ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಗೆ ಕಿರುಕುಳ: ಶಿಕ್ಷಕನ ಬಂಧನ

Last Updated 13 ಫೆಬ್ರುವರಿ 2020, 8:56 IST
ಅಕ್ಷರ ಗಾತ್ರ

ಕಮಲನಗರ (ಬೀದರ್ ಜಿಲ್ಲೆ): ವಿದ್ಯಾರ್ಥಿನಿಯೊಬ್ಬಳಿಗೆ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಠಾಣಾಕುಶನೂರ ಸರ್ಕಾರಿ ಪಬ್ಲಿಕ್ ಶಾಲೆ ಶಿಕ್ಷಕ ವೀರಕುಮಾರ (48) ಎಂಬಾತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಶಿಕ್ಷಕ ವಾಟ್ಸ್‌ ಆ್ಯಪ್ ಮೂಲಕ ವಿದ್ಯಾರ್ಥಿನಿಗೆ ಅಶ್ಲೀಲ ಪದಗಳಿಂದ ಚಾಟಿಂಗ್ ಮಾಡಿದ್ದಾನೆ.

ಈ ಕುರಿತು ಪಾಲಕರು ನೀಡಿದ ದೂರಿನ ಮೇರೆಗೆ ಶಿಕ್ಷಕ ವೀರಕುಮಾರನನ್ನು ಅಮಾನತು ಮಾಡಲಾಗಿದೆ. ಠಾಣಾಕುಶನೂರ ಪೊಲೀಸರು ದೂರು ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ. ಮಂಜುನಾಥ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT