಯಾದ ಸಹಕಾರ ಭಾರತಿಯೊಂದಿಗೆ ಪ್ರಯತ್ನಗಳನ್ನು ನಡೆಸುತ್ತಿದೆ. ಈ ಸಂಬಂಧ ಕೇಂದ್ರ ಹಣಕಾಸು ಸಚಿವರಿಗೆ ಮನವಿಯನ್ನೂ ಸಲ್ಲಿಸಲಾಗಿದೆ’ ಎಂದು ತಿಳಿಸಿದರು. ಜಿಲ್ಲಾ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷ ಸಂಜೀವ ಕುಮಾರ ಪಾಟೀಲ, ನಿರ್ದೇಶಕರಾದ ಜಗನ್ನಾಥ ಕರಂಜೆ, ನಂದಾ ವಿವೇಕಾನಂದ, ಶ್ರೀಕಾಂತ ಸ್ವಾಮಿ, ಸಂಯೋಜಕ ವೀರಶೆಟ್ಟಿ ಕಾಮಣ್ಣ, ಅಮೃತ ಹೊಸಮನಿ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>