ಹೆಡಗಾಪುರ ಗ್ರಾಮದ ಕುಶಾಲ ಪಾಟೀಲ, ಭಗವಂತ ಖೂಬಾ ಅವರಿಗೆ ಕರೆ ಮಾಡಿ, ‘ಊರಿನಲ್ಲಿ ಗೊಬ್ಬರ ಸಿಗುತ್ತಿಲ್ಲ. ರೈತರು ತೊಂದರೆಯಲ್ಲಿದ್ದಾರೆ. ಇದರಿಂದ ನಿಮ್ಮ ಹೆಸರು ಕೆಡುತ್ತಿದೆ. ಹೀಗಾದರೆ ಮುಂದಿನ ಚುನಾವಣೆಯಲ್ಲಿ ನಿಮಗೆ ಸಮಸ್ಯೆಯಾಗಲಿದೆ’ ಎಂದು ಹೇಳಿದ್ದರು. ಇದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯಿಸಿ, ‘ನಾನು ಕೇಂದ್ರ ಸಚಿವ, ಮನೆ ಮನೆಗೆ ಗೊಬ್ಬರ ಪೂರೈಸಲು ಆಗುವುದೇ’ ಎಂದು ಪ್ರಶ್ನಿಸಿದ್ದರು.