ಕಮಲನಗರ (ಬೀದರ್ ಜಿಲ್ಲೆ): ವಿದ್ಯಾರ್ಥಿನಿಯೊಬ್ಬಳಿಗೆ ಮೊಬೈಲ್ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಠಾಣಾಕುಶನೂರ ಸರ್ಕಾರಿ ಪಬ್ಲಿಕ್ ಶಾಲೆ ಶಿಕ್ಷಕ ವೀರಕುಮಾರ (48) ಎಂಬಾತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಶಿಕ್ಷಕ ವಾಟ್ಸ್ ಆ್ಯಪ್ ಮೂಲಕ ವಿದ್ಯಾರ್ಥಿನಿಗೆ ಅಶ್ಲೀಲ ಪದಗಳಿಂದ ಚಾಟಿಂಗ್ ಮಾಡಿದ್ದಾನೆ.
ಈ ಕುರಿತು ಪಾಲಕರು ನೀಡಿದ ದೂರಿನ ಮೇರೆಗೆ ಶಿಕ್ಷಕ ವೀರಕುಮಾರನನ್ನು ಅಮಾನತು ಮಾಡಲಾಗಿದೆ. ಠಾಣಾಕುಶನೂರ ಪೊಲೀಸರು ದೂರು ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ. ಮಂಜುನಾಥ ತಿಳಿಸಿದ್ದಾರೆ.