<p><strong>ಹುಮನಾಬಾದ್: ‘</strong>ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದಾಗಿದೆ. ನಿಷ್ಠೆಯಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಸಾಧ್ಯವಾಗಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗೂಡಾಳ್ ಹೇಳಿದರು.</p>.<p>ಪಟ್ಟಣದ ಸರ್ವೋದಯ ಶಿಕ್ಷಣ ಸಂಸ್ಥೆಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ,‘ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವದಿಂದ ಕಾಣಬೇಕು’ ಎಂದರು.</p>.<p>ಸಿಪಿಐ ಶರಣ ಬಸಪ್ಪ ಕೊಡ್ಲಾ ಮಾತನಾಡಿ,‘ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ. ಮಕ್ಕಳ ಸಾಮರ್ಥ್ಯಕ್ಕನುಗುಣವಾಗಿ ಶಿಕ್ಷಕರು ಬೋಧಿಸಿದರೆ ಮಕ್ಕಳ ಕಲಿಕಾ ಮಟ್ಟ ಹೆಚ್ಚುತ್ತದೆ’ ಎಂದು ಹೇಳಿದರು.</p>.<p>ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಬತಲಿ, ಉಪಾಧ್ಯಕ್ಷ ಗುರುಲಿಂಗ ಭಾವಿ, ನವಿನ್ ಬತಲಿ, ಸಂದೀಪ್ ಬತಲಿ ಹಾಗೂ ಶಾಲೆಯ ಪ್ರಾಂಶುಪಾಲ ಶಾಂತವೀರ ಯಲಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: ‘</strong>ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದಾಗಿದೆ. ನಿಷ್ಠೆಯಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಸಾಧ್ಯವಾಗಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗೂಡಾಳ್ ಹೇಳಿದರು.</p>.<p>ಪಟ್ಟಣದ ಸರ್ವೋದಯ ಶಿಕ್ಷಣ ಸಂಸ್ಥೆಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ,‘ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವದಿಂದ ಕಾಣಬೇಕು’ ಎಂದರು.</p>.<p>ಸಿಪಿಐ ಶರಣ ಬಸಪ್ಪ ಕೊಡ್ಲಾ ಮಾತನಾಡಿ,‘ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ. ಮಕ್ಕಳ ಸಾಮರ್ಥ್ಯಕ್ಕನುಗುಣವಾಗಿ ಶಿಕ್ಷಕರು ಬೋಧಿಸಿದರೆ ಮಕ್ಕಳ ಕಲಿಕಾ ಮಟ್ಟ ಹೆಚ್ಚುತ್ತದೆ’ ಎಂದು ಹೇಳಿದರು.</p>.<p>ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಬತಲಿ, ಉಪಾಧ್ಯಕ್ಷ ಗುರುಲಿಂಗ ಭಾವಿ, ನವಿನ್ ಬತಲಿ, ಸಂದೀಪ್ ಬತಲಿ ಹಾಗೂ ಶಾಲೆಯ ಪ್ರಾಂಶುಪಾಲ ಶಾಂತವೀರ ಯಲಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>